Home ರಾಜ್ಯಶಿವಮೊಗ್ಗ “ಸ್ಮಾರ್ಟ್‌ಸಿಟಿ” ಅವೈಜ್ಞಾನಿಕ, ಕಳಪೆ, ಕಾಮಗಾರಿ..!!!! ಕೋಟಿ ಕೋಟಿ, ಲೂಟಿ..!! ನ್ಯಾಯಾಂಗ ತನಿಖೆಗೆ ಒಪ್ಪಿಸಿ ಕಾಂಗ್ರೆಸ್ ಮುಖಂಡ ಕೆ ದೇವೇಂದ್ರಪ್ಪ ಆಗ್ರಹ..!!! ಇಲ್ಲವಾದಲ್ಲಿ ಉಗ್ರ ಹೋರಾಟದ ಎಚ್ಚರಿಕೆ..!!!!!

ಶಿವಮೊಗ್ಗ “ಸ್ಮಾರ್ಟ್‌ಸಿಟಿ” ಅವೈಜ್ಞಾನಿಕ, ಕಳಪೆ, ಕಾಮಗಾರಿ..!!!! ಕೋಟಿ ಕೋಟಿ, ಲೂಟಿ..!! ನ್ಯಾಯಾಂಗ ತನಿಖೆಗೆ ಒಪ್ಪಿಸಿ ಕಾಂಗ್ರೆಸ್ ಮುಖಂಡ ಕೆ ದೇವೇಂದ್ರಪ್ಪ ಆಗ್ರಹ..!!! ಇಲ್ಲವಾದಲ್ಲಿ ಉಗ್ರ ಹೋರಾಟದ ಎಚ್ಚರಿಕೆ..!!!!!

by EDITOR NEWS WARRIORS
0 comments

ಶಿವಮೊಗ್ಗ:- ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್‌ಸಿಟಿ ಕಾಮಗಾರಿ ಸಂಪೂರ್ಣ ಕಳಪೆ ಮತ್ತು ಅವೈಜನಿಕವಾಗಿದ್ದು, ಕೂಡಲೇ ಇದನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ರಾಜ್ಯ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಕೆ. ದೇವೇಂದ್ರಪ್ಪ ಸುದ್ದಿಗೋಷ್ಟಿಯಲ್ಲಿ ಆಗ್ರಹಿಸಿದರು.

ಶಿವಮೊಗ್ಗ ಸ್ಮಾರ್ಟ್‌ಸಿಟಿ ಕಾಮಗಾರಿಗಾಗಿ ಸಾವಿರ ಕೋಟಿಗೂ ಹೆಚ್ಚು ಅನುದಾನ ಇರುತ್ತದೆ. ಆದರೆ, ಕಾಮಗಾರಿಗಳೆಲ್ಲಾ ಕಳಪೆಯಾಗಿದೆ. ಈಗ ಸ್ಮಾರ್ಟ್‌ಸಿಟಿಯ ಕಾಮಗಾರಿ ಗಳನ್ನು ತರಾತುರಿಯಲ್ಲಿ ಮುಗಿಸಿ ಮಹಾನಗರ ಪಾಲಿಕೆಗೆ ವರ್ಗಾವಣೆ ಮಾಡುವ ಸಮಯ ಬಂದಿದೆ. ಆದರೆ, ಕಾಮಗಾರಿಗಳನ್ನು ಯಾವ ಅಧಿಕಾರಿಗಳು ಕೂಡ ಪರಿಶೀಲಿಸಿಲ್ಲ ಎಂದು ದೂರಿದರು.

