Home ರಾಜ್ಯಕವಿಯೂ ಕಲಿಯೂ ಆಗಿದ್ದ ಕನಕದಾಸರು: ಡಾ.ಬಾಲಕೃಷ್ಣ ಹೆಗಡೆ..!!

ಕವಿಯೂ ಕಲಿಯೂ ಆಗಿದ್ದ ಕನಕದಾಸರು: ಡಾ.ಬಾಲಕೃಷ್ಣ ಹೆಗಡೆ..!!

by EDITOR NEWS WARRIORS
1 comment


ಶಿವಮೊಗ್ಗ: ಮೇಲ್ವರ್ಗದ ಪಂಕ್ತಿಗೆ ಮಾತ್ರ ಸೀಮಿತವಾದ ಭಕ್ತಿ ಪರಂಪರೆಯ ಚಕ್ರವ್ಯೂಹವನ್ನು ಭೇದಿಸಿ ಒಳ ಹೊಕ್ಕು ತಮ್ಮ ತನವನ್ನು ಮೆರೆದವರು ಕನಕದಾಸರು ಎಂದು ಕಮಲಾ ನೆಹರು ಮಹಿಳಾ ಕಾಲೇಜಿನ ಇತಿಹಾಸ ಪ್ರಾಧ್ಯಾಪಕ, ಎನ್.ಎಸ್.ಎಸ್.ಕಾರ್ಯಕ್ರಮಾಧಿಕಾರಿ ಡಾ.ಬಾಲಕೃಷ್ಣ ಹೆಗಡೆ ಹೇಳಿದರು.
ಅವರು ತಮ್ಮ ಕಾಲೇಜಿನಲ್ಲಿ ಆಯೋಜಿಸಿದ್ದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡುತ್ತಿದ್ದರು.
ಕವಿಯೂ ಕಲಿಯೂ ಆದ ಕನಕದಾಸರು ತಮ್ಮ ವೈಚಾರಿಕತೆಯ ಪ್ರಖರತೆಯಿಂದದಾಸರಲ್ಲಿ ಕವಿ, ಕವಿಗಳಲ್ಲಿ ದಾಸರು ಎಂಬ ಹೆಗ್ಗಳಿಕೆಗೆ ಪಾತ್ರರಾದವರು ಎಂದು ತಿಳಿಸಿದರು.
ಕೀರ್ತನೆ, ಮುಂಡಿಗೆ, ಮೋಹನತರಂಗಿಣಿ,ರಾಧಾನ್ಯ ಚರಿತೆ, ನಳಚರಿತ್ರೆ, ಹರಿಭಕ್ತಸಾರ, ಮೊದಲಾದ ಕೃತಿಗಳ ಮೂಲಕ ಜೀವಪರ ಸಂದೇಶಗಳನ್ನು ಬಿತ್ತಿದ್ದಾರೆ ಎಂದ ಅವರು ಸಮಾಜದಲ್ಲಿ ಅಂಕಾರ, ಡಾಂಬಿಕತನ, ಭಕ್ತಿ ಶೂನ್ಯತೆಯಿಂದ ಕೂಡಿದವರನ್ನು ಕಟುವಾಗಿ ಟೀಕಿಸಿದರು ಎಂದು ವಿವರಿಸಿದರು.
ಹೃದಯ ಹೊಲವನು ಮಾಡಿ, ತನುವ ನೇಗಿಲ ಮಾಡಿ ನಾಲಿಗೆಯ ಕೂರಿಗೆ ಮಾಡಿ ಬಿತ್ತಿರಯ್ಯ ಎನ್ನುವ ಚಿಂತನೆಯ ಮೂಲಕ ಸಮಾಜಕ್ಕೆ ಒಳಿತನ್ನು ಬಯಸಿದವರು ಕನಕದಾಸರು ಎಂದು ಬಣ್ಣಿಸಿದರು.
ಕುಲಕ್ಕಿಂತ ಗುಣ ಶ್ರೇಷ್ಠ ಎಂದು ಪ್ರತಿಪಾದಿಸಿದ ಅವರು ಗುಣವೇ ಮುಖ್ಯ ಹೊರತು ಕುಲವಲ್ಲ ಎಂದು ತೀವ್ರವಾಗಿ ಪ್ರತಿಪಾದಿಸಿದ್ದರು ಎಂದು ಮಾಹಿತಿ ನೀಡಿದರು.
ಕನಕದಾಸರ ಉಪದೇಶಗಳು ಸರ್ವಕಾಲಿಕ ಪ್ರಸ್ತುತತೆಯನ್ನು ಪಡೆದುಕೊಂಡಿವೆ ಎಂದು ಡಾ.ಹೆಗಡೆ ಹೇಳಿದರು.
ಉಪಪ್ರಾಂಶುಪಾಲರಾದ ಡಾ.ಆರ್.ಎಂ.ಜಗದೀಶ ಅಧ್ಯಕ್ಷತೆ ವಹಿಸಿ ಮಾತನಾಡಿ ಕನಕದಾದರು 14ನೇ ಶತಮಾನದಲ್ಲೇ ತಮ್ಮ ಉಪದೇಶಗಳ ಮೂಲಕ ಜಾತಿ ಪದ್ಧತಿ ನಿರ್ಮೂಲನೆಗೆ ಮುನ್ನುಡಿ ಬರೆದವರು ಕನಕದಾಸರು ಎಂದು ಗುಣಗಾನ ಮಾಡಿದರು.
ಐಕ್ಯೂಎಸಿ ಸಂಯೋಜಕ ಡಾ.ಎ.ಪಿ.ಓಂಕಾರಪ್ಪ, ದಾಸರ ಪದವನ್ನು ಹಾಡಿದರು. ಡಾ.ಬಿ.ಎಂ.ರವಿ ಮೊದಲಾದವರು ಉಪಸ್ಥಿತರಿದ್ದರು. ಉಪನ್ಯಾಸಕ ಎನ್.ಡಿ.ರಮೇಶ ವಂದಿಸಿದರು.

ರಘುರಾಜ್ ಹೆಚ್.ಕೆ..9449553305…

Related Articles

1 comment

Kevinshags September 17, 2025 - 2:28 pm

Эта статья для ознакомления предлагает читателям общее представление об актуальной теме. Мы стремимся представить ключевые факты и идеи, которые помогут читателям получить представление о предмете и решить, стоит ли углубляться в изучение.
Углубиться в тему – https://quick-vyvod-iz-zapoya-1.ru/

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...