Home ರಾಷ್ಟ್ರೀಯಸಂಸದರು, ಸಚಿವರಿಂದ ಕೇಂದ್ರ ಸಚಿವರ ಭೇಟಿ ಕಸ್ತೂರಿ ರಂಗನ್ ವರದಿಯ ಅನುಷ್ಠಾನದಿಂದ ಆಗುವ ಸಮಸ್ಯೆಗಳು ಹಾಗೂ ಮಾರ್ಪಾಡಿನ ಬಗ್ಗೆ ಚರ್ಚೆ ಹಾಗೂ ಮನವಿ ಪತ್ರದಲ್ಲೇನಿದೆ…!

ಸಂಸದರು, ಸಚಿವರಿಂದ ಕೇಂದ್ರ ಸಚಿವರ ಭೇಟಿ ಕಸ್ತೂರಿ ರಂಗನ್ ವರದಿಯ ಅನುಷ್ಠಾನದಿಂದ ಆಗುವ ಸಮಸ್ಯೆಗಳು ಹಾಗೂ ಮಾರ್ಪಾಡಿನ ಬಗ್ಗೆ ಚರ್ಚೆ ಹಾಗೂ ಮನವಿ ಪತ್ರದಲ್ಲೇನಿದೆ…!

by EDITOR NEWS WARRIORS
1 comment

ಇಂದು ನವದೆಹಲಿಯಲ್ಲಿ ಕೇಂದ್ರ ಅರಣ್ಯ ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವರಾದ ಭೂಪೇಂದ್ರ ಯಾದವ್ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ,ವೈ ರಾಘವೇಂದ್ರ, ಕರ್ನಾಟಕ ಸರ್ಕಾರದ ಅರಣ್ಯ ಸಚಿವರಾದ ಆನಂದ್ ಸಿಂಗ್, ಗೃಹ ಸಚಿವರಾದ ಆರಗ ಜ್ಞಾನೇಂದ್ರ, ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪ ಒಳಗೊಂಡ ನಿಯೋಗ ಭೇಟಿ ಮಾಡಿ ಕಸ್ತೂರಿ ರಂಗನ್ ವರದಿ ಅನುಷ್ಠಾನದಿಂದ ಆಗುವ ಸಮಸ್ಯೆಗಳ ಬಗ್ಗೆ ಹಾಗೂ ನಿರ್ಬಂಧಗಳನ್ನು ಸಡಿಲಗೊಳಿಸುವ ಅಂತೆ ಚರ್ಚೆ ಮಾಡಿ ಈ ಕೆಳಕಂಡಂತೆ ಮಾರ್ಪಾಡುಗಳನ್ನು ಮಾಡಬೇಕೆಂದು ಮನವಿ ಸಲ್ಲಿಸಿದರು.

ಮನವಿ ಪತ್ರದಲ್ಲಿ ಏನಿದೆ?

#ಕಸ್ತೂರಿರಂಗನ್ ವರದಿ ಪ್ರಕಾರ ಕರ್ನಾಟಕ ರಾಜ್ಯದಲ್ಲಿ ಪ್ರಸ್ತಾಪಿಸಲಾದ ಪರಿಸರ ಸೂಕ್ಷ್ಮ ಪ್ರದೇಶ ಅಡಿಯಲ್ಲಿ 1543 ಗ್ರಾಮಗಳು ಬರುತ್ತವೆ. ಅದರಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಂದಾಜು 500 ಗ್ರಾಮಗಳು ಬರುತ್ತವೆ.

#ಪಶ್ಚಿಮ ಘಟ್ಟದ ಕಾಡಿನ ಗ್ರಾಮಗಳಲ್ಲಿ ಹಾಗೂ ಕಾಡಂಚಿನ ಗ್ರಾಮಗಳಲ್ಲಿ ವಾಸಿಸುತ್ತಿರುವ ಜನರು ಪ್ರಕೃತಿ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಯ ಮನೋಭಾವ ಹೊಂದಿ ಸಂರಕ್ಷಿಸುತ್ತಿರುವ ಕಾರಣದಿಂದಲೇ ಸುಮಾರು 60 ಪರ್ಸೆಂಟ್ ಭೂಪ್ರದೇಶವು ಸಮೃದ್ಧ ಅರಣ್ಯವಾಗಿದೆ.

