ಶಿವಮೊಗ್ಗದ ಹಿರಿಯ ಪತ್ರಕರ್ತ ಭರತ್ ರಾಜ್ ಸಿಂಗ್ ( ಸಿಂಗಣ್ಣ) ನವರು ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ..!

by EDITOR NEWS WARRIORS
0 comments
ಶಿವಮೊಗ್ಗದ ಹಿರಿಯ ಪತ್ರಕರ್ತ, ಶಿವಮೊಗ್ಗ ಟೆಲೆಕ್ಸ್ ಕನ್ನಡ ದಿನಪತ್ರಿಕೆ ಉಪಸಂಪಾದಕರಾದ ಆರ್. ಪಿ ಭರತ್ ರಾಜ್ ಸಿಂಗ್  ೨೦೨೫ ನೇ ಸಾಲಿನ ರಾಜ್ಯ ಸರ್ಕಾರದ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ನಿವೃತ್ತ ಪ್ರಾಂಶುಪಾಲರಾದ  ಪುಟ್ಟುಸಿಂಗ್ ಅವರ ಪುತ್ರರಾದ ಬಿ.ಎ ಪದವೀಧರ ಆರ್. ಪಿ ಭರತ್‌ರಾಜ್‌ಸಿಂಗ್  ಅವರು ಸಾಮಾಜಿಕ ಬದಲಾವಣೆಯ ಚಳವಳಿಯ ಭಾಗವಾಗಿ  ೧೯೮೯ರಲ್ಲಿ  ’ಶಿವಮೊಗ್ಗ ಎಕ್ಸ್ ಪ್ರೆಸ್’ ಕನ್ನಡ ದಿನಪತ್ರಿಕೆಯನ್ನು ಆರಂಭಿಸುವ ಮೂಲಕ ಪತ್ರಿಕೋದ್ಯಮಕ್ಕೆ ಕಾಲಿಟ್ಟರು. ಆರ್ಥಿಕ ಮುಗ್ಗಟ್ಟಿನಿಂದ ಪತ್ರಿಕೆ ಮುನ್ನಡೆಸಲಾಗದೆ ೧೯೯೧ ರಿಂದ  ಸ್ವಾತಂತ್ರ್ಯ ಹೋರಾಟಗಾರರು, ಜನಪರ ಚಳವಳಿಗಾರರು ಆದ ಶ್ರೀನಿವಾಸ್ ಅಯ್ಯಂಗಾರ್ , ಸಿ, ಎಸ್ ಚಂದ್ರಭೂಪಾಲ್ ಅವರ ನೇತೃತ್ವದಲ್ಲಿ ನಡೆಯುತ್ತಿದ್ದ ’ಸಹ್ಯಾದ್ರಿ’ ದಿನಪತ್ರಿಕೆಯ ವರದಿಗಾರರಾಗಿ ಮತ್ತು ಅನೇಕ ರಾಜ್ಯಮಟ್ಟದ ದಿನಪತ್ರಿಕೆಗಳಿಗೆ ವರದಿಗಳನ್ನು ಬರೆಯುತಿದ್ದರು.
೧೯೯೭ ರಿಂದ ಶಿವಮೊಗ್ಗ ಟೆಲೆಕ್ಸ್ ಕನ್ನಡ ದಿನಪತ್ರಿಕೆಯ ಉಪಸಂಪಾದಕರಾಗಿ ಸೇವೆ ಸಲ್ಲಿಸುತ್ತಿರುವ ಆರ್. ಪಿ ಭರತ್ ರಾಜ್ ಸಿಂಗ್  ಪ್ರಾಮಾಣಿಕ, ವೃತ್ತಿಪರ ಪತ್ರಕರ್ತರಾಗಿ  ಸೇವೆ ಸಲ್ಲಿಸುತ್ತಿರುವುದು  ಜಿಲ್ಲೆಯ ಪತ್ರಿಕೋದ್ಯಮದ ಹೆಗ್ಗಳಿಕೆಯಾಗಿದೆ.
ಆರ್. ಪಿ ಭರತ್ ರಾಜ್ ಸಿಂಗ್ ಅವರ ಮೂರುವರೆ ದಶಕಗಳಿಗೂ ಹೆಚ್ಚಿನ ಕಾಲ ಪತ್ರಕರ್ತರಾಗಿ ವೃತ್ತಿಪರತೆ, ಬದ್ದತೆಯಿಂದ ಸಲ್ಲಿಸಿದ ಸೇವೆಯನ್ನು ಗುರುತಿಸಿ ರಾಜ್ಯ ಸರ್ಕಾರದ ಕರ್ನಾಟಕ ಮಾಧ್ಯಮ ಅಕಾಡೆಮಿ ೨೦೨೫ ನೇ ಸಾಲಿನ ವಾರ್ಷಿಕ ಪ್ರಶಸ್ತಿ ಆಯ್ಕೆ ಮಾಡಿದೆ. ಪ್ರಶಸ್ತಿಯು ೫೦ ಸಾವಿರ ರೂ. ನಗದು, ಪ್ರಶಸ್ತಿ ಫಲಕ ಹೊಂದಿರುತ್ತದೆ.ಶಿವಮೊಗ್ಗದ ಹಿರಿಯ ಪತ್ರಕರ್ತ, ಶಿವಮೊಗ್ಗ ಟೆಲೆಕ್ಸ್ ಕನ್ನಡ ದಿನಪತ್ರಿಕೆ ಉಪಸಂಪಾದಕರಾದ ಆರ್. ಪಿ ಭರತ್ ರಾಜ್ ಸಿಂಗ್ ೨೦೨೫ ನೇ ಸಾಲಿನ ರಾಜ್ಯ ಸರ್ಕಾರದ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ನಿವೃತ್ತ ಪ್ರಾಂಶುಪಾಲರಾದ ಪುಟ್ಟುಸಿಂಗ್ ಅವರ ಪುತ್ರರಾದ ಬಿ.