Home ರಾಜ್ಯದಂಡೆ ದಂಪತಿಗಳಿಗೆ ‘”ಸಂಗಮ ಸಿರಿ’” ಪ್ರಶಸ್ತಿ..!!

ದಂಡೆ ದಂಪತಿಗಳಿಗೆ ‘”ಸಂಗಮ ಸಿರಿ’” ಪ್ರಶಸ್ತಿ..!!

by EDITOR NEWS WARRIORS
2 comments
  • ದಂಡೆ ದಂಪತಿಗಳಿಗೆ ‘ಸಂಗಮ ಸಿರಿ’ ಪ್ರಶಸ್ತಿ*

  • ಹುಬ್ಬಳ್ಳಿ : ಹಿರಿಯ ಸಾಹಿತಿ ಡಾ. ಸಂಗಮೇಶ ಹಂಡಿಗಿ ಅವರ ಸ್ಮರಣೆಯಲ್ಲಿ ಡಾ.ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನ ರಚನೆಗೊಂಡಿದ್ದು ಇದರಡಿ ವಚನಸಾಹಿತ್ಯದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ‘ಸಂಗಮ ಸಿರಿ’ ಪ್ರಶಸ್ತಿ ಹಾಗೂ ೧೦ ಸಾವಿರ ರೂ.ನಗದು ಹಾಗೂ ಫಲಕವನ್ನೊಳಗೊಂಡ ಪ್ರಶಸ್ತಿ ಈ ವರ್ಷದಿಂದ ನೀಡಲಾಗುತ್ತಿದೆ.
    ‘ಸಂಗಮ ಸಿರಿ’ ಪ್ರಶಸ್ತಿಗೆ ಗುಲಬರ್ಗಾ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಡಾ.ವೀರಣ್ಣ ದಂಡೆ ಹಾಗೂ ಡಾ. ಜಯಶ್ರೀ ದಂಡೆ ದಂಪತಿಯನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಹಾಗೂ ವಾಣಿಜ್ಯ ತೆರಿಗೆ ಇಲಾಖೆ ನಿವೃತ್ತ ಉಪ ಆಯುಕ್ತರಾದ ಜಿ.ಜಿ.ಗೌಡಪ್ಪಗೋಳ ಹೇಳಿದರು.

  • ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಂಡೆ ದಂಪತಿಗಳು ವಚನ ಸಾಹಿತ್ಯ ಸಂಶೋಧನೆಯಲ್ಲಿ ಹಿರಿದಾದ ಸಾಧನೆ ಮಾಡಿದ್ದಾರೆ. ಈ ಪ್ರಶಸ್ತಿಯನ್ನು ಅ.೨ ರಂದು ವಿತರಿಸಲಾಗುವುದು.ಇದೇ ಸಂದರ್ಭದಲ್ಲಿ ಡಾ. ಸಂಗಮೇಶ ಹಂಡಿಗಿ ಹಾಗೂ ಬೀದರನ ಹಂಶಕವಿ ಅವರು ಸಂಪಾದಿಸಿದ ‘ಆಧುನಿಕ ವಚನಗಳು ಭಾಗ -೧೦’ ಕೃತಿಯನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗುವುದು ಎಂದರು. ಡಾ.ಸಂಗಮೇಶ ಹಂಡಿಗಿ ಅವರು ೪೬ ಕೃತಿಗಳನ್ನು ರಚಿಸಿ ಸಾಹಿತ್ಯ ಲೋಕದಲ್ಲಿ ತಮ್ಮದೆಯಾದ ಒಂದು ಬಳಗ ಸೃಷ್ಟಿಸಿಕೊಂಡಿದ್ದರು. ಅವರ ನೆನಪಿಗಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