#ಆದ್ದರಿಂದ ವರದಿಯಲ್ಲಿ ಇರುವಂತೆ ಗ್ರಾಮಗಳನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಗುರುತಿಸಿರುವ ಗ್ರಾಮಗಳನ್ನು ಹೊರತುಪಡಿಸಿ ಸಂಪೂರ್ಣ ಶರಣೆ ಪ್ರದೇಶ ಮತ್ತು ಅರಣ್ಯ ಸಂರಕ್ಷಿತ ಪ್ರದೇಶಗಳಲ್ಲಿ ಮಾತ್ರ ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಬೇಕು ಎಂದು ಕೋರಿದರು.

#ವರದಿಯಂತೆ, ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯಲ್ಲಿ 5 ರಿಂದ 10 ಕಿಲೋಮೀಟರ್ ವರೆಗಿನ ಪ್ರದೇಶವನ್ನು ಬಫರ್ ಜೋನ್ ಎಂಬುದಾಗಿ ಘೋಷಿಸಿರುವುದರಿಂದ ಜನಸಾಮಾನ್ಯರಿಗೆ ತೊಂದರೆಯಾಗುವುದಷ್ಟೇ ಅಲ್ಲದೆ, ರಾಜ್ಯ ಸರ್ಕಾರದ ವತಿಯಿಂದ ಭೂಪ್ರದೇಶದಲ್ಲಿ ಯಾವುದೇ ರೀತಿಯ ಉದ್ಯೋಗ ಚಟುವಟಿಕೆಗಳನ್ನು ನಡೆಸಲು ಸಾಧ್ಯವಾಗುವುದಿಲ್ಲ ಆದುದರಿಂದ ಅದನ್ನು ಸಂಪೂರ್ಣವಾಗಿ ಪ್ರಸ್ತಾವನೆಯಿಂದ ಕೈಬಿಡಬೇಕು.

#ಜನರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದರಿಂದ ಕರ್ನಾಟಕ ರಾಜ್ಯ ಸಚಿವ ಸಂಪುಟವು ಕಸ್ತೂರಿ ರಂಗನ್ ವರದಿಯ ಅನುಷ್ಠಾನವನ್ನು ತಿರಸ್ಕರಿಸಿದೆ.

#ಕರ್ನಾಟಕ ರಾಜ್ಯ ಸರ್ಕಾರವು ವಿಭಿನ್ನ ನಿಲುವು ವ್ಯಕ್ತಪಡಿಸಿದ್ದರಿಂದ ಗ್ರಾಮಗಳಲ್ಲಿ ಪರಿಸ್ಥಿತಿ ಅಧ್ಯಯನ ಮಾಡಲು, ಪ್ರತಿ ಗ್ರಾಮಗಳ ಜನರಿಂದ ದೂರುಗಳನ್ನು ಸ್ವೀಕರಿಸಿ ಅವರ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರದ ಅಧಿಕಾರಿಗಳನ್ನೊಳಗೊಂಡ ಟಾಸ್ಕ್ ಫೋರ್ಸ್ ಅಥವಾ ಕಾರ್ಯಪಡೆ ರಚಿಸಲು ಕೇಂದ್ರ ಸಚಿವರಲ್ಲಿ ವಿನಂತಿಸಿದರು.

#ತಮ್ಮ ಸಲಹೆಗಳನ್ನು ಕಸ್ತೂರಿರಂಗನ್ ರವದ ಕರಡು ವರದಿಯಲ್ಲಿ ಅಳವಡಿಸಿಕೊಂಡು ಸಾರ್ವಜನಿಕರಿಗೆ ಆಗುವ ತೊಂದರೆಯನ್ನು ತಪ್ಪಿಸಬೇಕೆಂದು ಕೋರಿದರು.

ಮೇಲ್ಕಂಡಂತೆ ಸಲ್ಲಿಸಿದ ಮನವಿಯನ್ನು ಸ್ವೀಕರಿಸಿದ ಕೇಂದ್ರ ಸಚಿವರಾದ ಭೂಪೇಂದ್ರ ಯಾದವ್ ಅವರು ಈ ಬಗ್ಗೆ ಸೂಕ್ತ ನಿರ್ಣಯ ಕೈಗೊಳ್ಳುವುದಾಗಿ ನಿಯೋಗಕ್ಕೆ ಭರವಸೆ ನೀಡಿದರು.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305/7892830899…

Related Articles

1 comment

Kevinshags September 17, 2025 - 2:27 am

Предлагаем вашему вниманию интересную справочную статью, в которой собраны ключевые моменты и нюансы по актуальным вопросам. Эта информация будет полезна как для профессионалов, так и для тех, кто только начинает изучать тему. Узнайте ответы на важные вопросы и расширьте свои знания!
Получить больше информации – https://quick-vyvod-iz-zapoya-1.ru/

Reply

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...