Home ಶಿವಮೊಗ್ಗಗುರುಮೂರ್ತಿ ಕೃಪಾಕಟಾಕ್ಷದಿಂದ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಮಾತೃ ಇಲಾಖೆಗೆ ತೆರಳುವ ಬಗ್ಗೆ ಸರ್ಕಾರದ ಆದೇಶವಿದ್ದರೂ ಇನ್ನೂ ಮಲೆನಾಡು ಅಭಿವೃದ್ಧಿ ಮಂಡಳಿ ಕಾರ್ಯದರ್ಶಿಯಾಗಿಯೇ ಮುಂದುವರಿಕೆ – ಸರ್ಕಾರದ ಆದೇಶಕ್ಕೆ ಕಿಮ್ಮತ್ತೆ ಇಲ್ಲ..!!

ಗುರುಮೂರ್ತಿ ಕೃಪಾಕಟಾಕ್ಷದಿಂದ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಮಾತೃ ಇಲಾಖೆಗೆ ತೆರಳುವ ಬಗ್ಗೆ ಸರ್ಕಾರದ ಆದೇಶವಿದ್ದರೂ ಇನ್ನೂ ಮಲೆನಾಡು ಅಭಿವೃದ್ಧಿ ಮಂಡಳಿ ಕಾರ್ಯದರ್ಶಿಯಾಗಿಯೇ ಮುಂದುವರಿಕೆ – ಸರ್ಕಾರದ ಆದೇಶಕ್ಕೆ ಕಿಮ್ಮತ್ತೆ ಇಲ್ಲ..!!

by EDITOR NEWS WARRIORS
0 comments

ಶಿವಮೊಗ್ಗ :- ಶಿವಮೊಗ್ಗ ಜಿಲ್ಲಾ ಮಲೆನಾಡು ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿಯಾಗಿ ಸರ್ಕಾರ ಐಎಎಸ್ – ಐಪಿಎಸ್ ಅಧಿಕಾರಿಗಳನ್ನೇ ನೇಮಿಸುವಂತೆ ಸರಕಾರದ ಆದೇಶವಿದ್ದರೂ ಸರ್ಕಾರದ ಆದೇಶ ಉಲ್ಲಂಘನೆ ಮಾಡಿ ಶಿಕ್ಷಣ ಇಲಾಖೆಯ ಶ್ರೀ ಕೆ. ಎಸ್. ಮಣಿ ರವರನ್ನು ಮಲೆನಾಡು ಅಭಿವೃದ್ಧಿ ಮಂಡಳಿಗೆ ಕಾರ್ಯದರ್ಶಿಯನ್ನಾಗಿ ನಿಯೋಜನೆ ಹಿಂದೇ ಹತ್ತು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಕರ್ನಾಟಕ ಸರ್ಕಾರದ ಸಚಿವಾಲಯ, ಬಹು ಮಹಡಿಗಳ ಕಟ್ಟಡ ಬೆಂಗಳೂರು ಕಛೇರಿ ಪತ್ರ ಸಂಖ್ಯೆ :- ಇ ಪಿ 104 ಎಸ್ ಟಿ ಬಿ 2022 ದಿನಾಂಕ 18-04-2022 ಉಲ್ಲೇಖದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯಡಿಯಲ್ಲಿ ಬರುವ ಅಧೀನ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ/ ಶಿಕ್ಷಕರು / ಕಚೇರಿ ಸಿಬ್ಬಂದಿಯನ್ನೂ ಹಿಂಪಡೆದು, ಸೂಕ್ತ ಸ್ಥಳ ನಿಯುಕ್ತಿಗೊಳಿಸುವಂತೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರ ಟಿಪ್ಪಣಿ ಸಂಖ್ಯೆ ಪ್ರಾ. ಪ್ರೌ. ಸ. ಸ /270/21-22 ದಿನಾಂಕ 23.03.2022 ರ ಮಾನ್ಯ ಸಚಿವರ ಟಿಪ್ಪಣಿ ಮೇರೆಗೆ ಶ್ರೀ ಶರಣಪ್ಪ ಸರಕಾರದ ಕಾರ್ಯದರ್ಶಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ (ಸಾಮಾನ್ಯ) ರವರ ಆದೇಶಕ್ಕೆ ಕಿಮ್ಮತ್ತು ನೀಡದೇ ಮಾತೃ ಇಲಾಖೆಯಾದ ಶಿಕ್ಷಣ ಇಲಾಖೆಗೆ ಕರ್ತವ್ಯಕ್ಕಾಗಿ ತೆರಳದ ಶ್ರೀ ಕೆ. ಎಸ್. ಮಣಿ ಹಾಲಿ ಕಾರ್ಯದರ್ಶಿ ಮಲೆನಾಡು ಅಭಿವೃದ್ಧಿ ಮಂಡಳಿ ಯಲ್ಲೇ ಕರ್ತವ್ಯ ನಿರ್ವಹಿಸುತ್ತಿರುವ ಹಿಂದೇ ಗುರುಮೂರ್ತಿ ಅಧ್ಯಕ್ಷರು ಮಲೆನಾಡು ಅಭಿವೃದ್ಧಿ ಮಂಡಳಿ ರವರ ಕೃಪಾಕಟಾಕ್ಷವಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆ ಟಿಪ್ಪಣಿಗಳು ಹರಿದಾಡುತ್ತಿದೆ.

ಸರಕಾರದ ಆದೇಶಕ್ಕೆ ಕಿಮ್ಮತ್ತು ನೀಡದ ಕರ್ತವ್ಯ ಲೋಪವೆಸಗಿರುವ ಕೆ. ಎಸ್. ಮಣಿ ಹಾಲಿ ಕಾರ್ಯದರ್ಶಿ ಮಲೆನಾಡು ಅಭಿವೃದ್ಧಿ ಮಂಡಳಿ ವಿರುದ್ದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರುಗಳು ಹಾಗೂ ಸರ್ಕಾರದ ಆದೇಶ ಹೊರಡಿಸಿದ ಶ್ರೀ ಶರಣಪ್ಪ ಸರ್ಕಾರದ ಅಧೀನ ಕಾರ್ಯದರ್ಶಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ (ಸಾಮಾನ್ಯ ) ರವರು ಕೂಡಲೇ ಆದೇಶ ಉಲ್ಲಂಘನೆ ಮಾಡಿರುವ ಕೆ. ಎಸ್. ಮಣಿ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಶಿವಮೊಗ್ಗ ಜಿಲ್ಲಾ ಪ್ರಜ್ಞಾವಂತರು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಮನವಿ ಮಾಡಿದ್ದಾರೆ ..

ಓಂಕಾರ ಎಸ್. ವಿ. ತಾಳಗುಪ್ಪ….

####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...