Home ಶಿವಮೊಗ್ಗಶಿವಮೊಗ್ಗದಲ್ಲಿ ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ (ರಿ) ಶಿವಮೊಗ್ಗ ಜಿಲ್ಲಾ ಸಮಿತಿಯಿಂದ ಬೃಹತ್‌ ಪ್ರತಿಭಟನೆ ..!!

ಶಿವಮೊಗ್ಗದಲ್ಲಿ ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ (ರಿ) ಶಿವಮೊಗ್ಗ ಜಿಲ್ಲಾ ಸಮಿತಿಯಿಂದ ಬೃಹತ್‌ ಪ್ರತಿಭಟನೆ ..!!

by EDITOR NEWS WARRIORS
0 comments


ಶಿವಮೊಗ್ಗ : ಅಸಂಘಟಿತ ಕಾರ್ಮಿಕ -ಸಾಮಾಜಿಕ ಭದ್ರತಾ ಮಂಡಳಿ ಮುಖೇನ ಟೈಲರ್ಸ್ ವೃತ್ತಿ ಬಾಂಧವರ ಬೇಡಿಕೆಗಳ ಈಡೇರಿಕೆಗಾಗಿ ಬೃಹತ್‌ ಪ್ರತಿಭಟನಾ ಮೆರವಣಿಗೆ” ಎಂಬ ಫಲಕದೊಂದಿಗೆ ಮೆರವಣಿಗೆ ಹೊರಟಿತು.


ನಗರದ ಗೋಪಿ ವೃತ್ತದಿಂದ ಬೃಹತ್‌ ಮೆರವಣಿಗೆಯಲ್ಲಿ ಸಾಗಿ ಜಿಲ್ಲಾಧಿಕಾರಿಗಳ ಕಛೇರಿಯ ಎದುರು ಜಮಾವಣೆಗೊಂಡು ಪ್ರತಿಭಟನೆ ಮಾಡಿದರು..


ಪ್ರತಿಭಟನೆಯಲ್ಲಿ ಶಿವಮೊಗ್ಗದ ಮಾಜಿ ಶಾಸಕರಾದ ಪ್ರಸನ್ನ ಕುಮಾರ್ ಮಾತನಾಡಿ

,”ಇಂದು ಟೈಲರ್ ಗಳು ಇಲ್ಲವೆಂದರೆ ನಾವ್ಯಾರೂ ಹೊರಗೆ ಬರುವಂತಿಲ್ಲ. ನಮ್ಮ ಮಾನಕ್ಕೆ ಇವರುಗಳೇ ಕಾರಣ ಇವರುಗಳಿಲ್ಲದೆ ನಾವಿಲ್ಲ. ರಸ್ತೆಯಲ್ಲಿ ಹೋಗುವವನಿಗೂ ಇವರು ಬೇಕು ಮನೆಯಲ್ಲಿ ಇರುವವರಿಗೂ ಇವರುಗಳು ಬೇಕೆ ಬೇಕು. ಇಂತಹ ಟೈಲರ್ ಗಳಿಗೆ ಬೆಲೆಯೇರಿಕೆಯ ಬಿಸಿಯೊಂದಿಗಿನ ಕಷ್ಟಕರ ಜೀವನದಲ್ಲಿ ಸರ್ಕಾರಗಳು ಇವರೊಂದಿಗೆ ನಿಲ್ಲಬೇಕಿದೆ”. ಎಂದು ಹೇಳುತ್ತಾ “ಪಕ್ಷ ಜಾತಿ ಜನಾಂಗವಿಲ್ಲದೆ ಎಲ್ಲರೂ ಇವರನ್ನು ಬೆಂಬಲಿಸಬೇಕು” ಎಂದು ತಮ್ಮ ಬೆಂಬಲವನ್ನು ಸೂಚಿಸಿದರು.


ಈ ಪ್ರತಿಭಟನೆಯ ಮೆರವಣಿಗೆಯ ನೈತ್ರತ್ವವಹಿಸಿದ ಶಿವಮೊಗ್ಗ ಜಿಲ್ಲಾ ಮುಖಂಡರಾದ ಜೆ.ಎಸ್.ಸುಬ್ರಹ್ಮಣ್ಯ ನಿಯೋಜಿತ ಅಧ್ಯಕ್ಷರು. ಪಿ.ರವೀಂದ್ರ ಪ್ರಧಾನ ಕಾರ್ಯದರ್ಶಿಗಳು. ಶ್ರೀಯುತ ಚಂದ್ರಶೇಖರ್ ಉಪಾಧ್ಯಕ್ಷರು. ಶ್ರೀಧರ್ ಉಪಾಧ್ಯಕ್ಷರು ಭಾಗವಹಿಸಿ ಹಲವು ಬೇಡಿಕೆಗಳ ಬಗ್ಗೆ ಮಾಹಿತಿಗಳನ್ನು ಇನ್ನು ಹದಿನೈದು ದಿನಗಳಲ್ಲಿ ಇದಕ್ಕೆ ಸೂಕ್ತ ನ್ಯಾಯವನ್ನು ಒದಗಿಸಿಕೊಡಬೇಕೆಂದು ಇಲ್ಲವಾದಲ್ಲಿ ಮುಂದಿನ ತಿಂಗಳ ಒಳಗೆ ರಾಜ್ಯಾದ್ಯಂತ ತೀವ್ರತರವಾದ ಹೋರಾಟವನ್ನು ಕೈಗೊಳ್ಳುವುದಾಗಿ ಆಗ್ರಹಿಸಿ ಎಚ್ಚರಿಕೆ ನೀಡಿದರು.

ನಂತರ ಜಿಲ್ಲಾಧಿಕಾರಿಗಳ ಪರವಾಗಿ ಸ್ಥಳಕ್ಕೆ ಆಗಮಿಸಿದ ತಹಶಿಲ್ದಾರರಿಗೆ ಮನವಿಯನ್ನು ಅರ್ಪಿಸಿದರು.


ಮಳೆಯ ಆರ್ಭಟದ ನಡುವೆಯೂ ಲೆಕ್ಕಿಸದೆ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಪ್ರತಿಭಟನಾಕಾರರಲ್ಲಿ ಮಹಿಳೆಯರು ಹೆಚ್ಚಿನ ಪಾಲು ವಹಿಸಿದ್ದರು..

ಮಾಹಿತಿ: ಎ.ಮೖಕಲ್ ಕೆನಿತ್….

ರಘುರಾಜ್ ಹೆಚ್.ಕೆ..9449553305….

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...