Home ರಾಜ್ಯಜಿಲ್ಲಾ ಉಸ್ತುವಾರಿ ಸಚಿವ ಡಾ// ಕೆ, ಸಿ ನಾರಾಯಣಗೌಡ ರಿಂದ ಮಳೆ ಸಂತ್ರಸ್ತ ಸ್ಥಳಗಳಿಗೆ ಭೇಟಿ ಜಿಲ್ಲಾಧಿಕಾರಿಗಳಿಗೆ ಮಳೆಯಿಂದ ಸಂತ್ರಸ್ತ ಕುಟುಂಬಗಳಿಗೆ ತಕ್ಷಣದ ಪರಿಹಾರಕ್ಕೆ ಸೂಚನೆ .!

ಜಿಲ್ಲಾ ಉಸ್ತುವಾರಿ ಸಚಿವ ಡಾ// ಕೆ, ಸಿ ನಾರಾಯಣಗೌಡ ರಿಂದ ಮಳೆ ಸಂತ್ರಸ್ತ ಸ್ಥಳಗಳಿಗೆ ಭೇಟಿ ಜಿಲ್ಲಾಧಿಕಾರಿಗಳಿಗೆ ಮಳೆಯಿಂದ ಸಂತ್ರಸ್ತ ಕುಟುಂಬಗಳಿಗೆ ತಕ್ಷಣದ ಪರಿಹಾರಕ್ಕೆ ಸೂಚನೆ .!

by EDITOR NEWS WARRIORS
0 comments


ಶಿವಮೊಗ್ಗ : ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳಯಿಂದ ಮನೆಹಾನಿ, ಬೆಳೆನಷ್ಟ ಹಾಗೂ ಜೀವಹಾನಿ ಮುಂತಾದವುಗಳಿಂದ ಸಂತ್ರಸ್ತರಾದ ಕುಟುಂಬಗಳಿಗೆ ತಕ್ಷಣದ ಕ್ರಮವಾಗಿ ನಿಗಧಿಪಡಿಸಿದ ಪರಿಹಾರಧನ ನೀಡುವಂತೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು , ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ರೇಷ್ಮೆ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ॥ ಕೆ.ಸಿ.ನಾರಾಯಣಗೌಡ ಅವರು ಹೇಳಿದರು.
ಅವರು ಇಂದು ಶಿವಮೊಗ್ಗಕ್ಕೆ ಭೇಟಿ ನೀಡಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ ನಂತರ ಮಾಧ್ಯಮದ ಪ್ರತಿನಿಧಿಗಳಿಗೆ ವಿವರ ನೀಡಿದರು.
ಈವರೆಗೆ ಜಿಲ್ಲೆಯಲ್ಲಿ ಸುಮಾರು 246 ಮನೆಗಳು ಬಾಗಶಃ ಹಾಗೂ 26 ಮನೆಗಳು ಸಂಪೂರ್ಣ ಕುಸಿದಿರುವ ಬಗ್ಗೆ ಮಾಹಿತಿ ಇದೆ. ಅಲ್ಲದೆ ಒರ್ವ ವ್ಯಕ್ತಿ ಮರಣ ಹೊಂದಿರುವ ಬಗ್ಗೆಯೂ ಮಾಹಿತಿ ಪಡೆಕೊಳ್ಳಲಾಗಿದ್ದು, ಸಂತ್ರಸ್ತ ಕುಟುಂಬಗಳ ಸದಸ್ಯರಿಗೆ ಪರಿಹಾರಧನ ನೀಡುವಂತೆ ಸೂಚಿಸಲಾಗಿದ್ದು, ಪರಿಹಾರ ಕಾರ್ಯ ಪ್ರಗತಿಯಲ್ಲಿದೆ ಎಂದರು.


ಮಹಿಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಆಯಾ ತಾಲೂಕಿನ ಕಂದಾಯಾಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ತಕ್ಷಣದ ಮಾಹಿತಿಯನ್ನು ಜಿಲ್ಲಾಧಿಕಾರಿಗಳಿಗೆ ತಲುಪಿಸುವಂತೆ ಸೂಚಿಸಿದರು.


ಶಿವಮೊಗ್ಗ ನಗರದ ಶೇಷಾದ್ರಿಪುರಂ, ಬಾಪೂಜಿ ನಗರಗಳಲ್ಲಿ ಮಳೆಯಿಂದ ಹಾನಿಯಾಗಿರುವ ಮನೆಗಳಿಗೆ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿದ ಅವರು ಸಂತ್ರಸ್ತರಿಗೆ ತಕ್ಷಣದ ಪರಿಹಾರಧನವನ್ನು ಬಿಡುಗಡೆಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ॥ಆರ್.ಸೆಲ್ವಮಣಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶ್ರೀಮತಿ ಎಂ.ಎಲ್.ವೈಶಾಲಿ, ಉಪವಿಭಾಗಾಧಿಕಾರಿ ಎಸ್.ಬಿ.ದೊಡ್ಡಗೌಡರ, ಮಹಾನಗರಪಾಲಿಕೆ ಆಯುಕ್ತ ಮಾಯಣ್ಣಗೌಡ, ತಹಶಿಲ್ದಾರ್ ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು…..

ರಘುರಾಜ್ ಹೆಚ್. ಕೆ….9449553305…..

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...