Home ರಾಜ್ಯಶಿವಮೊಗ್ಗ ಜಿಲ್ಲೆಯಲ್ಲಿ ಯಾರಿಗೆ ಸಿಗುತ್ತೆ ಮಂತ್ರಿಪಟ್ಟ?

ಶಿವಮೊಗ್ಗ ಜಿಲ್ಲೆಯಲ್ಲಿ ಯಾರಿಗೆ ಸಿಗುತ್ತೆ ಮಂತ್ರಿಪಟ್ಟ?

by EDITOR NEWS WARRIORS
0 comments
ನೂತನ ಸಚಿವ ಸಂಪುಟದಲ್ಲಿ ಬಸವರಾಜ್ ಬೊಮ್ಮಾಯಿ ಸಾರಥ್ಯದಲ್ಲಿ ಯಾರಿಗೆಲ್ಲಾ ಮಂತ್ರಿಗಿರಿ ಸಿಗುತ್ತದೆ ಎನ್ನುವ ಕುತೂಹಲ ಈಗ ಎಲ್ಲೆಡೆ ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ಈಗಾಗಲೇ ಮಂತ್ರಿ ಸ್ಥಾನದಲ್ಲಿದ್ದ ಸಚಿವ ಈಶ್ವರಪ್ಪ, ಜಗದೀಶ್ ಶೆಟ್ಟರ್, ರಂತಹ ಹಿರಿಯ ನಾಯಕರುಗಳು ಯಡಿಯೂರಪ್ಪ ಸಂಪುಟದಲ್ಲಿ ಮಂತ್ರಿಗಳಾಗಿ ಕಾರ್ಯನಿರ್ವಹಿಸಿದ್ದರು. ಅದರಲ್ಲೂ ಮಾಜಿ ಮುಖ್ಯಮಂತ್ರಿಗಳಾಗಿದ್ದ ಜಗದೀಶ್ ಶೆಟ್ಟರ್ ಅವರು ಯಡಿಯೂರಪ್ಪ ಸಂಪುಟದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ ಈಗ ನೂತನ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಕಾರ್ಯನಿರ್ವಹಿಸುವುದಿಲ್ಲ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ ಎಂದು ಬಹಿರಂಗ ಹೇಳಿಕೆ ನೀಡಿದ್ದಾರೆ. ಇನ್ನು ಸಚಿವ ಈಶ್ವರಪ್ಪನವರು ಬಿಜೆಪಿ ಪಕ್ಷ ಕಟ್ಟುವಲ್ಲಿ ಸಂಘಟನೆಯಲ್ಲಿ ಸಕ್ರಿಯವಾಗಿ ತಮ್ಮನ್ನು ತಾವು ತೊಡಗಿಸಿಕೊಂಡು ಪಕ್ಷಕ್ಕೆ ನಿಷ್ಠರಾಗಿದ್ದು ಈಗ ಅವರಿಗೆ ಯಾವ ಖಾತೆ ನೀಡುತ್ತಾರೆ. ಎನ್ನುವುದು ಕುತೂಹಲ ಕೆರಳಿಸಿದೆ ಏಕೆಂದರೆ ಜನತಾ ಪರಿವಾರದಿಂದ ಬಂದು ಮುಖ್ಯಮಂತ್ರಿ ಹುದ್ದೆಗೇರಿದ ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಹಿರಿಯ ನಾಯಕರಾದ ಈಶ್ವರಪ್ಪ ಕಾರ್ಯನಿರ್ವಹಿಸುತ್ತಾರ? ಕಾದು ನೋಡಬೇಕು. ಇನ್ನುಳಿದಂತೆ ಈಗಾಗಲೇ 3 ಡಿಸಿಎಂ ಸ್ಥಾನಗಳು ಪಕ್ಕಾ ಆಗಿದೆ. ಗೋವಿಂದ ಕಾರಜೋಳ, ಶ್ರೀರಾಮುಲು, ಆರ್ ಅಶೋಕ್, ಇನ್ನೂ ಒಂದು ಡಿಸಿಎಂ ಸ್ಥಾನ ಸೇರುವ ಸಾಧ್ಯತೆ ಇದೆ.ಉಳಿದಂತೆ ಹಲವು ಹೊಸ ಮುಖಗಳು ಸೇರ್ಪಡೆಯಾಗುವ ಸಾಧ್ಯತೆ ಇದೆ.
ತೀರ್ಥಹಳ್ಳಿ ಶಾಸಕರಾದ ಆರಗ ಜ್ಞಾನೇಂದ್ರ….
ವಿಧಾನಪರಿಷತ್ ಸದಸ್ಯರಾದ ರುದ್ರೆ ಗೌಡರು….
ಸಾಗರ ಶಾಸಕರಾದ ಹರತಾಳು ಹಾಲಪ್ಪ….
ಸೊರಬ ಶಾಸಕರಾದ ಕುಮಾರ್ ಬಂಗಾರಪ್ಪ….

ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಅಶೋಕ್ ನಾಯ್ಕ್….

ಯಡೂರ್ ಸುರೇಂದ್ರ ಅಧ್ಯಕ್ಷರು ಕರ್ನಾಟಕ ರಕ್ಷಣಾ ವೇದಿಕೆ ತೀರ್ಥಹಳ್ಳಿ…

ಇನ್ನು ಶಿವಮೊಗ್ಗ ಜಿಲ್ಲೆಗೆ ಸಂಬಂಧಪಟ್ಟಂತೆ ನೋಡುವುದಾದರೆ ತೀರ್ಥಹಳ್ಳಿ ಶಾಸಕರಾದ ಆರಗ ಜ್ಞಾನೇಂದ್ರ ಅವರಿಗೆ ಮೊದಲ ಪ್ರಾಶಸ್ತ್ಯ ನೀಡುವುದು ಒಳಿತು ಎನ್ನುವುದು ಕ್ಷೇತ್ರದ ಜನರ ಪಕ್ಷಾತೀತ ಅಭಿಪ್ರಾಯ ಇದಕ್ಕೆ ಹಲವು ಸಂಘಟನೆಗಳು ಧ್ವನಿಗೂಡಿಸಿವೆ. ಕರ್ನಾಟಕ ರಕ್ಷಣಾ ವೇದಿಕೆಯ ತೀರ್ಥಹಳ್ಳಿ ಅಧ್ಯಕ್ಷರಾದ ಸುರೇಂದ್ರ ಅವರು ಬಿಜೆಪಿ ನಾಯಕರಿಗೆ ಪತ್ರಿಕೆ ಮೂಲಕ ಮನವಿ ಮಾಡಿದ್ದಾರೆ.

ಕಳೆದ 45 ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿರುವ ಆರಗ ಜ್ಞಾನೇಂದ್ರ ಅವರು 9 ಸಲ ಚುನಾವಣೆಗೆ ಸ್ಪರ್ಧಿಸಿ ಐದು ಸಲ ಸೋತು ನಾಲ್ಕು ಸಲ ಗೆದ್ದಿದ್ದಾರೆ. ತೀರ್ಥಹಳ್ಳಿಯ ಇತಿಹಾಸದಲ್ಲಿ ಯಾರು ಸತತವಾಗಿ ಮೂರು ಸಲ ಗೆದ್ದಿಲ್ಲ. ಶಾಸಕ ಆರಗ ಜ್ಞಾನೇಂದ್ರ ಅವರು ಆ ಸಾಧನೆ ಮಾಡಿದ್ದಾರೆ. ಆದರೆ ಅವರ ದುರದೃಷ್ಟವೋ, ಕ್ಷೇತ್ರದ ಜನರ ದುರದೃಷ್ಟವೋ, ಅವರಿಗೆ ಮಂತ್ರಿಪದವಿ ಸಿಕ್ಕಿಲ್ಲ ಸ್ವಾಭಾವಿಕವಾಗಿ ರಾಜಕೀಯ ನಾಯಕರ ಮೇಲೆ ಆಪಾದನೆಗಳು ಸಹಜ ಆದರೆ ಜ್ಞಾನೇಂದ್ರ ಅವರ ವಿಷಯದಲ್ಲಿ ಹಾಗಿಲ್ಲ ಅಭಿವೃದ್ಧಿಯಲ್ಲಿ ಒಂದು ಹೆಜ್ಜೆ ಮುಂದಿದ್ದಾರೆ. ನಿರಂತರವಾಗಿ ಕ್ಷೇತ್ರದ ತುಂಬಾ ಓಡಾಡುವ , ನಿರಂತರವಾಗಿ ಕ್ಷೇತ್ರದ ಜನರ ಜೊತೆ ಸಂಪರ್ಕದಲ್ಲಿರುವ, ಸರಳ ವ್ಯಕ್ತಿತ್ವದ, ನೇರ ನುಡಿಯ,ಎಪ್ಪತ್ತರ ಹರೆಯದ ಯುವಕ ಜ್ಞಾನೇಂದ್ರ ಅವರಿಗೆ ಸಚಿವ ಸ್ಥಾನ ನೀಡುವುದು ಸೂಕ್ತ ಎನ್ನುವುದು ಪಕ್ಷಾತೀತ ಅಭಿಪ್ರಾಯ ಏಕೆಂದರೆ ಈ ಅವಕಾಶ ಮತ್ತೆ ಸಿಗುವುದಿಲ್ಲ ವೈಯಕ್ತಿಕವಾಗಿ ಜ್ಞಾನೇಂದ್ರ ಬೇರೆ ಶಾಸಕರ ತರ ಅಧಿಕಾರಕ್ಕಾಗಿ ಲಾಬಿ ಮಾಡಿಲ್ಲ ತಾವಾಯಿತು ತಮ್ಮ ಕೆಲಸವಾಯಿತು ಎನ್ನುವ ವ್ಯಕ್ತಿತ್ವದವರು ಅಂತವರಿಗೆ ಒಂದು ಅವಕಾಶ ನೀಡುವುದು ಸೂಕ್ತ.

