
ಶಿವಮೊಗ್ಗ :- ಶಿವಮೊಗ್ಗ ಜಿಲ್ಲಾ ಮಲೆನಾಡು ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿಯಾಗಿ ಸರ್ಕಾರ ಐಎಎಸ್ – ಐಪಿಎಸ್ ಅಧಿಕಾರಿಗಳನ್ನೇ ನೇಮಿಸುವಂತೆ ಸರಕಾರದ ಆದೇಶವಿದ್ದರೂ ಸರ್ಕಾರದ ಆದೇಶ ಉಲ್ಲಂಘನೆ ಮಾಡಿ ಶಿಕ್ಷಣ ಇಲಾಖೆಯ ಶ್ರೀ ಕೆ. ಎಸ್. ಮಣಿ ರವರನ್ನು ಮಲೆನಾಡು ಅಭಿವೃದ್ಧಿ ಮಂಡಳಿಗೆ ಕಾರ್ಯದರ್ಶಿಯನ್ನಾಗಿ ನಿಯೋಜನೆ ಹಿಂದೇ ಹತ್ತು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಕರ್ನಾಟಕ ಸರ್ಕಾರದ ಸಚಿವಾಲಯ, ಬಹು ಮಹಡಿಗಳ ಕಟ್ಟಡ ಬೆಂಗಳೂರು ಕಛೇರಿ ಪತ್ರ ಸಂಖ್ಯೆ :- ಇ ಪಿ 104 ಎಸ್ ಟಿ ಬಿ 2022 ದಿನಾಂಕ 18-04-2022 ಉಲ್ಲೇಖದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯಡಿಯಲ್ಲಿ ಬರುವ ಅಧೀನ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ/ ಶಿಕ್ಷಕರು / ಕಚೇರಿ ಸಿಬ್ಬಂದಿಯನ್ನೂ ಹಿಂಪಡೆದು, ಸೂಕ್ತ ಸ್ಥಳ ನಿಯುಕ್ತಿಗೊಳಿಸುವಂತೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರ ಟಿಪ್ಪಣಿ ಸಂಖ್ಯೆ ಪ್ರಾ. ಪ್ರೌ. ಸ. ಸ /270/21-22 ದಿನಾಂಕ 23.03.2022 ರ ಮಾನ್ಯ ಸಚಿವರ ಟಿಪ್ಪಣಿ ಮೇರೆಗೆ ಶ್ರೀ ಶರಣಪ್ಪ ಸರಕಾರದ ಕಾರ್ಯದರ್ಶಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ (ಸಾಮಾನ್ಯ) ರವರ ಆದೇಶಕ್ಕೆ ಕಿಮ್ಮತ್ತು ನೀಡದೇ ಮಾತೃ ಇಲಾಖೆಯಾದ ಶಿಕ್ಷಣ ಇಲಾಖೆಗೆ ಕರ್ತವ್ಯಕ್ಕಾಗಿ ತೆರಳದ ಶ್ರೀ ಕೆ. ಎಸ್. ಮಣಿ ಹಾಲಿ ಕಾರ್ಯದರ್ಶಿ ಮಲೆನಾಡು ಅಭಿವೃದ್ಧಿ ಮಂಡಳಿ ಯಲ್ಲೇ ಕರ್ತವ್ಯ ನಿರ್ವಹಿಸುತ್ತಿರುವ ಹಿಂದೇ ಗುರುಮೂರ್ತಿ ಅಧ್ಯಕ್ಷರು ಮಲೆನಾಡು ಅಭಿವೃದ್ಧಿ ಮಂಡಳಿ ರವರ ಕೃಪಾಕಟಾಕ್ಷವಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆ ಟಿಪ್ಪಣಿಗಳು ಹರಿದಾಡುತ್ತಿದೆ.
ಸರಕಾರದ ಆದೇಶಕ್ಕೆ ಕಿಮ್ಮತ್ತು ನೀಡದ ಕರ್ತವ್ಯ ಲೋಪವೆಸಗಿರುವ ಕೆ. ಎಸ್. ಮಣಿ ಹಾಲಿ ಕಾರ್ಯದರ್ಶಿ ಮಲೆನಾಡು ಅಭಿವೃದ್ಧಿ ಮಂಡಳಿ ವಿರುದ್ದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರುಗಳು ಹಾಗೂ ಸರ್ಕಾರದ ಆದೇಶ ಹೊರಡಿಸಿದ ಶ್ರೀ ಶರಣಪ್ಪ ಸರ್ಕಾರದ ಅಧೀನ ಕಾರ್ಯದರ್ಶಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ (ಸಾಮಾನ್ಯ ) ರವರು ಕೂಡಲೇ ಆದೇಶ ಉಲ್ಲಂಘನೆ ಮಾಡಿರುವ ಕೆ. ಎಸ್. ಮಣಿ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಶಿವಮೊಗ್ಗ ಜಿಲ್ಲಾ ಪ್ರಜ್ಞಾವಂತರು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಮನವಿ ಮಾಡಿದ್ದಾರೆ ..
ಓಂಕಾರ ಎಸ್. ವಿ. ತಾಳಗುಪ್ಪ….
####################################
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

