Home ರಾಜ್ಯಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ, ಅಧಿಕಾರಿಗಳಿಗೆ, ಬಂಪರ್ ಕೊಡುಗೆ ನೀಡಿದ ರಾಜ್ಯ ಸರ್ಕಾರ!!

ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ, ಅಧಿಕಾರಿಗಳಿಗೆ, ಬಂಪರ್ ಕೊಡುಗೆ ನೀಡಿದ ರಾಜ್ಯ ಸರ್ಕಾರ!!

by EDITOR NEWS WARRIORS
0 comments

ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿ, ನೌಕರರು ಮತ್ತು ಗ್ರಾಮ ಪಂಚಾಯ್ತಿ ಸಿಬ್ಬಂದಿಗಳನ್ನು ಕೋವಿಡ್-19 ಕೊರೋನಾ ವಾರಿಯರ್ಸ್ ಗಳು ಎಂಬುದಾಗಿ ಘೋಷಣೆ ಮಾಡಿ, ರಾಜ್ಯ ಸರ್ಕಾರ ಆದೇಶಿಸಿದೆ. ಈ ಮೂಲಕ ಸೋಂಕಿನಿಂದ ಮರಣ ಹೊಂದಿದ್ದಲ್ಲಿ ಕೋವಿಡ್ ಪರಿಹಾರ, ಚಿಕಿತ್ಸೆ ಪಡೆದಿದ್ದಲ್ಲಿ ವೈದ್ಯಕೀಯ ವೆಚ್ಚ ಮರುಪಾವತಿ ಪಡೆಯುವಂತ ಅವಕಾಶವನ್ನು ನೀಡಿದ್ದಾರೆ.

ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮಹಾದೇವನ್ ನಡವಳಿಗಳನ್ನು ಹೊರಡಿಸಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಅತ್ಯಗತ್ಯ ಸೇವೆಗಳನ್ನು ನೀಡುವ ಇಲಾಖೆಯಾಗಿದ್ದು, ಈ ಇಲಾಖೆಯ ಅಧಿಕಾರಿಗಳು, ನೌಕರರು ಮತ್ತು ಗ್ರಾಮ ಪಂಚಾಯ್ತಿ ಸಿಬ್ಬಂದಿಗಳು ಕೋವಿಡ್-19 ನಿರ್ವಹಣೆಯ ಮುಂಚೂಣಿಯಲ್ಲಿದ್ದು, ಸಾರ್ವಜನಿಕರಿಗೆ ಅವಶ್ಯಕವಿರುವ ಸೇವೆಗಳನ್ನು ನೀಡುತ್ತಿದ್ದಾರೆ.

ಈ ಅಂಶಗಳ ಹಿನ್ನಲೆಯಲ್ಲಿ, ಕೋವಿಡ್ ಕರ್ತವ್ಯಕ್ಕೆ ನಿಯೋಜನೆಗೊಂಡ ಇಲಾಖೆಯ ಅಧಿಕಾರಿ ಮತ್ತು ನೌಕರರು ಹಾಗೂ ಗ್ರಾಮ ಪಂಚಾಯ್ತಿ ಸಿಬ್ಬಂದಿಗಳನ್ನು ಕೊರೋನಾ ವಾರಿಯರ್ಸ್ ಎಂದು ಗುರುತಿಸಿ, ಸದರಿ ಅಧಿಕಾರಿ, ನೌಕರರು ಮತ್ತು ಗ್ರಾಮ ಪಂಚಾಯ್ತಿ ಸಿಬ್ಬಂದಿಗಳು ಕೊರೋನಾ ಕರ್ತವ್ಯ ನಿರ್ವಹಣೆ ವೇಳೆ ಕೋವಿಡ್ ಸೋಂಕಿನಿಂದ ಮರಣ ಹೊಂದಿದಲ್ಲಿ, ಅವರ ಕುಟುಂಬದವರಿಗೆ ಪರಿಹಾರ ನೀಡಲು, ವೈದ್ಯಕೀಯ ವೆಚ್ಚ ಭರಿಸಲು ಅರ್ಹರಿರುತ್ತಾರೆ ಎಂಬುದಾಗಿ ತಿಳಿಸಿದ್ದಾರೆ.

ಈಗಾಗಲೇ ಇಂತಹ ಕರ್ತವ್ಯ ನಿರ್ವಹಿಸುತ್ತಿರುವ ಕೆಲವೊಂದು ಇಲಾಖೆ ಅಧಿಕಾರಿ, ನೌಕರರನ್ನು ಕೊರೋನಾ ವಾರಿಯರ್ಸ್ ಗಳೆಂದು ಘೋಷಿಸಲಾಗಿದೆ. ಅದರಂತೆ ಗ್ರಾಮೀಣಾಭಿವೃದ್ಧಿ, ಗ್ರಾಮ ಪಂಚಾಯ್ತಿ ಸಿಬ್ಬಂದಿಗಳನ್ನು ಕೊರೋನಾ ವಾರಿಯರ್ಸ್ ಗಳೆಂದು ಘೋಷಿಸುವಂತೆ ಮುಖ್ಯಮಂತ್ರಿಗಳು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿ, ನೌಕರುಗಳಿಗೆ ನೀಡಲು ಸೂಚಿಸಿರುತ್ತಾರೆ.

ವರದಿ… ರಘುರಾಜ್ ಹೆಚ್. ಕೆ…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305…

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...