Home ಶಿವಮೊಗ್ಗಶಿವಮೊಗ್ಗ ಜಿಲ್ಲೆಯ ಹಿರಿಯ ಕೈಗಾರಿಕೋದ್ಯಮಿ, ವಾಣಿಜ್ಯ ಮತ್ತು ಸಾಂಸ್ಕೃತಿಕ ರಾಯಭಾರಿ ಎಂದೇ ಖ್ಯಾತರಾದ ಜಿಲ್ಲೆಗೆ ಅಪಾರ ಕೊಡುಗೆ ನೀಡಿದ ಎಂ. ಭಾರಧ್ವಾಜ್(89) ಅವರು ಇಂದು ಸಂಜೆ ವಯೋಸಹಜ ಅನಾರೋಗ್ಯದಿಂದ ನಿಧನ..! ನಾಳೆ ಭಾರತೀಯ ವಿದ್ಯಾಭವನ ಶಾಲೆಗೆ ರಜಾ ಘೋಷಣೆ..!!

ಶಿವಮೊಗ್ಗ ಜಿಲ್ಲೆಯ ಹಿರಿಯ ಕೈಗಾರಿಕೋದ್ಯಮಿ, ವಾಣಿಜ್ಯ ಮತ್ತು ಸಾಂಸ್ಕೃತಿಕ ರಾಯಭಾರಿ ಎಂದೇ ಖ್ಯಾತರಾದ ಜಿಲ್ಲೆಗೆ ಅಪಾರ ಕೊಡುಗೆ ನೀಡಿದ ಎಂ. ಭಾರಧ್ವಾಜ್(89) ಅವರು ಇಂದು ಸಂಜೆ ವಯೋಸಹಜ ಅನಾರೋಗ್ಯದಿಂದ ನಿಧನ..! ನಾಳೆ ಭಾರತೀಯ ವಿದ್ಯಾಭವನ ಶಾಲೆಗೆ ರಜಾ ಘೋಷಣೆ..!!

by EDITOR NEWS WARRIORS
0 comments


ಶಿವಮೊಗ್ಗ: ನಗರದಲ್ಲಿ ಪಾಫ್ಯುಲರ್ ಸೈಕಲ್ ಮಾರ್ಟ್ ಸ್ಥಾಪಿಸಿ ಹೀರೋ ಸೈಕಲ್ ಮತ್ತು ಹೀರೋಹೋಂಡಾ ಮೋಟಾರ್ ಬೈಕ್ ಗಳ ಮಾರಾಟಗಾರರಾಗಿ, ಹೆಸರಾಂತ ಉದ್ಯಮಿಯಾಗಿ ಶಿವಮೊಗ್ಗದ ಅನೇಕ ಸಂಘ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರು ಮತ್ತು ಪದಾಧಿಕಾರಿಗಳಾಗಿ ಸೇವೆ ಸಲ್ಲಿಸಿ ಜನಪ್ರಿಯರಾಗಿದ್ದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷರಾಗಿ 1988 ರಿಂದ 10 ವರ್ಷಗಳ ಕಾಲ ಕಾರ್ಯನಿರ್ವಹಿಸಿ ಜಿಲ್ಲೆಯ ಮಾಚೇನಹಳ್ಳಿ ಕೈಗಾರಿಕಾ ವಸಾಹತು ಸ್ಥಾಪನೆ ಹಾಗೂ ರೈಲ್ವೇ ಅಭಿವೃದ್ಧಿಗೆ ದುಡಿದಿದ್ದರು.

ರೋಟರಿ ಶಿವಮೊಗ್ಗ, ವಿದ್ಯಾಭಾರತಿ ಟ್ರಸ್ಟ್, ತಾಲೂಕು ಬ್ರಾಹ್ಮಣ ಮಹಾಸಭಾ ಅಧ್ಯಕ್ಷರು, ಎಜುಕೇರ್ ಸಂಸ್ಥಾಪಕ ಅಧ್ಯಕ್ಷರು, ಆಟೋಮೊಬೈಲ್ ಡೀಲರ್ಸ್ ಅಸೋಸೊಯೇಷನ್ ಗೌರವಾಧ್ಯಕ್ಷರಾಗಿ, ರೈಲ್ವೇ ಸಲಹಾ ಸಮಿತಿ ಸದಸ್ಯರಾಗಿ, ಭಾರತೀಯ ವಿದ್ಯಾಭವನದ ಶಿವಮೊಗ್ಗ ಶಾಖೆ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.


