Home ಶಿವಮೊಗ್ಗದೇವಸ್ಥಾನ ಹುಂಡಿಗೆ ಕನ್ನ ಹಾಕಿದ ಇಬ್ಬರು ಖದೀಮರ ಬಂಧನ – ಹತ್ತು ಲಕ್ಷ ಮೌಲ್ಯದ ಚಿನ್ನಾಭರಣ ವಶ..!!

ದೇವಸ್ಥಾನ ಹುಂಡಿಗೆ ಕನ್ನ ಹಾಕಿದ ಇಬ್ಬರು ಖದೀಮರ ಬಂಧನ – ಹತ್ತು ಲಕ್ಷ ಮೌಲ್ಯದ ಚಿನ್ನಾಭರಣ ವಶ..!!

by EDITOR NEWS WARRIORS
2 comments

ಭದ್ರಾವತಿ : ಕುಮರಿ ನಾರಾಯಣಪುರ ಗ್ರಾಮದ ಚೌಡಮ್ಮ ದೇವಸ್ಥಾನದ ಹುಂಡಿಗೆ ಕನ್ನ ಹಾಕಿದ ಇಬ್ಬರನ್ನು ಸೋಮವಾರ ಬಂಧಿಸಲಾಗಿದೆ.


ಭದ್ರಾವತಿಯ ಹೊಸಮನೆ ನಿವಾಸಿ ವಸಂತರಾಜು ಅಲಿಯಾಸ್ ವಸಂತ(37), ಬೇಡರ ಹೊಸಳ್ಳಿಯ ಶ್ವೇತಾ ಅಲಿಯಾಸ್ ಆಸ್ಮಾ(32) ಬಂಧಿತರು.


ಚೌಡಮ್ಮ ದೇವಸ್ಥಾನದ ಬಾಗಿಲಿನ ಬೀಗವನ್ನು ಮುರಿದು ಒಳಗಡೆ ಇದ್ದ ಕಾಣಿಕೆ ಹುಂಡಿಯನ್ನು ಒಡೆದು ಅದರಲ್ಲಿದ್ದ ಅಂದಾಜು 20,000 ರಿಂದ 30,000 ನಗದು ಹಣವನ್ನು ಕಳ್ಳತನ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ಪಿಐ ನೇತೃತ್ವದ ತಂಡ ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಬಂಧಿಸಲಾಗಿದೆ.


ಘಟನೆಯ ಹಿನ್ನಲೆ:


ಜೂನ್ 13ರಂದು ಗ್ರಾಮಾಂತರ ಠಾಣೆಯ ಸಿಬ್ಬಂದಿಗಳಾದ ನಾಗರಾಜ್ ಎಂ,ಆದರ್ಶ್ ಜಿ ,ಉದಯ್ ಕುಮಾರ್ ಹೆಚ್ ಕೆ ಜಂಕ್ಷನ್ ಬಳಿ ವಿಶೇಷ ಗಸ್ತಿನಲ್ಲಿದ್ದಾಗ ವಸಂತ್ ಎಂಬುವವನು ಅನುಮಾನಸ್ಪದವಾಗಿ ತಿರುಗಾಡುತ್ತಿದ್ದದನ್ನು ಕಂಡು ವಶಕ್ಕೆ ಪಡೆದು ಪಿಐ ಮುಂದೆ ಹಾಜರು ಪಡಿಸಿದ್ದಾರೆ.ನಂತರ ಕೂಲಂಕುಷವಾಗಿ ವಿಚಾರಣೆ ನಡೆಸಿದಾಗ ಕಳ್ಳತನ ಮಾಡಿರುವುದನ್ನು ಬಾಯಿ ಬಿಟ್ಟಿದ್ದಾನೆ.


110 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿಯ ಆಭರಣ ಸೀಜ್:
ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯ 1 ದೇವಸ್ಥಾನ ಕಳ್ಳತನ ಪ್ರಕರಣ, ಪೇಪರ್ ಟೌನ್ ಪೊಲೀಸ್ ಠಾಣೆ ಮತ್ತು ಹೊಳೆಹೊನ್ನೂರು ಪೊಲೀಸ್ ಠಾಣೆಯ 2 ಹಗಲು ಮನೆಗಳ್ಳತನ ಪ್ರಕರಣಗಳಿಗೆ ಸಂಬಂಧಿಸಿದ ಅಂದಾಜು 10,25,000 ಒಟ್ಟು 220 ಗ್ರಾಂ ತೂಕದ ಬಂಗಾರದ ಆಭರಣಗಳು ಮತ್ತು 132 ಗ್ರಾಂ ತೂಕದ ಬೆಳ್ಳಿಯ ಆಭರಣಗಳು ಮತ್ತು 5000/- ನಗದು ಹಣವನ್ನು ವಶಕ್ಕೆ ಪಡೆಯಲಾಗಿದೆ.


ಈ ಕಾರ್ಯಾಚರಣೆಯನ್ನು ಎಸ್ಪಿ ಲಕ್ಷ್ಮಿಪ್ರಸಾದ್ ,ಎಎಸ್ಪಿ ವಿಕ್ರಂ ಆಮ್ಟೆ dysp ಜಿತೇಂದ್ರ ಕುಮಾರ್ ಮಾರ್ಗದರ್ಶನದಲ್ಲಿ ಭದ್ರಾವತಿ ಗ್ರಾಮಾಂತರ ಪಿಐ ಗುರುರಾಜ್,ಸಿಬ್ಬಂದಿಗಳಾದ ನಾಗರಾಜ್ ಎಂ,ಆದರ್ಶ್ ಜಿ,ಉದಯ್ ಕುಮಾರ್ ,ಶಿವಪ್ಪ ಎಂ ಹೆಚ್,ವಿನಾಯಕ ಜಗದೀಶ್ ಪ್ರಕಾಶ್ ಜಿ ಕೆ,ಗಿರೀಶ್ ನಾಯ್ಕ,ಮತ್ತು ಪ್ರಭು ಪಾಲ್ಗೊಂಡಿದ್ದರು.

ಓಂಕಾರ ಎಸ್. ವಿ. ತಾಳಗುಪ್ಪ

####################################

ರಘುರಾಜ್ ಹೆಚ್.ಕೆ…9449553305….

Related Articles

2 comments

Eugenelet August 19, 2025 - 7:43 pm

Этот информативный текст отличается привлекательным содержанием и актуальными данными. Мы предлагаем читателям взглянуть на привычные вещи под новым углом, предоставляя интересный и доступный материал. Получите удовольствие от чтения и расширьте кругозор!
Выяснить больше – https://quick-vyvod-iz-zapoya-1.ru/

Reply
mitolyn January 27, 2026 - 2:57 pm

**mitolyn**

Mitolyn is a carefully developed, plant-based formula created to help support metabolic efficiency and encourage healthy, lasting weight management.

Reply

Leave a Comment

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...