ಎ ಪದವೀಧರ ಆರ್. ಪಿ ಭರತ್‌ರಾಜ್‌ಸಿಂಗ್ ಅವರು ಸಾಮಾಜಿಕ ಬದಲಾವಣೆಯ ಚಳವಳಿಯ ಭಾಗವಾಗಿ ೧೯೮೯ರಲ್ಲಿ ’ಶಿವಮೊಗ್ಗ ಎಕ್ಸ್ ಪ್ರೆಸ್’ ಕನ್ನಡ ದಿನಪತ್ರಿಕೆಯನ್ನು ಆರಂಭಿಸುವ ಮೂಲಕ ಪತ್ರಿಕೋದ್ಯಮಕ್ಕೆ ಕಾಲಿಟ್ಟರು. ಆರ್ಥಿಕ ಮುಗ್ಗಟ್ಟಿನಿಂದ ಪತ್ರಿಕೆ ಮುನ್ನಡೆಸಲಾಗದೆ ೧೯೯೧ ರಿಂದ ಸ್ವಾತಂತ್ರ್ಯ ಹೋರಾಟಗಾರರು, ಜನಪರ ಚಳವಳಿಗಾರರು ಆದ ಶ್ರೀನಿವಾಸ್ ಅಯ್ಯಂಗಾರ್ , ಸಿ, ಎಸ್ ಚಂದ್ರಭೂಪಾಲ್ ಅವರ ನೇತೃತ್ವದಲ್ಲಿ ನಡೆಯುತ್ತಿದ್ದ ’ಸಹ್ಯಾದ್ರಿ’ ದಿನಪತ್ರಿಕೆಯ ವರದಿಗಾರರಾಗಿ ಮತ್ತು ಅನೇಕ ರಾಜ್ಯಮಟ್ಟದ ದಿನಪತ್ರಿಕೆಗಳಿಗೆ ವರದಿಗಳನ್ನು ಬರೆಯುತಿದ್ದರು.
೧೯೯೭ ರಿಂದ ಶಿವಮೊಗ್ಗ ಟೆಲೆಕ್ಸ್ ಕನ್ನಡ ದಿನಪತ್ರಿಕೆಯ ಉಪಸಂಪಾದಕರಾಗಿ ಸೇವೆ ಸಲ್ಲಿಸುತ್ತಿರುವ ಆರ್. ಪಿ ಭರತ್ ರಾಜ್ ಸಿಂಗ್ ಪ್ರಾಮಾಣಿಕ, ವೃತ್ತಿಪರ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿರುವುದು ಜಿಲ್ಲೆಯ ಪತ್ರಿಕೋದ್ಯಮದ ಹೆಗ್ಗಳಿಕೆಯಾಗಿದೆ.
ಆರ್. ಪಿ ಭರತ್ ರಾಜ್ ಸಿಂಗ್ ಅವರ ಮೂರುವರೆ ದಶಕಗಳಿಗೂ ಹೆಚ್ಚಿನ ಕಾಲ ಪತ್ರಕರ್ತರಾಗಿ ವೃತ್ತಿಪರತೆ, ಬದ್ದತೆಯಿಂದ ಸಲ್ಲಿಸಿದ ಸೇವೆಯನ್ನು ಗುರುತಿಸಿ ರಾಜ್ಯ ಸರ್ಕಾರದ ಕರ್ನಾಟಕ ಮಾಧ್ಯಮ ಅಕಾಡೆಮಿ ೨೦೨೫ ನೇ ಸಾಲಿನ ವಾರ್ಷಿಕ ಪ್ರಶಸ್ತಿ ಆಯ್ಕೆ ಮಾಡಿದೆ. ಪ್ರಶಸ್ತಿಯು ೫೦ ಸಾವಿರ ರೂ. ನಗದು, ಪ್ರಶಸ್ತಿ ಫಲಕ ಹೊಂದಿರುತ್ತದೆ.
ಕರ್ನಾಟಕ ಮಾಧ್ಯಮ ಪ್ರಶಸ್ತಿ ಅಕಾಡೆಮಿಗೆ ಆಯ್ಕೆಯಾದ ನಮ್ಮೆಲ್ಲರ ಪ್ರೀತಿಯ ಸಿಂಗಣ್ಣನಿಗೆ  ಪತ್ರಿಕೆ ಅಭಿನಂದನೆಯನ್ನು ಸಲ್ಲಿಸುತ್ತದೆ..

Related Articles

Latest news
Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ... ಸರ್ಕಾರದಿಂದ ಬಂದಿರುವ ಕೋಟಿ ಕೋಟಿ ಹಣವನ್ನು ಲೂಟಿ ಮಾಡಲು ಇಳಿದಿರುವ ಪಾಲಿಕೆಯ ಭ್ರಷ್ಟ ಅಧಿಕಾರಿಗಳು..! ಸರ್ಕಾರದಿಂದ ಬಂದಿರುವ ಕೋಟಿ ಕೋಟಿ ಹಣವನ್ನು ಲೂಟಿ ಮಾಡಲು ಇಳಿದಿರುವ ಪಾಲಿಕೆಯ ಭ್ರಷ್ಟ ಅಧಿಕಾರಿಗಳು..! ಅಮೃತ ಯೋಜನೆಯಡಿ ಕೈಗೊಂಡ ರಸ್ತೆ, ಚರಂಡಿ,ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ: ಬಿ.ಬಿ.ಕಾವೇರಿ ..!