ಶೇ.೭೫ರಷ್ಟು ಕಾಮಗಾರಿಗಳು ಮುಗಿದಿವೆ ಎಂದು ಸುಳ್ಳು ಹೇಳುತ್ತಿ ದ್ದಾರೆ. ಸ್ಮಾರ್ಟ್‌ಸಿಟಿ ಕಾಮಗಾರಿಗಾಗಿ ಸುಮಾರು ೫೩ ಪ್ರಾಜೆಕ್ಟ್‌ಗಳು ಬೇಕಾಗುತ್ತದೆ. ಅಂದರೆ ಡ್ರೈನೇಜ್ ಬಾಕ್ಸ್, ಒಳಚರಂಡಿ, ವಿದ್ಯುತ್, ಟೆಲಿಫೋನ್, ವಿವಿಧ ನೆಟ್‌ವರ್ಕ್ ಸಂಪರ್ಕಗಳು, ನೀರು, ಗ್ಯಾಸ್ ಹೀಗೆ ಹಲವು ಕಾಮಗಾರಿಗಳನ್ನು ಮಾಡಬೇಕಾಗುತ್ತದೆ. ಈ ಕಾಮಗಾರಿ ಗಳನ್ನು ಮಾಡಲು ಪದೇ ಪದೇ ಗುಂಡಿಯನ್ನು ತೆಗೆಯಬೇಕಾಗುತ್ತದೆ. ಆದರೆ, ೪೧ ಕಾಮಗಾರಿಗಳು ಮುಗಿದಿದೆ ಎಂದು ಸುಳ್ಳು ಮಾಹಿತಿ ನೀಡಿ, ಈಗ ಮಹಾನಗರ ಪಾಲಿಕೆಗೆ ಅದನ್ನು ವರ್ಗಾವಣೆ ಮಾಡಲು ಸ್ಮಾರ್ಟ್‌ಸಿಟಿ ಅಧಿಕಾರಿಗಳು ಹೊರಟಿದ್ದಾರೆ ಎಂದು ದೂರಿದರು.

ಹೊಸಮನೆ, ಬಸವನಗುಡಿ, ವೆಂಕಟೇಶನಗರ, ದುರ್ಗಿಗುಡಿ, ಶರಾವತಿ ನಗರ ಮುಂತಾದ ಪ್ರಮುಖ ವಾರ್ಡ್‌ಗಳಲ್ಲಿ ಕಾಮಗಾರಿ ಪೂರ್ಣಗೊಂಡಿದೆ ಎಂದು ಹೇಳುತ್ತಿದ್ದಾರೆ. ಆದರೆ, ಒಂದೇ ಮಳೆಗೆ ಈ ಎಲ್ಲಾ ಕಾಮಗಾರಿಗಳು ಕುಸಿದು ಬಿದ್ದಿವೆ. ಮತ್ತೆ ಮತ್ತೆ ಅಗೆದು ಕಾಮಗಾರಿ ಮಾಡಲಾಗಿದೆ. ಕೆಲವು ಕಡೆ ಕಾಮಗಾರಿ ಮಾಡದೇ ಮಾಡಿದ್ದೇವೆ ಎಂದು ಹೇಳುತ್ತಿದ್ದಾರೆ. ಮತ್ತೆ ಹಲವು ಕಡೆ ಕಾಮಗಾರಿಯನ್ನೇ ಮಾಡದೇ ತೇಪೆ ಹಾಕಿದ್ದಾರೆ. ತರಾತುರಿಯಲ್ಲಿ ಈಗ ವರ್ಗಾವಣೆ ಮಾಡಲು ಹೊರಟಿದ್ದಾರೆ. ಸಂಪೂರ್ಣ ಕಳಪೆ ಗುಣಮಟ್ಟದ ಕಾಮಗಾರಿ ಇದಾಗಿದೆ ಎಂದು ದೂರಿದರು.