  • ಪ್ರಶಸ್ತಿ ಆಯ್ಕೆಯ ಮುಖ್ಯಸ್ಥರಾಗಿ ಹಿರಿಯ ಸಾಹಿತಿ ಮಹಾಂತಪ್ಪ ನಂದೂರು ಕಾರ್ಯ ನಿರ್ವಹಿಸಿದರು. ಆಯ್ಕೆ ಸಮಿತಿ ಸಭೆಯಲ್ಲಿ ಸಾಹಿತಿ ಎಸ್.ವಿ.ಪಟ್ಟಣಶೆಟ್ಟಿ, ಹಿರಿಯ ಪತ್ರಕರ್ತರಾದ ಗಣಪತಿ ಗಂಗೊಳ್ಳಿ,ಡಾ.ರಾಮು ಮೂಲಗಿ, ಡಾ. ಮಹೇಶ ಹೊರಕೇರಿ, ಜಿ.ವಿ. ಹಿರೇಮಠ, ರವೀಂದ್ರ ರಾಮದುರ್ಗಕರ ,ಬಸವರಾಜ ಕರ್ಕಿ ಇತರರು ಪಾಲ್ಗೊಂಡಿದ್ದರು ಎಂದರು. ಪತ್ರಿಕಾಗೋಷ್ಠಿಯಲ್ಲಿ ಸಾಹಿತಿ ಮಹಾಂತಪ್ಪ ನಂದೂರ, ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಡಾ. ವೀರೇಶ್ ಹಂಡಿಗಿ, ಖಜಾಂಚಿ ಬಸವರಾಜ ಕರ್ಕಿ ಇತರರು ಇದ್ದರು.

  • ಡಾ.ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನ(ರಿ)ಹುಬ್ಬಳ್ಳಿಯ ಅಧ್ಯಕ್ಷರಾಗಿ ಜಿ.ಬಿ. ಗೌಡಪ್ಪಗೋಳ ಇದ್ದು, ಗೌರವಾಧ್ಯಕ್ಷರು ಗಣಪತಿ ಗಂಗೊಳ್ಳಿ, ಉಪಾಧ್ಯಕ್ಷರು ಸಂತೋಷ ಆರ್ ಶೆಟ್ಟಿ, ಡಾ.ಲಿಂಗರಾಜ ಅಂಗಡಿ, ಡಾ.ರಾಮು ಮೂಲಗಿ, ಪ್ರಧಾನ ಕಾರ್ಯದರ್ಶಿ ಡಾ.ವೀರೇಶ ಹಂಡಿಗಿ, ಸಹ ಕಾರ್ಯದರ್ಶಿಗಳು ರವೀಂದ್ರ ರಾಮದುರ್ಗಕರ, ಬಿ.ಎಸ್.ಮಾಳವಾಡ, ಖಜಾಂಚಿ ಬಸವರಾಜ ಕರ್ಕಿ, ನಿರ್ದೇಶಕರು ಜಿ.ಎಸ್.ಅಂಗಡಿ, ರಘುವೀರ ಹೆಬ್ಬಾರ, ಜಿ.ವಿ.ಹಿರೇಮಠ, ಶ್ರೀಮತಿ ಶ್ವೇತಾ ಬಣಕಾರ, ಶ್ರೀಮತಿ ಶೃತಿ ಹೆಬ್ಬಾರ , ಸೋಮು ರೆಡ್ಡಿ, ಶ್ರೀಕಾಂತ ಬಣಕಾರ, ಸಂಭಾಜಿ ಕಲಾಲ, ಸಾಹಿತ್ಯ ಕಮೀಟಿಯಲ್ಲಿ -ಎಸ್.ವಿ.ಪಟ್ಟಣಶೆಟ್ಟಿ, ಲೋಚನೇಶ ಹೂಗಾರ , ಮಹಾಂತಪ್ಪ ನಂದೂರ, ಡಾ.ಮಹೇಶ ಹೊರಕೇರಿ, ಡಾ.ಪ್ರಭು ಗಂಜಿಹಾಳ, ಸತೀಶ ಕುಲಕರ್ಣಿ, ಶ್ರೀಮತಿ ಶ್ರೀದೇವಿ ಕೆರೆಮನೆ, ಸೋಮಶೇಖರ ಉಮರಾಣಿ, ಆರ್.ಎಂ.ಗೋಗೇರಿ, ಸುಶಿಲೇಂದ್ರ ಕುಂದರಗಿ ಇದ್ದಾರೆ.

ವರದಿ-
ಡಾ.ಪ್ರಭು ಗಂಜಿಹಾಳ-೯೪೪೮೭೭೫೩೪೬

Related Articles

2 comments

GeorgeZew July 20, 2025 - 7:28 am

Looking for the best haircut in town? MenSpire delivers tailored precision cuts, expert grooming, and a luxe vibe. Book now for a refined, confidence-boosting transformation.

Reply
köpa receptfritt September 18, 2025 - 11:26 am

Köp Cialis tryggt – Vill du köpa Cialis tryggt? Vi erbjuder säkra online-beställningar med diskret leverans och garanterad kvalitet. Återfå ditt självförtroende enkelt och smidigt.

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...