Home ಶಿವಮೊಗ್ಗತೀರ್ಥಹಳ್ಳಿ: ಹೊನ್ನೆತಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಡಿವೈಎಸ್ಪಿ ಶಾಂತ್ ವೀರ್ ಬೇಟಿ..!

ತೀರ್ಥಹಳ್ಳಿ: ಹೊನ್ನೆತಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಡಿವೈಎಸ್ಪಿ ಶಾಂತ್ ವೀರ್ ಬೇಟಿ..!

by EDITOR NEWS WARRIORS
0 comments


ತೀರ್ಥಹಳ್ಳಿ: ತಾಲೂಕಿನ ಆಗುಂಬೆ ಸಮೀಪದ ಹೊನ್ನೇತಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಅನಿರೀಕ್ಷಿತವಾಗಿ ತಮ್ಮ ಬಿಡುವಿಲ್ಲದ ಕೆಲಸದ ನಡುವಿನಲ್ಲಿಯೂ ತೀರ್ಥಹಳ್ಳಿ ಡಿವೈಎಸ್ಪಿ ಶಾಂತ್ ವೀರ್ ಭೇಟಿ ಮಾಡಿ ಶಾಲಾ ಮಕ್ಕಳೊಂದಿಗೆ ಭಾಗಿಯಾದರು.

ಈ ಸಮಯದಲ್ಲಿ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸಲು ರಸಪ್ರಶ್ನೆ ಕಾರ್ಯಕ್ರಮ ನಡೆಸಿದರು…
ಹಾಗೆಯೇ ಮಕ್ಕಳೊಂದಿಗೆ ಮುಂದಿನ ಜೀವನದ ಗುರಿಯ ಬಗ್ಗೆ ಸಂವಾದ ನಡೆಸಿದರು.

ಮಕ್ಕಳಿಗೆ ತರಗತಿ ತೆಗೆದುಕೊಂಡ ಡಿವೈಎಸ್ಪಿ:

ಮಕ್ಕಳಿಗೆ ತರಗತಿ ತೆಗೆದುಕೊಂಡು ಪ್ರಸ್ತುತ ಕಲಿಕೆಯ ಬಗ್ಗೆ ಮಾಹಿತಿ ತಿಳಿಸಿದರು.

ಡಿವೈಎಸ್ಪಿ ಗೆ ಸಾಥ್ ನೀಡಿದ ಆಗುಂಬೆ ಪಿಎಸ್ಐ:

ಇವರೊಂದಿಗೆ ಆಗುಂಬೆ ಠಾಣಾ PSI ಶಿವಕುಮಾರ್ ಇವರು ಭಾಗವಹಿಸಿ ಮಕ್ಕಳಿಗೆ ಪ್ರಚಲಿತ ವಿದ್ಯಮಾನಗಳ ಬಗೆಗೆ ತಿಳಿಸಿ ಜೊತೆಗೆ IAS,IPS,KES,PSI ಹುದ್ದೆಗಳ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿ ಉತ್ತಮ ಸಮಾಜದ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರಾ ಹಾಗೂ ಜವಾಬ್ಧಾರಿ ಬಗ್ಗೆ ಪ್ರೇರಣೆ ನೀಡಿದರು .

ಮಕ್ಕಳೊಂದಿಗೆ ಮಧ್ಯಾಹ್ನದ ಬಿಸಿ ಊಟ ಸವಿದ ಡಿವೈಎಸ್ಪಿ:

ಮಕ್ಕಳೊಂದಿಗೆ ಒಟ್ಟಿಗೆ ಕುಳಿತು ಮಧ್ಯಾಹ್ನ ಬಿಸಿಯೂಟ ಸವಿದು ಗ್ರಾಮೀಣ ಪ್ರದೇಶದಲ್ಲಿ ನಮ್ಮ ಶಾಲಾ ಕಲಿಕೆ ವಾತಾವರಣ ನೋಡಿ ಸರ್ಕಾರಿ ಶಾಲೆಯ ಮಾದರಿಯ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಮಕ್ಕಳಿಗೆ ರಸಪ್ರಶ್ನೆ ಸ್ಪರ್ಧೆಯ ಬಹುಮಾನ ನೀಡಿ ಪತಿನಿತ್ಯ ಶಾಲೆಯಲ್ಲಿ ಈ ಚಟುವಟಿಕೆ ನಡೆಸಲು ತಿಳಿಸಿ ಮಕ್ಕಳಿಗೆ ಸಿಹಿ ಹಂಚಿ ಶುಭ ಹಾರೈಸಿದರು.

ಗೃಹಸಚಿವರ ತವರೂರಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಈ ಮಾದರಿ ನಡೆಯನ್ನು ಗ್ರಾಮಸ್ಥರು ಶ್ಲಾಘಿಸಿದರು. ಈ ಸಮಯದಲ್ಲಿ ಶಿಕ್ಷಕರು ಮತ್ತು ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಪೊಲೀಸ್ ಇಲಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದರು…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...