ಇನ್ನುಳಿದಂತೆ ರುದ್ರೆ ಗೌಡರು, ಗ್ರಾಮಾಂತರ ಶಾಸಕರಾದ ಅಶೋಕ್ ನಾಯ್ಕ್, ಸಾಗರ ಶಾಸಕರಾದ ಹರತಾಳ ಹಾಲಪ್ಪ, ಸೊರಬ ಶಾಸಕರಾದ ಕುಮಾರ್ ಬಂಗಾರಪ್ಪ, ಕೂಡ ಮಂತ್ರಿಗಿರಿಯ ಲಿಸ್ಟಿನಲ್ಲಿ ಇದ್ದಾರೆ. ರುದ್ರೇಗೌಡ ರಿಗೆ ಬಹುತೇಕ ಖಚಿತ ಅನ್ನೋದು ಕೆಲವರ ಅಭಿಪ್ರಾಯ, ಕುಮಾರ್ ಬಂಗಾರಪ್ಪ ಅವರಿಗೆ ಅವಕಾಶ ಸಿಗಬಹುದು ಎನ್ನುವುದು ಹಲವರ ಅಭಿಪ್ರಾಯ, ಹರತಾಳ ಹಾಲಪ್ಪರನ್ನು ಬಿಡುವುದಿಲ್ಲ ಎನ್ನುವುದು ಕ್ಷೇತ್ರದ ಜನರ ನಂಬಿಕೆ. ಇನ್ನು ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ್ ಕೂಡ ಮಂತ್ರಿಗಿರಿಗೆ ಪ್ರಯತ್ನ ಮುಂದುವರಿಸಿದ್ದಾರೆ.

ಇರುವುದು ಒಂದು ಅಥವಾ ಎರಡು ಸ್ಥಾನ ಅದು ಯಾರ ಪಾಲಾಗುತ್ತದೆ ಕಾದುನೋಡಬೇಕು.

ಒಟ್ಟಿನಲ್ಲಿ ಹಿರಿತನ, ಒಂದಷ್ಟು ಅನುಭವ,ಸುದೀರ್ಘ ರಾಜಕೀಯ ಜೀವನ, ಯಾವುದೇ ಆಪಾದನೆಗಳಿಲ್ಲದೆ ಇರುವ ವ್ಯಕ್ತಿಗಳನ್ನು ಗುರುತಿಸಿ ನೂತನ ಸಚಿವ ಸಂಪುಟದಲ್ಲಿ ಸ್ಥಾನ ನೀಡಿದರೆ ಸಂಪುಟಕ್ಕೆ ಒಂದು ಗೌರವ ಬಂದಂತಾಗುತ್ತದೆ.

ಮುಂದೆ ಪಕ್ಷಕ್ಕೂ ಇದರಿಂದ ಸಹಾಯವಾಗಬಹುದು ಎನ್ನುವುದು ರಾಜಕೀಯ ಪಂಡಿತರ ಲೆಕ್ಕಾಚಾರ….

ವರದಿ…..ರಘುರಾಜ್ ಹೆಚ್.ಕೆ…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…..9449553305….

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...