99
ಬೆಂಗಳೂರು: ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಹಾಗೂ ಗಲಭೆ ಹಿಂಸಾತ್ಮಕ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ವ್ಯಕ್ತಿಗಳನ್ನು ಗುರುತಿಸಿ ಬೆಂಗಳೂರು ಪೊಲೀಸ್ ಆಯುಕ್ತರ ಆದೇಶದ ಮೇರೆಗೆ ಉತ್ತರ ಪೂರ್ವದ ಡಿಸಿಪಿ ಮಿಥುನ್ ಕುಮಾರ್ ಜಿ ಕೆ ಅವರು ಪೆರೇಡ್ ನಡೆಸಿದ್ದು ಹಿಂಸಾತ್ಮಕ ಗಲಭೆ ಕೃತ್ಯಗಳಲ್ಲಿ ಭಾಗಿಯಾಗದಂತೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಈಶಾನ್ಯ ವಿಭಾಗದ ಯಲಹಂಕ, ಕೊಡಿಗೇಹಳ್ಳಿ, ಯಲಹಂಕ ಉಪನಗರ ಹಾಗೂ ವಿದ್ಯಾರಣ್ಯಪುರ ಪೊಲೀಸ್ ಠಾಣೆಗಳ ಹಿಂಸಾತ್ಮಕ, ಗಲಭೆ, ಕೃತಿಗಳಲ್ಲಿ ತೊಡಗುವ ವ್ಯಕ್ತಿಗಳಿಗೆ ಹೊಯ್ಸಳ ಗ್ರೌಂಡ್ನಲ್ಲಿ ಪರೇಡ್ ನಡೆಸಲಾಯಿತು.
ಈ ಪರೇಡ್ನಲ್ಲಿ ಚೈನ್ ಸ್ನಾಚಿಂಗ್, ದ್ವಿಚಕ್ರ ವಾಹನ ಕಳ್ಳತನ, ಮನೆ ಕಳ್ಳತನ ಹಾಗೂ NDPS ಕಾಯ್ದೆ ಸಂಬಂಧಿತ ಪ್ರಕರಣಗಳು ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಹಾಜರುಪಡಿಸಲಾಯಿತು.
