Home ರಾಜ್ಯರಾಜ್ಯ “ಖಾಸಗಿ” ನೌಕರರಿಗೆ ಗುಡ್ ನ್ಯೂಸ್ ನೀಡಿದ ಹೈ ಕೋರ್ಟ್..!!

ರಾಜ್ಯ “ಖಾಸಗಿ” ನೌಕರರಿಗೆ ಗುಡ್ ನ್ಯೂಸ್ ನೀಡಿದ ಹೈ ಕೋರ್ಟ್..!!

by EDITOR NEWS WARRIORS
0 comments

ಧಾರವಾಡ: ಖಾಸಗಿ ನೌಕರರ ನಿವೃತ್ತಿಯ ವಯಸ್ಸನ್ನು 58 ವರ್ಷದಿಂದ 60 ವರ್ಷಕ್ಕೆ ಏರಿಸಬೇಕು ಎಂಬ ಸರ್ಕಾರದ ಆದೇಶವನ್ನು ಧಾರವಾಡ ಹೈಕೋರ್ಟ್ ನ್ಯಾಯಪೀಠವು ಎತ್ತಿ ಹಿಡಿದಿದೆ.

ಏನಿದು ಪ್ರಕರಣ…?

ಕರ್ನಾಟಕ ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶಗಳ ತಿದ್ದುಪಡಿ ನಿಯಮಗಳ ಮಾದರಿ ಅನ್ವಯ ನೌಕರರ ನಿವೃತ್ತಿ ವಯಸ್ಸು ಏರಿಸಿ, ಸರ್ಕಾರ ಆದೇಶಿಸಿತ್ತು. ರಾಜ್ಯ ಸರ್ಕಾರದ ಈ ಆದೇಶವನ್ನು ಹರಿಹರದ ಗ್ರಾಸಿಂ ಇಂಡಸ್ಟ್ರೀಸ್ ಕಂಪನಿಯು ಪ್ರಶ್ನಿಸಿ, ಹೈಕೋರ್ಟ್ ಮೊರೆ ಹೋಗಿತ್ತು.

ಹೈಕೋರ್ಟ್ ಏಕ ಸದಸ್ಯತ್ವ ಪೀಠ ವಜಾಗೊಳಿಸಿದ ಅರ್ಜಿಯನ್ನು ಎತ್ತಿ ಹಿಡಿದ ಹೈಕೋರ್ಟ್ :


ಕಂಪನಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠವು 2021, ಸೆಪ್ಟೆಂಬರ್ 17ರಂದು ವಜಾಗೊಳಿಸಿತ್ತು. ಈ ವಜಾ ಆದೇಶವನ್ನು ಪ್ರಶ್ನಿಸಿ ಮತ್ತೆ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಸಂಬಂಧದ ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠವು ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದೆ. ಅಲ್ಲದೇ 2018ರ ಮಾರ್ಚ್ 17 ಅಥವಾ ನಂತ್ರದಲ್ಲಿ 59 ವರ್ಷಗಳನ್ನು ಪೂರೈಸಿ ನಿವೃತ್ತರಾದವರಿಗೆ ನಿವೃತ್ತಿ ದಿನಾಂಕ ಮತ್ತು ಅವರು 60 ವರ್ಷ ತಲುಪಿದ ದಿನಾಂಕದ ನಡುವಿನ ಅವಧಿಗೆ ಶೇ.50ರಷ್ಟು ವೇತನವನ್ನು ಮರುಪಾವತಿ ಮಾಡಬೇಕು ಎಂದು ಮೇಲ್ಮನವಿದಾರರಿಗೆ ಸೂಚಿಸಿದೆ.

ಈ ಮೂಲಕ ಖಾಸಗಿ ನೌಕರರಿಗೆ ಹೈಕೋರ್ಟ್ ಶುಭಸುದ್ದಿ ನೀಡಿದೆ..

ರಘುರಾಜ್ ಹೆಚ್.ಕೆ…9449553305….

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...