Home ರಾಜ್ಯಸನಾತನದ ಗುರುಪೂರ್ಣಿಮೆಯ ನಿಮಿತ್ತ ಮಹಿಳಾ ಸ್ವ-ಸಹಾಯ ಸಂಗಾತಿ ಸಂಘದ 25 ನೇ ವಾರ್ಷಿಕೋತ್ಸವದಲ್ಲಿ ಧರ್ಮ ಜಾಗೃತಿ ಪ್ರವಚನ..!!

ಸನಾತನದ ಗುರುಪೂರ್ಣಿಮೆಯ ನಿಮಿತ್ತ ಮಹಿಳಾ ಸ್ವ-ಸಹಾಯ ಸಂಗಾತಿ ಸಂಘದ 25 ನೇ ವಾರ್ಷಿಕೋತ್ಸವದಲ್ಲಿ ಧರ್ಮ ಜಾಗೃತಿ ಪ್ರವಚನ..!!

by EDITOR NEWS WARRIORS
2 comments

ಬೆಂಗಳೂರಿನ ಜಯನಗರದ ‘ಸಂಗಾತಿ ಸಂಘ’ ಮಹಿಳಾ ಸ್ವ-ಸಹಾಯ ಸಂಘದ 25 ನೇ ವಾರ್ಷಿಕೋತ್ಸವದ ನಿಮಿತ್ತ ಸನಾತನ ಸಂಸ್ಥೆಯ ವತಿಯಿಂದ ಗುರುಪೂರ್ಣಿಮೆ ಮಹತ್ವದ ಪ್ರವಚನವನ್ನು ನೀಡಲಾಯಿತು, 250 ಕ್ಕೂ ಹೆಚ್ಚಿನ ಸದಸ್ಯರು ಉಪಸ್ಥಿತರಿದ್ದು ಈ ಪ್ರವಚನದ ಲಾಭ ಪಡೆದುಕೊಂಡರು.

ಈ ಸಂದರ್ಭದಲ್ಲಿ ಸನಾತನ ಸಂಸ್ಥೆಯ ಶ್ರೀಮತಿ ಧನಲಕ್ಷ್ಮೀ ವಿ.ಕೆ ಇವರು ಮಾತನಾಡಿ, ಆಷಾಢ ಹುಣ್ಣಿಮೆಯಂದು ಗುರುಪೂರ್ಣಿಮೆ ಮಹೋತ್ಸವವನ್ನು ಎಲ್ಲೆಡೆ ಆಚರಿಸಲಾಗುತ್ತದೆ. ವರ್ಷಾದ್ಯಂತ ಪ್ರತಿಯೊಬ್ಬ ಗುರುಗಳು ತಮ್ಮ ಭಕ್ತರಿಗೆ ಅಧ್ಯಾತ್ಮದ ಬೋಧಾಮೃತವನ್ನು ನೀಡುತ್ತಿರುತ್ತಾರೆ. ಆ ಗುರುಗಳ ಬಗ್ಗೆ ಕೃತಜ್ಞತೆಯನ್ನು ವ್ಯಕ್ತಪಡಿಸುವುದು ಗುರುಪೂರ್ಣಿಮೆ ಆಚರಿಸುವುದರ ಹಿಂದಿನ ಉದ್ದೇಶವಾಗಿದೆ. ಇಂದು ಸಮಾಜದಲ್ಲಿ ಅನ್ಯಾಯ, ಅತ್ಯಾಚಾರ, ಕೊಲೆ, ದರೋಡೆ, ಭ್ರಷ್ಠಾಚಾರ, ಸುಲಿಗೆ, ಧಂಗೆ ಮುಂತಾದ ಘಟನೆಗಳು ಮೀತಿ ಮೀರಿದೆ. ಇದನ್ನು ತಡೆಯುವುದು ಇದರ ವಿರುದ್ಧ ಹೋರಾಟ ಮಾಡುವುದು ನಮ್ಮ ಧರ್ಮಕರ್ತವ್ಯವೇ ಅಗಿದೆ. ಹಾಗಾಗಿ ಹಿಂದೂ ಧರ್ಮದ ಆಚರಣೆಯನ್ನು ಅರ್ಥ ಮಾಡಿಕೊಳ್ಳೋಣ, ನಮ್ಮ ಮಕ್ಕಳಿಗೆ ಧರ್ಮಶಿಕ್ಷಣವನ್ನು ನೀಡೋಣ ಮತ್ತು ಅನ್ಯಾಯದ ವಿರುದ್ಧ ಹೋರಾಡೋಣ ಎಂದು ಕರೆ ನೀಡಿದರು. ಪ್ರತಿಯೊಬ್ಬರು ಸಹ ಜುಲೈ 13 ರಂದು ಭವಾನಿ ಕಲ್ಯಾಣ ಮಂಟಪದಲ್ಲಿ ನಡೆಯುವ ಗುರುಪೂರ್ಣಿಮಾ ಮಹೋತ್ಸವದಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿ ಮಾಡೋಣ ಎಂದು ಸಂಕಲ್ಪ ಮಾಡಿದರು.

ಈ ಸಂದರ್ಭದಲ್ಲಿ ಸನಾತನ ಸಂಸ್ಥೆಯ ಸೌ. ಮಾಧುರಿ, ಶ್ರೀಮತಿ ಧನಲಕ್ಷ್ಮೀ ವಿ.ಕೆ, ‘ಸಂಗಾತಿ ಸಂಘ’ ದ ಕಾರ್ಯದರ್ಶಿಗಳಾದ ಸೌ. ರೇವತಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.


ವಿನೋದ ಕಾಮತ,
ವಕ್ತಾರರು, ಸನಾತನ ಸಂಸ್ಥೆ,
ಸಂಪರ್ಕ : ೯೩೪೨೫ ೯೯೨೯೯
….

ರಘುರಾಜ್ ಹೆಚ್.ಕೆ…9449553305….

Related Articles

2 comments

GeorgeZew July 21, 2025 - 1:43 am

Looking for the best haircut in town? MenSpire delivers tailored precision cuts, expert grooming, and a luxe vibe. Book now for a refined, confidence-boosting transformation.

Reply
mitolyn reviews January 27, 2026 - 9:46 am

**mitolyn reviews**

Mitolyn is a carefully developed, plant-based formula created to help support metabolic efficiency and encourage healthy, lasting weight management.

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...