ತಮ್ಮ ತಂದೆ ದೊರೆಸ್ವಾಮಿ ಅಯ್ಯಂಗಾರ್ ಸ್ಮರಣಾರ್ಥ ದೊರೆಸ್ವಾಮಿ ಅಯ್ಯಂಗಾರ್ ಟ್ರಸ್ಟ್ ಸ್ಥಾಪಿಸಿ ಭಾರತದ ಸಂಗೀತ ದಿಗ್ಗಜರನ್ನು ಶಿವಮೊಗ್ಗಕ್ಕೆ ಕರೆತಂದು ಸಂಗೀತದ ರಸದೌತಣ ಉಣಬಡಿಸಿದ ಕೀರ್ತಿ ಭಾರಧ್ವಾಜ್ ಅವರಿಗೆ ಸಲ್ಲುತ್ತದೆ. ಶಿವಮೊಗ್ಗದ ಸಾಮಾಜಿಕ ಮತ್ತು ಸಾಂಸ್ಕೃತಿಕ ವಲಯದಲ್ಲಿ ತಮ್ಮದೇ ವಿಶಿಷ್ಟ ಛಾಪನ್ನು ಮೂಡಿಸಿದ್ದ ಪಾಪ್ಯುಲರ್ ಸೈಕಲ್ ಶಾಪ್ ಭಾರಧ್ವಾಜ್ ಎಂದೇ ಪ್ರಸಿದ್ಧರಾದ ಇವರು ಅನೇಕ ಸಂಘ ಸಂಸ್ಥೆಗಳ ಪೋಷಕರಾಗಿ, ದಾನಿಯಾಗಿ ಚಿರಪರಿಚಿತರಾಗಿದ್ದರು.

ಬ್ರಾಹ್ಮಣ ಮಹಾಸಭಾದ ಪದಾಧಿಕಾರಿಯಾಗಿ ತಮ್ಮ ಇಳಿವಯಸ್ಸಿನಲ್ಲೂ ಯುವಕರನ್ನು ನಾಚಿಸುವಂತೆ ಸಂಘ, ಸಂಸ್ಥೆಗಳ ಅಭಿವೃದ್ಧಿಗೆ ಶ್ರಮಿಸಿದ್ದರು.
ಶ್ರೀರಾಮ ಸೇವಾ ಮಂಡಳಿ, ಶ್ರೀ ವಿದ್ಯಾ ಗಣಪತಿ ಸೇವಾ ಸಂಸ್ಥೆ, ಕರ್ನಾಟಕ ಸಂಘ ಮೊದಲಾದ ಸಾಂಸ್ಕೃತಿಕ ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಶಿವಮೊಗ್ಗೆಯ ಸಾಂಸ್ಕೃತಿಕ ರಾಯಭಾರಿಯಾಗಿ ಅನೇಕ ಕೊಡುಗೆ ನೀಡಿದ್ದರು. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷರಾಗಿ ಸರ್ಕಾರ ಮತ್ತು ಅಭಿವೃದ್ಧಿ ಯೋಜನೆಗಳ ಜಾರಿಗೆ ಕೊಂಡಿಯಾಗಿ ಕಾರ್ಯನಿರ್ವಹಿಸಿದ್ದರು.

ಇಂದು ಬೆಳಗ್ಗೆ ಕೂಡ 8 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದರು. ಸರಳ ಸಜ್ಜನರು ಹಾಗೂ ಸದಾ ಚಟುವಟಿಕೆಯ ವ್ಯಕ್ತಿತ್ವ ಹೊಂದಿದ್ದವರಾಗಿದ್ದರು. ಕಿರಿಯರಿಗೆ ಮಾರ್ಗದರ್ಶನ ನೀಡುತ್ತಿದ್ದರು. ಜಿಲ್ಲೆಯ ಪ್ರಮುಖ ರಾಜಕಾರಣಿಗಳೊಂದಿಗೆ ಅವರು ಒಡನಾಟ ಹೊಂದಿದ್ದರು.
ಪತ್ನಿ ಹಾಗೂ ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದು, ಅವರ ನಿಧನಕ್ಕೆ ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ಅನೇಕ ಸಂಘ, ಸಂಸ್ಥೆಗಳು, ಜಿಲ್ಲಾ ಬ್ರಾಹ್ಮಣ ಮಹಾಸಭಾ ತೀವ್ರ ಸಂತಾಪ ವ್ಯಕ್ತಪಡಿಸಿವೆ. ಜೂ. 22 ಬುಧವಾರ ಬೆಳಗ್ಗೆ 10 ಗಂಟೆಗೆ ರೋಟರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ರಘುರಾಜ್ ಹೆಚ್.ಕೆ…9449553305….

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...