Home ರಾಜ್ಯಶಿವಮೊಗ್ಗ ಪತ್ರಕರ್ತರಾದ ನಾಗರಾಜ್ ಗೆ ‌ ರಾಷ್ಟ್ರೀಯ ಪ್ರಶಸ್ತಿ ಗರಿ….

ಶಿವಮೊಗ್ಗ ಪತ್ರಕರ್ತರಾದ ನಾಗರಾಜ್ ಗೆ ‌ ರಾಷ್ಟ್ರೀಯ ಪ್ರಶಸ್ತಿ ಗರಿ….

by EDITOR NEWS WARRIORS
0 comments

ಆತ್ಮೀಯ ಸ್ನೇಹಿತ,ಪತ್ರಕರ್ತರಾದ ನಾಗರಾಜ್ ಅವರಿಗೆ ನಿರಂತರವಾಗಿ ತಮ್ಮ ಛಾಯಾಗ್ರಹಣಕ್ಕೆ ಪ್ರಶಸ್ತಿಗಳು ಲಭಿಸಿವೆ. ಈಗ ಅದಕ್ಕೆ ಮತ್ತೊಂದು ಸೇರ್ಪಡೆ ರಾಷ್ಟ್ರೀಯ ಪ್ರಶಸ್ತಿ ಸೇರಿಕೊಂಡಿದೆ. ಛಾಯಾಗ್ರಾಹಕರಾಗಿ ಅನೇಕ ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಶಿವಮೊಗ್ಗ ಪತ್ರಿಕಾ ರಂಗದಲ್ಲಿ ತನ್ನದೇ ಆದ ಸ್ನೇಹ ಬಳಗವನ್ನು ಹೊಂದಿರುವ ನಡೆನುಡಿಯಿಂದ ಎಲ್ಲರ ಪ್ರೀತಿಗೆ ಪಾತ್ರರಾಗಿರುವ ಶಿವಮೊಗ್ಗ ನಾಗರಾಜ್ ಹವ್ಯಾಸಿ ಮತ್ತು ಅಮೆಚ್ಯುರ್ ಫೋಟೋಗ್ರಾಫರ್ ಸಹ ಆಗಿದ್ದಾರೆ .

ಇತ್ತೀಚೆಗೆ ಪುಣೆಯ ದಿ.ಫೋಟೋಗ್ರಾಫಿಕ್ ಸೊಸೈಟಿ ವತಿಯಿಂದ ಆಯೋಜಿಸಲಾಗಿದ್ದ ಫೋಟೋಗ್ರಫಿ ರಾಷ್ಟ್ರೀಯ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನವನ್ನು ಪಡೆದು ಬೆಳ್ಳಿ ಪದಕವನ್ನು ಗಳಿಸಿರುತ್ತಾರೆ .ಶಿವಮೊಗ್ಗ ಪತ್ರಕರ್ತರ ಸಮುದಾಯಕ್ಕೆ ಇದೊಂದು ಹೆಮ್ಮೆಯ ಸಂಗತಿಯಾಗಿದೆ .

ಶಿವಮೊಗ್ಗ ನಾಗರಾಜ್ ರವರು ಈ ಹಿಂದೆ ಅನೇಕ ರಾಷ್ಟ್ರೀಯ ಫೋಟೋಗ್ರಫಿ ಸ್ಪರ್ಧೆಯಲ್ಲಿ ಭಾಗವಹಿಸಿ ನ್ಯೂಯಾರ್ಕ್, ಬಾಂಗ್ಲಾದೇಶ ,ಮೆಸಿಡೊನಿಯ,ಶ್ರೀಲಂಕಾ ಮುಂತಾದ ದೇಶಗಳಲ್ಲಿ ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾಗವಹಿಸಿ ಹತ್ತಾರು ಪ್ರಶಸ್ತಿಗಳನ್ನು ಪಡೆದು ಪದಕಗಳನ್ನು ಗಳಿಸಿರುತ್ತಾರೆ .

ಇವರು ಶ್ರವಣಬೆಳಗೊಳದ ಮಹಾಮಸ್ತಕಾಭಿಷೇಕದ ಸಮಯದಲ್ಲಿ ತೆಗೆದಂತಹ ಫೋಟೋ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರವಾಗಿತ್ತು .ಹತ್ತಾರು ಪ್ರಾಣಿ, ಪಕ್ಷಿಗಳ ವಿಭಿನ್ನ ದೃಷ್ಟಿಯ ಫೋಟೋಗಳನ್ನು ಕ್ಲಿಕ್ಕಿಸಿದ ಕೀರ್ತಿ ಇವರದು .

ಕೊರೋನಾ ಭೀಕರ ರೋಗ ಹರಡುತ್ತಿರುವ ಸಮಯದಲ್ಲಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯ ಎದುರು ರೋಗಿಯು ಓರ್ವರನ್ನು ಆಸ್ಪತ್ರೆಗೆ ತೆಗೆದುಕೊಂಡು ಹೋಗುವ ಸಮಯದಲ್ಲಿ ಪೋಷಕರ ಮತ್ತು ರೋಗಿಯ ಸಂಬಂಧಿಕರ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳ ದುಗುಡ ಹಾಗೂ ರೋಗಿಯ ಕಾಪಾಡಲು ಶ್ರಮಿಸುತ್ತಿರುವ ದೃಶ್ಯವನ್ನು ಕ್ಲಿಕ್ಕಿಸಿದ ಕೀರ್ತಿ ಫೋಟೋಗ್ರಫಿ ಸ್ಪರ್ಧೆ ಯಲ್ಲಿ ಬಹುಮಾನ ಗಳಿಸುವಲ್ಲೂ ಮುಖ್ಯ ಪಾತ್ರ ವಹಿಸಿತ್ತು . ಉತ್ತಮ ಛಾಯಾಗ್ರಾಹಕ ಪ್ರಶಸ್ತಿಗೆ ಪಾತ್ರರಾಗಿದ್ದರು.

ನಾಗರಾಜ್ ಅವರಿಗೆ ನ್ಯೂಸ್ ವಾರಿಯರ್ಸ್ ‌ಪತ್ರಿಕಾ ತಂಡದ ವತಿಯಿಂದ ಅಭಿನಂದನೆಗಳು ನಿಮಗೆ ಇನ್ನಷ್ಟು ಪ್ರಶಸ್ತಿಗಳು ಲಭಿಸಲಿ.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305/7862830899…

Related Articles

Leave a Comment

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!