Home ರಾಷ್ಟ್ರೀಯಭಾರತೀಯ ಜನತಾ ಪಕ್ಷದ (ಏನ್. ಡಿ. ಎ ಒಕ್ಕೂಟ ) ರಾಷ್ಟ್ರಪತಿ ಚುನಾವಣೆಗೆ ಅಧಿಕೃತ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ರವರ ಅಚ್ಚರಿ ಆಯ್ಕೆ..! ರಾಷ್ಟ್ರಪತಿ ಯಾಗುವುದು ಬಹುತೇಕ ಖಚಿತ..!!

ಭಾರತೀಯ ಜನತಾ ಪಕ್ಷದ (ಏನ್. ಡಿ. ಎ ಒಕ್ಕೂಟ ) ರಾಷ್ಟ್ರಪತಿ ಚುನಾವಣೆಗೆ ಅಧಿಕೃತ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ರವರ ಅಚ್ಚರಿ ಆಯ್ಕೆ..! ರಾಷ್ಟ್ರಪತಿ ಯಾಗುವುದು ಬಹುತೇಕ ಖಚಿತ..!!

by EDITOR NEWS WARRIORS
0 comments

ನವದೆಹಲಿ :- ಬಹು ನಿರೀಕ್ಷಿತ ರಾಷ್ಟ್ರಪತಿ ಚುನಾವಣೆಗೆ ಏನ್ ಡಿ ಎ ಅಭ್ಯರ್ಥಿಯಾಗಿ ಬಿಜೆಪಿ ಜಾರ್ಖಂಡ ನ ಮಾಜಿ ರಾಜ್ಯಪಾಲರಾದ ದ್ರೌಪದಿ ಮುರ್ಮು ಅವರನ್ನು ಆಯ್ಕೆ ಮಾಡಿದೆ.

20 ಹೆಸರುಗಳನ್ನು ಚರ್ಚಿಸಿದ ನಂತರ ಏನ್ ಡಿ ಎ ಈ ನಿರ್ಧಾರವನ್ನೂ ಕೈಗೆತ್ತಿಕೊಂಡಿದೆ. ಈ ನಡುವೆ ಬುಡಕಟ್ಟು ಮಹಿಳೆಯನ್ನೂ ಆಯ್ಕೆ ಮಾಡುವುದು ಸಾಮಾನ್ಯ ಒಮ್ಮತವಾಗಿತ್ತು ಎಂದು ಬಿಜೆಪಿ ಮುಖ್ಯಸ್ಥ ಜೆ. ಪಿ. ನಡ್ದಾ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ದೇಶದ ರಾಷ್ಟ್ರಪತಿ ಚುನಾವಣೆಗೆ ಅಚ್ಚರಿಯ ಬೆಳವಣಿಗೆಯಲ್ಲಿ ಬಿಜೆಪಿ ನೇತೃತ್ವದ ಎನ್‌.ಡಿ.ಎ. ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರನ್ನು ಹೆಸರಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಘೋಷಿಸಿದ್ದಾರೆ.
ವಿಪಕ್ಷಗಳ ಮೈತ್ರಿಕೂಟ ಯಶವಂತ್ ಸಿನ್ಹಾ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದು, ಇದರ ಬೆನ್ನಲ್ಲೇ ಎನ್ ಡಿಎ ಮೈತ್ರಿಕೂಟದಿಂದ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಲಾಗಿದೆ.
ಆದಿವಾಸಿ ಮಹಿಳೆಯಾಗಿರುವ ದ್ರೌಪದಿ ಅವರು ಎನ್‌.ಡಿ.ಎ. ಕಡೆಯಿಂದ ರಾಷ್ಟ್ರಪತಿ ಅಭ್ಯರ್ಥಿಯಾಗಿದ್ದಾರೆ. ಪ್ರಥಮ ಬಾರಿಗೆ ಬುಡಕಟ್ಟು ಮಹಿಳಾ ಅಭ್ಯರ್ಥಿಗೆ ಆದ್ಯತೆ ನೀಡಲಾಗಿದೆ. ಮುಂಬರುವ ರಾಷ್ಟ್ರಪತಿ ಚುನಾವಣೆಗೆ ದ್ರೌಪದಿ ಮುರ್ಮು ಅವರನ್ನು ಎನ್‌ಡಿಎ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ.

ದ್ರೌಪದಿ ಮುರ್ಮು ಶಿಕ್ಷಕಿಯಾಗಿ ಕೆಲಸ ಮಾಡಿದ್ದಾರೆ. ಕೌನ್ಸಿಲರ್ ಆದ ನಂತರ ಶಾಸಕಿಯಾದರು. ಸರ್ವೆಪಲ್ಲಿ ರಾಧಾಕೃಷ್ಣನ್ ಅವರಂತೆ ದ್ರೌಪದಿ ಮುರ್ಮು ಅವರು ಶಿಕ್ಷಣ ಕ್ಷೇತ್ರದೊಂದಿಗೆ ಬಹಳ ಕಾಲ ನಂಟು ಹೊಂದಿದ್ದು, ಸುದೀರ್ಘ ಕಾಲ ಶಾಸಕರಾಗಿ, ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅವರು ಒಡಿಶಾ ಸರ್ಕಾರದ ಸಾರಿಗೆ ಮತ್ತು ವಾಣಿಜ್ಯ ಖಾತೆಗಳನ್ನು ನಿರ್ವಹಿಸಿದ್ದಾರೆ. 2007 ರಲ್ಲಿ ಶಾಸಕರಾಗಿ ನೀಲಕಂಠ ಪ್ರಶಸ್ತಿಯನ್ನು ಪಡೆದಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ

#####################################

ರಘುರಾಜ್ ಹೆಚ್.ಕೆ…9449553305…

Related Articles

Leave a Comment

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!