ಕಳಪೆ ಕಾಮಗಾರಿಗೆ ಸಂಬಂಧಿಸಿ ದಂತೆ ನಮ್ಮಲ್ಲಿ ಸಾಕ್ಷಿಗಳಿವೆ. ವಿಡಿಯೋಗಳಿವೆ. ಜಿಲ್ಲಾಧಿಕಾರಿಗಳು ಬಂದರೆ ಎಲ್ಲಿ ಕಳಪೆ ಕಾಮಗಾರಿ ಇದೆ ಎಂದು ನಾವು ಸಾಕ್ಷಿ ಸಮೇತ ತೋರಿಸುತ್ತೇವೆ. ಅನೇಕ ಕಡೆ ಅಂಗಡಿ ಮತ್ತು ಮನೆಯ ಮಾಲೀಕರಿಗೆ ಅನುಕೂಲ ಮಾಡಿಕೊಟ್ಟು ಲಕ್ಷಾಂತರ ರೂ. ಭ್ರಷ್ಟಾಚಾರ ಕೂಡ ಮಾಡಿದ್ದಾರೆ. ಸರ್ಕಾರಿ ಜಾಗವನ್ನು ದೊಡ್ಡ ದೊಡ್ಡ ಅಂಗಡಿ ಮಾಲೀಕರ ಪರವಾಗಿ ನಿಂತು ಕಾಮಗಾರಿಯನ್ನೇ ಮಾಡಿಲ್ಲ. ನೀರು ಹರಿದು ಹೋಗದೆ ಇಡೀ ನಗರ ಒಂದು ಸಣ್ಣ ಮಳೆಗೆ ಜಲಾವೃತವಾಗುತ್ತದೆ ಎಂದು ದೂರಿದರು.

ಸಾವಿರ ಕೋಟಿಗಳು ಖರ್ಚಾಗಿದ್ದರು ಕೂಡ ಒಂದೇ ಒಂದು ಪ್ರಯೋಜನ ಕೂಡ ಇಲ್ಲಿ ಆಗಿಲ್ಲ. ಮಸಣಕ್ಕೆ ಹೋಗುವ ಹೆಣಕ್ಕೆ ಶೃಂಗಾರ ಮಾಡಿದಂತಾಗಿದೆ. ಈ ಬಗ್ಗೆ ನಾವು ಮುಂದಿನ ದಿನಗಳಲ್ಲಿ ಹೋರಾಟ ಮಾಡುತ್ತೇವೆ. ಜಿಲ್ಲಾಧಿಕಾರಿಗಳು ಈ ತಕ್ಷಣವೇ ಅಂದರೆ ಒಂದು ವಾರದೊಳಗೆ ಎಲ್ಲ ಕಾಮಗಾರಿಗಳನ್ನ ಪರಿಶೀಲನೆ ಮಾಡಬೇಕು ಮತ್ತು ಸ್ಮಾರ್ಟ್‌ಸಿಟಿ ಕಾಮಗಾರಿಗೆ ಸಂಬಂಧಿಸಿದಂತೆ ಭ್ರಷ್ಟಾಚಾರದಲ್ಲಿ ತೊಡಗಿರುವ ಅಧಿಕಾರಿಗಳನ್ನು ಪತ್ತೆ ಹಚ್ಚಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದರು.

ಜಿಲ್ಲಾಧಿಕಾರಿಗಳಿಂದ ಪರಿಶೀಲನೆ ಅಥವಾ ತಾಂತ್ರಿಕ ಇಲಾಖೆಯಿಂದ ಗುಣಮಟ್ಟ ಪರೀಕ್ಷೆ ಮಾಡದೆಯೇ ಮಹಾನಗರ ಪಾಲಿಕೆಗೆ ವರ್ಗಾವಣೆ ಮಾಡಬಾರದು. ಮತ್ತು ಕಳಪೆ ಕಾಮಗಾರಿಗೆ ಸಂಬಂಧಿಸಿದಂತೆ ಎಸಿಬಿ ಅಥವಾ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಕವಿತಾ ರಾಘವೇಂದ್ರ, ಸ್ಟೆಲ್ಲಾ ಮಾರ್ಟಿನ್, ಜಮೀರ್, ಬಾಲಾಜಿ, ನಿಸಾರ್ ಮುಂತಾದವರಿದ್ದರು.

ಓಂಕಾರ ಎಸ್. ವಿ. ತಾಳಗುಪ್ಪ

ರಘುರಾಜ್ ಹೆಚ್.ಕೆ…9449553305…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...