Home ಶಿವಮೊಗ್ಗಶಿವಮೊಗ್ಗ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು ತುಂಗಾ ಜಲಾಶಯ ಭರ್ತಿ ಹೊರ ಹರಿವು ಹೆಚ್ಚಳ..! ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ..!!

ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು ತುಂಗಾ ಜಲಾಶಯ ಭರ್ತಿ ಹೊರ ಹರಿವು ಹೆಚ್ಚಳ..! ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ..!!

by EDITOR NEWS WARRIORS
0 comments

ಶಿವಮೊಗ್ಗ, :: ಶಿವಮೊಗ್ಗದಲ್ಲಿ ಮನೆಯಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜಿಲ್ಲೆಯ ಪ್ರಮುಖ ಜಲಾಶಯಗಳ ಹೊರ ಹರಿವು ಹೆಚ್ಚಳವಾಗಿದ್ದು.


ಜಲಾಶಯಗಳಲ್ಲಿ ನೀರಿನ ಮಟ್ಟ ಕೆಳಗಿನಂತಿದೆ:


ಲಿಂಗನಮಕ್ಕಿ ಜಲಾಶಯಕ್ಕೆ 11,125 ಕ್ಯೂಸೆಕ್ ಒಳಹರಿವು ಇದೆ. ಜಲಾಶಯದ ಗರಿಷ್ಠ ಮಟ್ಟ 1819 ಅಡಿ. ಪ್ರಸ್ತುತ 1763.65 ಅಡಿಯಷ್ಟು ನೀರಿದೆ. ಕಳೆದ 24 ಗಂಟೆ ಅವಧಿಯಲ್ಲಿ ಲಿಂಗನಮಕ್ಕಿ ಜಲಾಶಯ ವ್ಯಾಪ್ತಿಯಲ್ಲಿ 54.2 ಮಿ.ಮೀ ಮಳೆಯಾಗಿದೆ. ಭದ್ರಾ ಜಲಾಶಯಕ್ಕೆ 7799 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ಡ್ಯಾಂನ ಗರಿಷ್ಠ ಮಟ್ಟ 186 ಅಡಿ. ಪ್ರಸ್ತುತ 149.7 ಅಡಿಯಷ್ಟು ನೀರಿದೆ. ತುಂಗಾ ಜಲಾಶಯ ಗರಿಷ್ಠ ಮಟ್ಟ ತಲುಪಿದೆ. ಆದ್ದರಿಂದ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ. ಜಲಾಶಯಕ್ಕೆ ಸದ್ಯ 11,976 ಕ್ಯೂಸೆಕ್ ಒಳ ಹರಿವು ಇದೆ. ಅಷ್ಟೆ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ. ಮಾಣಿ ಡ್ಯಾಂನಲ್ಲಿ 380 ಕ್ಯೂಸೆಕ್ ಒಳಹರಿವು ಇದೆ. 390 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ಪಿಕಪ್ ಡ್ಯಾಂನಲ್ಲಿ 671 ಕ್ಯೂಸೆಕ್ ಒಳಹರಿವು ದಾಖಲಾಗಿದೆ.

ಜಿಲ್ಲೆಯ ವಿವಿಧ ಕಡೆ ನೂರು ಮಿ.ಮೀಗಿಂತಲೂ ಹೆಚ್ಚು ಮಳೆಯಾಗಿರುವ ವರದಿಯಾಗಿದೆ:

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ನಿನ್ನೆಯಿಂದ ಭಾರಿ ಮಳೆಯಾಗುತ್ತಿದ್ದು. ನಿರಂತರ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ಬೆಳೆ ಹಾನಿ ಉಂಟಾಗಿದೆ. ಕೆಲವು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನೂರು ಮಿ.ಮೀ ಗಿಂತಲು ಹೆಚ್ಚಾದ ವರದಿ ಬಂದಿದ್ದು.

ವಿವಿಧ ಕಡೆ ಮಳೆಯ ಪ್ರಮಾಣದ ವಿವರ ಈ ಕೆಳಗಿನಂತಿದೆ:


ಶಿವಮೊಗ್ಗ ನಗರದಲ್ಲಿ 124 ಮಿ.ಮೀ, ಶಿವಮೊಗ್ಗದ ಮದ್ದಿನಕೊಪ್ಪದಲ್ಲಿ 125 ಮಿ.ಮೀ, ಅಗಸವಳ್ಳಿಯಲ್ಲಿ 127 ಮಿ.ಮೀ, ಕೋಟೆಗಂಗೂರು 125 ಮಿ.ಮೀ, ಮಲ್ಲಾಪುರದಲ್ಲಿ 124 ಮಿ.ಮೀ, ಆಯನೂರಿನಲ್ಲಿ 126 ಮಿ.ಮೀ, ಪುರದಾಳುವಿನಲ್ಲಿ 128 ಮಿ.ಮೀ, ಬಾಳೆಕೊಪ್ಪ 125 ಮಿ.ಮೀ ಮಳೆಯಾಗಿದೆ. ಭದ್ರಾವತಿ ತಾಲೂಕು ದಾಸರಕಲ್ಲಹಳ್ಳಿಯಲ್ಲಿ 124 ಮಿ.ಮೀ. ಶಿಕಾರಿಪುರದ ಅಂಜನಾಪುರದಲ್ಲಿ 125 ಮಿ.ಮೀ, ಹಾರೋಗೊಪ್ಪದಲ್ಲಿ 125 ಮಿ.ಮೀ ಮಳೆ ಸುರಿದಿದೆ. ತೀರ್ಥಹಳ್ಳಿಯ ಅಗ್ರಹಾರದಲ್ಲಿ 124 ಮಿ.ಮೀ, ತ್ರಿಯಂಬಕಪುರ 128 ಮಿ.ಮೀ, ದೇಮ್ಲಾಪುರ 124 ಮಿ.ಮೀ, ಹಾದಿಗಲ್ಲು 127 ಮಿ.ಮೀ ಮಳೆಯಾಗಿದೆ.ಅಪಾಯದ ಮಟ್ಟ ಮಿತಿಮೀರಿದೆ…

ರಘುರಾಜ್ ಹೆಚ್. ಕೆ….

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305..

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...