315
ಶಿವಮೊಗ್ಗ: ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಡಿ ಎಸ್ ಪಿ ವಿಭಾಗದಲ್ಲಿ ಪಿಎಸ್ಐಯಾಗಿ ಕಾರ್ಯನಿರ್ವಹಿಸುತ್ತಿರುವ ಶಕುಂತಲಾ ಹೆಚ್ಕೆ ಅವರು ಇದೀಗ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.
ಯಾರು ಈ ಶಕುಂತಲಾ..?!

ಕಳೆದ 30 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಕುಂತಲಾ ಅವರು ಮೂಲತಃ ಶಿವಮೊಗ್ಗ ಜಿಲ್ಲೆಯವರಾಗಿದ್ದು ಡಿಪ್ಲೋಮೋ ಇಂಜಿನಿಯರಿಂಗ್ ಪದವೀಧರರಾಗಿದ್ದು ಪತಿ ಕೂಡ ಪೋಲಿಸ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಇಬ್ಬರು ಮಕ್ಕಳನ್ನು ಹೊಂದಿರುವ ತುಂಬು ಕುಟುಂಬ ಶಕುಂತಲಾ ಅವರದ್ದು ದೊಡ್ಡಪೇಟೆ, ತುಂಗಾನಗರ, ಜಯನಗರ, ಸೆನ್ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸಿರುವ ಶಕುಂತಲಾ ಅವರು 2019 ರಿಂದ ಸಬ್ ಇನ್ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದು 2022 ರಲ್ಲಿ ಲಕ್ಷ್ಮಿ ಪ್ರಸಾದ್ ಅವರು ಪೊಲೀಸ್ ವರಿಷ್ಠಾಧಿಕಾರಿಗಳಾಗಿದ್ದ ಸಂದರ್ಭದಲ್ಲಿ ಟ್ರಯಲ್ ಮಾನಿಟರಿಂಗ್ ಸೆಲ್ ಅನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಾರಂಭ ಮಾಡಿ ಮಾಡಿದ್ದರು. ಇದರಲ್ಲಿ ಪಿಎಸ್ಐ ಯಾಗಿ 2022 ರಿಂದ ಶಕುಂತಲಾ ಅವರು ಕಾರ್ಯನಿರ್ವಹಿಸುತ್ತಿದ್ದಾರೆ.
ಏನಿದು ಟ್ರಯಲ್ ಮಾನಿಟರಿಂಗ್ ಸೆಲ್ ಏನಿದರ ಕೆಲಸ..?
