
ಕಾಂಗ್ರೆಸ್ಸಿನ ಭಾರತ್ ಜೋಡೋ ಯಾತ್ರೆ ಬೆನ್ನಲ್ಲೇ, ರಾಜ್ಯ ಬಿಜೆಪಿ ಮುಂಬರುವ ವಿಧಾನಸಭೆಯ ಗೆಲುವಿಗಾಗಿ ಪೂರ್ವಭಾವಿ ತಯಾರಿ ನಡೆಸಿದ್ದು. ಇಂದಿನಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಜಂಟಿಯಾಗಿ ಜನಸಂಕಲ್ಪ ಯಾತ್ರೆ ಆರಂಭವಾಗಲಿದೆ.
ರಾಯಚೂರಿನಿಂದ ಆರಂಭ ರಾಮನಗರದಲ್ಲಿ ಅಂತ್ಯ :
ಕರ್ನಾಟಕದ ಗಡಿಭಾಗ ರಾಯಚೂರಿನಿಂದ ಪ್ರಾರಂಭವಾಗುವ ಬಿಜೆಪಿಯ ಜನಸಂಕಲ್ಪ ಯಾತ್ರೆ ಡಿಸೆಂಬರ್ 25ಕ್ಕೆ ರಾಮನಗರದಲ್ಲಿ ಅಂತ್ಯಗೊಳ್ಳಲಿದೆ.
ಬಿಜೆಪಿ ಕ್ಷೇತ್ರಗಳು ಸೇರಿದಂತೆ ಕಾಂಗ್ರೆಸ್ ಜೆಡಿಎಸ್ ಕ್ಷೇತ್ರಗಳು ಟಾರ್ಗೆಟ್ :
ದಿನಕ್ಕೆ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಳ್ಳುವ ನಾಯಕರು ಬಿಜೆಪಿ ಕ್ಷೇತ್ರಗಳು ಮಾತ್ರವಲ್ಲದೆ ಕಾಂಗ್ರೆಸ್ ಹಾಗೂ ಜೆಡಿಎಸ್ ನ ಹಲವು ಕ್ಷೇತ್ರಗಳಲ್ಲಿ ಸಂಚರಿಸಲಿದ್ದು. ಕಾರ್ಯಕರ್ತರು ಮುಖಂಡರುಗಳು, ಆಯಾ ಕ್ಷೇತ್ರಗಳಲ್ಲಿ ಬೃಹತ್ ಸಮಾವೇಶಗಳನ್ನು ನಡೆಸಲಿದ್ದಾರೆ. ಸರಿಸುಮಾರು 50 ಕ್ಷೇತ್ರಗಳಲ್ಲಿ ಸಂಚರಿಸುವ ಸಾಧ್ಯತೆ ಇದೆ.
ರಘುರಾಜ್ ಹೆಚ್.ಕೆ…9449553305…

