Home ಶಿವಮೊಗ್ಗಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊನ್ನೇತಾಳು ಶಾಲಾ ಪ್ರಾರಂಭೋತ್ಸವ ಮಕ್ಕಳ ಕಲರವ ..!!

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊನ್ನೇತಾಳು ಶಾಲಾ ಪ್ರಾರಂಭೋತ್ಸವ ಮಕ್ಕಳ ಕಲರವ ..!!

by EDITOR NEWS WARRIORS
0 comments


ತೀರ್ಥಹಳ್ಳಿ :ತಾಲ್ಲೂಕಿನ ಪ್ರತಿಷ್ಟಿತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊನ್ನೇತಾಳು ಇಲ್ಲಿ 2022-23ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಇಂದು ನಡೆಯಿತು.


2022-23ನೇ ಸಾಲಿನ ಕಲಿಕಾ ಚೇತರಿಕೆ ಕಲಿಕಾ ವರ್ಷವಾಗಿ ಸರ್ಕಾರ ಘೋಷಿಸಿರುವ ಹಿನ್ನಲೆಯಲ್ಲಿ ಆರಂಭದ ದಿನದಲ್ಲೇ
ವಿದ್ಯಾರ್ಥಿಗಳಿಗೆ ವಿಶಿಷ್ಟವಾಗಿ ಆರತಿಯನ್ನು ಬೆಳಗಿ ಪುಷ್ಪಾರ್ಚನೆ ಮಾಡುವುದರ ಮೂಲಕ ಶಾಲಾ ಶಿಕ್ಷಕರು, ಎಸ್.ಡಿ.ಎಂ.ಸಿ ತಂಡವು ಆತ್ಮೀಯವಾಗಿ ಬರಮಾಡಿಕೊಂಡರು. ಮುಖ್ಯ ಶಿಕ್ಷಕರಾದ ಶ್ರೀಮತಿ ಸುರೇಖಾ ಡಿ ಶೇಟ್ ರವರು ಹಾಜರಿದ್ದ ಎಲ್ಲರನ್ನು ಸ್ವಾಗತಿಸಿದರು.


ಕಲಿಕಾ ಚೇತರಿಕೆ ವರ್ಷದ ಕಾರ್ಯಕ್ರಮದ ಉದ್ದೇಶದ ಬಗ್ಗೆ ಶಿಕ್ಷಕರಾದ ಶ್ರೀಮತಿ ಅಶ್ವಿನಿ ರವರು ಮಾತನಾಡಿ, ಶಾಲಾ ಪ್ರಾರಂಭೋತ್ಸವ ಹಾಗೂ ಸರ್ಕಾರದ ವಿವಿಧ ಶೈಕ್ಷಣಿಕ ಯೋಜನೆಯ ಕುರಿತು ಪೋಷಕರಿಗೆ ಮನವರಿಕೆ ಮಾಡಿಕೊಟ್ಟರು.
ಹೊನ್ನೇತಾಳು ಗ್ರಾಮ ಪಂಚಾಯತಿ ಸದಸ್ಯರಾದ ರಾಘವೇಂದ್ರ ಅವರು ಮಾತನಾಡಿ ಶಾಲಾ ಅಭಿವೃದ್ಧಿ ಹಾಗೂ ದಾಖಲಾತಿ ಹೆಚ್ಚುತ್ತಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿ, ನಮ್ಮ ಶಾಲೆ ಹಾಗೂ ವಿದ್ಯಾರ್ಥಿಗಳು ಉನ್ನತ ಮಟ್ಟದಲ್ಲಿ ಹೆಸರು ಮಾಡಲಿ ಎಂದು ಹಾರೈಸಿದರು.


7ನೇ ತರಗತಿ ವಿದ್ಯಾರ್ಥಿಗಳು ಸವಿನೆನಪಿಗಾಗಿ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಅವರ ಭಾವಚಿತ್ರವನ್ನ ಉಡುಗೊರೆಯಾಗಿ ನೀಡಿದರು. ಬೆಂಗಳೂರಿನ ಕ್ವೆಸ್ ಕಾರ್ಪ್ ಲಿ‌ ಉದ್ಯೋಗಿಯಾದ ಮಧು ನರಸಿಂಹ ಅವರು LKG,UKG ಮಕ್ಕಳಿಗೆ ನೋಟ್ ಬುಕ್ ಮತ್ತು ಪಠ್ಯ ಪುಸ್ತಕವನ್ನು ಕೊಡುಗೆಯಾಗಿ ನೀಡಿರುವುದನ್ನು ಈ ದಿನ ವಿತರಿಸಲಾಯಿತು.

ಬೆಂಗಳೂರಿನ ಶ್ರೀಮತಿ ಅನ್ನಪೂರ್ಣ ಅವರು ಕೊಡುಗೆಯಾಗಿ ನೀಡಿದ ಬ್ಯಾಗನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಬ್ಯಾಗ್ ಕೊಡುಗೆಯಾಗಿ ನೀಡಲು ಸಹಕರಿಸಿದ ಶ್ರೀಮತಿ ವಿದ್ಯಾಬಳ್ಳಕರ್ ಹಾಗು ಮಧುಸೂದನ್ ಶುಕ್ಲ ಅವರ ಸಹಕಾರವನ್ನು ಸ್ಮರಿಸಲಾಯಿತು‌.


ಈ ಸಂದರ್ಭದಲ್ಲಿ SDMC ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತು ಪೋಷಕರು, ಶಿಕ್ಷಕರುಗಳು ಹಾಗೂ ವಿದ್ಯಾರ್ಥಿಗಳು ಅತ್ಯಂತ ಸಂತೋಷದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಶಾಲಾ ಪ್ರಾರಂಭೋತ್ಸವಕ್ಕೆ ಮೆರುಗನ್ನು ನೀಡಿದರು.

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...