479
ತೀರ್ಥಹಳ್ಳಿ : ತಾಲೂಕಿನ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರು, ಹಿರಿಯ ಸಹಕಾರಿಗಳು ಆದ ನಾಬಳ ಶಚಿಂದ್ರ ಹೆಗಡೆ ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ ವ್ಯಕ್ತಿ ಅವರ ಧರ್ಮಪತ್ನಿ ಶ್ರೀಮತಿ ಅಚಲಾ ಅವರು ಕೂಡ ಸಹಕಾರಿ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದರು.
ಕ್ಯಾನ್ಸರ್ ಎನ್ನುವ ಮಹಾಮಾರಿಗೆ ಬಲಿಯಾದ ಅಚಲಾ ಹೆಗ್ಡೆ..!
ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಚಲಾ ಹೆಗ್ಡೆ ಅವರನ್ನು ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ನಿರಂತರ ಚಿಕಿತ್ಸೆಯಲ್ಲಿದ್ದ ಅವರು ನಿನ್ನೆ ತಡರಾತ್ರಿ ನಿಧನರಾಗಿದ್ದಾರೆ.
ಇಂದು ಸಂಜೆ ಪಾರ್ಥಿವ ಶರೀರ ನಾಬಳ ಕ್ಕೆ ..! ನಾಳೆ ಬೆಳಿಗ್ಗೆ ಅಂತ್ಯ ಸಂಸ್ಕಾರ ಸಾಧ್ಯತೆ..!
ಶಾಲಾ ಕಾಲೇಜು ದಿನಗಳಲ್ಲಿ ಅತ್ಯುತ್ತಮ ಆಟಗಾರ್ತಿಯಾಗಿದ್ದ ಅಚಲಾ ಅವರು ಕೋ ಕೋ ಕ್ರೀಡೆಯಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿದ್ದರು ಕೊಡಚಾದ್ರಿ, ಅನಘ, ಮಹಿಳಾ ಸಹಕಾರ ಸಂಘಗಳಲ್ಲಿ ಗುರುತಿಸಿಕೊಂಡಿದ್ದರು. ಎಲ್ಲರೊಂದಿಗೂ ಉತ್ತಮವಾಗಿ ಬೆರೆಯುತ್ತಿದ್ದ ಸರಳ ವ್ಯಕ್ತಿತ್ವದ ಅಚಲಾ ಹೆಗ್ಡೆ ಇಬ್ಬರು ಗಂಡು ಮಕ್ಕಳನ್ನು ಅಪಾರ ಸ್ನೇಹಿತರನ್ನು, ಬಂಧುಗಳನ್ನು ಬಿಟ್ಟು ಅಗಲಿದ್ದಾರೆ.
ನಾಳೆ ಬೆಳಿಗ್ಗೆ 10ಕ್ಕೆ ಮೃತರ ಸ್ವಗೃಹದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ .
