151
ಆರ್. ಪಿ ಭರತ್ ರಾಜ್ ಸಿಂಗ್ ಅವರ ಮೂರುವರೆ ದಶಕಗಳಿಗೂ ಹೆಚ್ಚಿನ ಕಾಲ ಪತ್ರಕರ್ತರಾಗಿ ವೃತ್ತಿಪರತೆ, ಬದ್ದತೆಯಿಂದ ಸಲ್ಲಿಸಿದ ಸೇವೆಯನ್ನು ಗುರುತಿಸಿ ರಾಜ್ಯ ಸರ್ಕಾರದ ಕರ್ನಾಟಕ ಮಾಧ್ಯಮ ಅಕಾಡೆಮಿ ೨೦೨೫ ನೇ ಸಾಲಿನ ವಾರ್ಷಿಕ ಪ್ರಶಸ್ತಿ ಆಯ್ಕೆ ಮಾಡಿದೆ. ಪ್ರಶಸ್ತಿಯು ೫೦ ಸಾವಿರ ರೂ. ನಗದು, ಪ್ರಶಸ್ತಿ ಫಲಕ ಹೊಂದಿರುತ್ತದೆ.ಶಿವಮೊಗ್ಗದ ಹಿರಿಯ ಪತ್ರಕರ್ತ, ಶಿವಮೊಗ್ಗ ಟೆಲೆಕ್ಸ್ ಕನ್ನಡ ದಿನಪತ್ರಿಕೆ ಉಪಸಂಪಾದಕರಾದ ಆರ್. ಪಿ ಭರತ್ ರಾಜ್ ಸಿಂಗ್ ೨೦೨೫ ನೇ ಸಾಲಿನ ರಾಜ್ಯ ಸರ್ಕಾರದ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

