Home ರಾಜ್ಯ“ನಕಲಿ ಬಂಗಾರ”ವನ್ನು ನೀಡಿ ವಂಚಿಸುತ್ತಾರೆ ಹುಷಾರ್..!!!!! ದಾವಣಗೆರೆ ಗ್ರಾಮಾಂತರ ಉಪ ವಿಭಾಗ ಪೊಲೀಸರ ಮಿಂಚಿನ ಕಾರ್ಯಾಚರಣೆ..!! “ನಕಲಿ ಬಂಗಾರದ ಬಿಲ್ಲೆ” ಗಳನ್ನು ನೀಡಿ ವಂಚಿಸುತ್ತಿದ್ದವರ ಬಂಧನ..!!!!

“ನಕಲಿ ಬಂಗಾರ”ವನ್ನು ನೀಡಿ ವಂಚಿಸುತ್ತಾರೆ ಹುಷಾರ್..!!!!! ದಾವಣಗೆರೆ ಗ್ರಾಮಾಂತರ ಉಪ ವಿಭಾಗ ಪೊಲೀಸರ ಮಿಂಚಿನ ಕಾರ್ಯಾಚರಣೆ..!! “ನಕಲಿ ಬಂಗಾರದ ಬಿಲ್ಲೆ” ಗಳನ್ನು ನೀಡಿ ವಂಚಿಸುತ್ತಿದ್ದವರ ಬಂಧನ..!!!!

by EDITOR NEWS WARRIORS
1 comment

ದಾವಣಗೆರೆ : ಗ್ರಾಮಾಂತರ ಉಪ ವಿಭಾಗ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ನಕಲಿ ಬಂಗಾರದ ಬಿಲ್ಲೆಗಳನ್ನು ನೀಡಿ ಆರು ಲಕ್ಷ ರೂಪಾಯಿಗಳನ್ನು ವಂಚನೆ ಮಾಡಿದ ಆರೋಪಿಗಳನ್ನು ಬಂಧಿಸಿದ್ದಾರೆ. ಜಗಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು.

ಗುನ್ನೆ ನಂಬರ್ 176 / 2022 ಕಲಂ 420 ರೆ/ವಿ 34 IPC ಪ್ರಕರಣದಲ್ಲಿ ಶ್ರೀಮತಿ ಕನ್ನಿಕಾ ಸಿಕ್ರಿವಾಲ್, ಸಹಾಯಕ ಪೊಲೀಸ್ ಅಧೀಕ್ಷಕರು ದಾವಣಗೆರೆ ಗ್ರಾಮಾಂತರ ಉಪ ವಿಭಾಗ ಇವರ ಮಾರ್ಗದರ್ಶನದಲ್ಲಿ ಜಗಳೂರು ಪೊಲೀಸ್ ಠಾಣೆಯ ಪಿಎಸ್ಐ ಬಸವರಾಜ್, ಸಿಬ್ಬಂದಿಗಳಾದ ಎಂ,ಎಸ್,ಐ, ಯಾಸಿನ್ ಉಲ್ಲಾ, ರಾಜಪ್ಪ ಎನ್ ಸಿ, ಸೈಯದ್ ಗಫಾರ್, ನಾಗರಾಜಯ್ಯ ಹನುಮಂತಪ್ಪ ಕೌಡಿ, ವಸಂತ್ ರೆಡ್ಡಿ ಹಾಗೂ ನೂರುಲ್ಲಾ ಇವರಗಳನ್ನು ಒಳಗೊಂಡ ತಂಡ ಪ್ರಕರಣದ ಆರೋಪಿತರಾದ ಸಾತ್ವಾಡಿ ಪ್ರಕಾಶ್ ತಂದೆ ನಾಗಪ್ಪ ಎಸ್ (30) ವರ್ಷ ಕೊರಚರ ಜನಾಂಗ, ಜಿರಾಯ್ತಿ ಕೆಲಸ, ವಾಸ ಮಾಚನಹಳ್ಳಿ ಕೊರಚರಟ್ಟಿ ಗ್ರಾಮ, ಹರಪನಹಳ್ಳಿ ತಾಲೂಕು ವಿಜಯನಗರ ಜಿಲ್ಲೆ. ಮತ್ತು ಹನುಮಂತಪ್ಪ@ ಕೊರಚರ ಹನುಮಂತಪ್ಪ ತಂದೆ ಕೊರಚರ ಬಡಕಪ್ಪ (52) ವರ್ಷ ಕೊರಚರ ಜನಾಂಗ ಕೂಲಿ ಕೆಲಸ ವಾಸ ಕನ್ನನಾಯಕನಹಳ್ಳಿ ಅಗ್ರಹಾರ ಗ್ರಾಮ ಹರಪನಹಳ್ಳಿ ತಾಲೂಕು ವಿಜಯನಗರ ಜಿಲ್ಲೆ. ಅವರುಗಳನ್ನು ಮೇಲ್ಕಂಡ ಪ್ರಕರಣದಲ್ಲಿ ಪೊಲೀಸರು ದಸ್ತಗಿರಿ ಮಾಡಿ 6 ಲಕ್ಷ ರೂಗಳನ್ನು ವಶಪಡಿಸಿಕೊಂಡಿರುತ್ತಾರೆ.

ಈ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ದಾವಣಗೆರೆ ಜಿಲ್ಲಾ ರಕ್ಷಣಾಧಿಕಾರಿ ಸಿಬಿ ರಿಶ್ವಂತ್, ಹಾಗೂ ಹೆಚ್ಚು ವರಿ ಪೊಲೀಸ್ ಅಧೀಕ್ಷಕರಾದ ಆರ್ ಬಿ ಬಸರಂಗಿ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಈಗಲೂ ನಕಲಿ ಬಂಗಾರದ ವ್ಯವಹಾರಗಳು ನಡೆಯುತ್ತಿವೆ ಹುಷಾರ್ ಪೊಲೀಸರ ಎಚ್ಚರಿಕೆ :

ಈಗಲೂ ನಕಲಿ ಬಂಗಾರಗಳನ್ನು ನೀಡುತ್ತೇವೆ ಎಂದು ಹೇಳಿ ಹಣವನ್ನು ದೋಚುವ ತಂಡಗಳು ಯಶಸ್ವಿಯಾಗಿ ತಮ್ಮ ಕಾರ್ಯಚರಣೆಗಳನ್ನು ನಡೆಸುತ್ತಿವೆ ಇದನ್ನು ನಂಬಿಕೊಂಡು ಯಾರು ಹೋಗಬಾರದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆಯನ್ನು ನೀಡಿದೆ…

ರಘುರಾಜ್ ಹೆಚ್.ಕೆ…9449553305…

ರಘುರಾರಜ್ ಹೆಚ್.ಕೆ..9449553305…

Related Articles

1 comment

GeorgeZew July 20, 2025 - 5:22 pm

Looking for the best haircut in town? MenSpire delivers tailored precision cuts, expert grooming, and a luxe vibe. Book now for a refined, confidence-boosting transformation.

Reply

Leave a Comment

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!