Home ರಾಜ್ಯಗೋವುಗಳ ರಕ್ಷಣೆಗೆ ಸರ್ಕಾರ ಬದ್ಧ ಹಾಗೂ ಸಾಗಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿಕೆ ….

ಗೋವುಗಳ ರಕ್ಷಣೆಗೆ ಸರ್ಕಾರ ಬದ್ಧ ಹಾಗೂ ಸಾಗಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿಕೆ ….

by EDITOR NEWS WARRIORS
1 comment

ಧರ್ಮಸ್ಥಳ: ಮಂಗಳವಾರ >9>ರಾಜ್ಯದಲ್ಲಿ ಗೋವುಗಳ ಹತ್ಯೆ ಮತ್ತು ಅಕ್ರಮ ಸಾಗಾಟವನ್ನು ಸಂಪೂರ್ಣವಾಗಿ ನಿಷೇದಿಸಿದ್ದು, ಇದಕ್ಕೆ ಸಂಬಂದಿಸಿದ ಕಾಯಿದೆಯ್ನನು ಕಟ್ಟು ನಿಟ್ಟಾಗಿ ಜಾರಿಗೆ ತರಲಾಗುವುದು ಎಂದು, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಹೇಳಿದ್ದಾರೆ.

ಪೊಲೀಸ್ ಠಾಣೆಯ ನೂತನ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ “ಅಕ್ರಮ ಗೋವುಗಳ ಸಾಗಾಟ ಮತ್ತು ಹತ್ಯೆಯನ್ನು ತಡೆಗಟ್ಟಲು ರಾಜ್ಯದ ಪೊಲೀಸರು ಕಟ್ಟು ನಿಟ್ಟಿನ ಕ್ರಮ ಜರುಗಿಸಲು ನಿರ್ದೇಶನ ನೀಡಲಾಗಿದೆ” ಎಂದರು.

“ಈ ಹಿಂದೆ ಅಕ್ರಮ ಗೋವುಗಳ ಸಾಗಾಟ ವಿರುದ್ಧ ಸಾರ್ವಜನಿಕರು ಆಕ್ರೋಶಗೊಂಡ ಉದಾಹರಣೆಗಳು ಇದ್ದು, ಇದರಿಂದ ಹಲವು ಬಾರಿ ಸಂಘರ್ಷಕ್ಕೂ ಕಾರಣವಾಗಿದ್ದವು. ಪೊಲೀಸರು, ಗೋವುಗಳ ಹತ್ಯೆ ಮತ್ತು ಅಕ್ರಮ ಸಾಗಾಟ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದರಿಂದ, ಸಾರ್ವಜನಿಕರ ಮಧ್ಯ ಪ್ರವೇಶಕ್ಕೆ ಅವಕಾಶವಿರುವುದಿಲ್ಲ” ಎಂದರು.

ಮತಾಂತರ ತಡೆ ಕಾಯಿದೆ ಕುರಿತು, ಕೇಳಲಾದ ಪ್ರಶ್ನೆಗೆ, ಸಚಿವರು ಉತ್ತರಿಸುತ್ತಾ ” ಈ ಸಂಬಂಧ ಪ್ರಕ್ರಿಯೆಗಳು ನಡೆದಿದೆ, ಹಾಗೂ ಪ್ರಸ್ತುತ ಇರುವ ಕಾಯಿದೆಯನ್ನು ಉಪಯೋಗಿಸಿಕೊಂಡು ಯಾವುದೇ ರೀತಿಯ ಬಲವಂತದ ಅಥವಾ ಆಮಿಷಗಳನ್ನೊಡ್ಡಿ ನಡೆಸಲಾಗುವ ಮತಾಂತರ ಪ್ರಯತ್ನಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು”
ಎಂದರು.

ನಂತರ, ಸಚಿವರು, ಪೊಲೀಸ್ ಠಾಣೆಯ ನೂತನ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡರು, ಧರ್ಮಸ್ಥಳದ ಧರ್ಮಾಧಿಕಾರಿ, ಪೂಜ್ಯ ಶ್ರೀ, ವೀರೇಂದ್ರ ಹೆಗ್ಗಡೆಯವರು, ಸ್ಥಳೀಯ ಶಾಸಕ ಶ್ರೀ ಹರೀಶ್ ಪೂಂಜಾ, ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಇತರರು ಈ ಸಂಧರ್ಭದಲ್ಲಿ ಪಾಲ್ಗೊಂಡಿದ್ದರು.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305/7892830899…

Related Articles

1 comment

Ervinkat August 7, 2025 - 8:50 am

В этом информативном обзоре собраны самые интересные статистические данные и факты, которые помогут лучше понять текущие тренды. Мы представим вам цифры и графики, которые иллюстрируют, как развиваются различные сферы жизни. Эта информация станет отличной основой для глубокого анализа и принятия обоснованных решений.
Получить дополнительные сведения – https://quick-vyvod-iz-zapoya-1.ru/

Reply

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...