Home ರಾಜ್ಯದಾವಣಗೆರೆ ಜಿಲ್ಲೆಗೆ ಮಂತ್ರಿ ಸ್ಥಾನ ನೀಡಿ:ಕಿರಣ್ ಮೂಲಿಮನೆ ಆಗ್ರಹ..

ದಾವಣಗೆರೆ ಜಿಲ್ಲೆಗೆ ಮಂತ್ರಿ ಸ್ಥಾನ ನೀಡಿ:ಕಿರಣ್ ಮೂಲಿಮನೆ ಆಗ್ರಹ..

by EDITOR NEWS WARRIORS
0 comments

ಹರಿಹರ:ಉತ್ತರ ದಕ್ಷಿಣವನ್ನು ಬೆಸೆಯುವ ಮಧ್ಯಕರ್ನಾಟಕ ದಾವಣಗೆರೆ ಜಿಲ್ಲೆಗೆ ಒಂದಾದರೂ ಮಂತ್ರಿ ಸ್ಥಾನ ನೀಡುವಂತೆ ಬಿಜೆಪಿ ರೈತ ಮೋರ್ಚಾ ನಗರ ಘಟಕ ಪ್ರಧಾನ ಕಾರ್ಯದರ್ಶಿ ಕಿರಣ್ ಮೂಲಿಮನಿ ಅವರು ಮಾನ್ಯ ಮುಖ್ಯಮಂತ್ರಿಯವರನ್ನು ಒತ್ತಾಯಿಸಿದ್ದಾರೆ .

ದಾವಣಗೆರೆಯಿಂದ ಬಿಜೆಪಿ ಅಭ್ಯರ್ಥಿಗಳಾಗಿ 5 ಜನ ಶಾಸಕರು ವಿಧಾನಸಭೆ ಪ್ರವೇಶಿಸಿದ್ದಾರೆ.ಕಳೆದ ಬಾರಿ ಯಡಿಯೂರಪ್ಪನವರ ಮಂತ್ರಿಮಂಡಲದಲ್ಲಿ ದಾವಣಗೆರೆಯಿಂದ ಯಾರಾದರೂ ಒಬ್ಬರು ಮಂತ್ರಿಯಾಗುತ್ತಾರೆ ಎಂಬ ಭರವಸೆಯನ್ನು ಪಕ್ಷದ ಕಾರ್ಯಕರ್ತರು ಹೊಂದಿದ್ದರು.ಅದರೆ ಪಕ್ಷದ ಕಾರ್ಯಕರ್ತರ ಆಸೆ ಈಡೇರಲಿಲ್ಲ.

ಈ ಬಾರಿಯಾದರೂ ಬೊಮ್ಮಾಯಿ ಅವರ ಮಂತ್ರಿಮಂಡಲದಲ್ಲಿ ಜಿಲ್ಲೆಯಿಂದ ಯಾರಾದರೊಬ್ಬರು ಮಂತ್ರಿಯಾಗುತ್ತಾರೆ ಎಂಬ ಆಸೆಯನ್ನ ಪಕ್ಷದ ಕಾರ್ಯಕರ್ತರು ಹೊಂದಿದ್ದರು.ಆದರೆ ಬೊಮ್ಮಾಯಿ ಅವರ ಮಂತ್ರಿಮಂಡಲದಲ್ಲಿ ದಾವಣಗೆರೆ ಜಿಲ್ಲೆಯಿಂದ ಯಾರೊಬ್ಬರೂ ಮಂತ್ರಿಯಾಗಲಿಲ್ಲ .

ಪಕ್ಷದ ವರಿಷ್ಠರು ಹಾಗೂ ಮಾನ್ಯ ಮುಖ್ಯಮಂತ್ರಿಗಳು ದಾವಣಗೇರಿ ಜಿಲ್ಲೆಗೆ ಅನ್ಯಾಯ ಮಾಡದೆ ಕೂಡಲೇ ಯಾರಾದರೂ ಒಬ್ಬರಿಗೆ ಮಂತ್ರಿ ಸ್ಥಾನ ನೀಡುವಂತೆ ಪಕ್ಷದ ಕಾರ್ಯಕರ್ತನಾಗಿ ಪಕ್ಷದ ಮುಖಂಡರಲ್ಲಿ ಮನವಿ ಮಾಡಿಕೊಳ್ಳುತ್ತೇನೆ .

ಜಿಲ್ಲೆಗೆ ಒಬ್ಬರನ್ನು ಮಂತ್ರಿ ಮಾಡಿದರೆ ಜಿಲ್ಲೆಯ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ .ಕರೋನ ಬಂತಾ ಹೆಮ್ಮಾರಿಯನ್ನು ಮೆಟ್ಟಿ ನಿಲ್ಲಲು ಹಾಗೂ ಮೂರನೇ ಅಲೆಯನ್ನು ಪರಿಣಾಮಕಾರಿಯಾಗಿ ತಡೆಯಲು ಜಿಲ್ಲೆಯಿಂದ ಯಾರಾದರೂ ಒಬ್ಬರನ್ನು ಮಂತ್ರಿ ಮಾಡಿ .ಆ ಮೂಲಕ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರ ಬೇಡಿಕೆಯನ್ನು ಈಡೇರಿಸಿ .ಇಲ್ಲವಾದರೆ ಮಂತ್ರಿ ಸ್ಥಾನಕ್ಕೆ ಆಗ್ರಹಿಸಿ ಜಿಲ್ಲೆಯಲ್ಲಿ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ ಅದಕ್ಕೆ ಅವಕಾಶ ಮಾಡಿಕೊಡದೆ ಜಿಲ್ಲೆಯಿಂದ ಯಾರಾದರೂ ಒಬ್ಬರಿಗೆ ಮಂತ್ರಿ ಸ್ಥಾನ ನೀಡಿ ಎಂಬೋದು ನಮ್ಮ ಬೇಡಿಕೆಯಾಗಿದೆ ಎಸ್ ಆರ್ ಬೊಮ್ಮಯಿ ಅವರು ಪಕ್ಷ ನಿಷ್ಠೆ ಹೊಂದಿದವರನ್ನು ಮುಂದಿನ ದಿನದಲ್ಲಿ ಮಂತ್ರಿ ಮಾಡುತ್ತಾರೆ ಎಂಬ ಭರವಸೆಯನ್ನು ಹೊಂದಿದ್ದೇವೆ ಎಂದರು .

ಇದೇ ಸಂದರ್ಭದಲ್ಲಿ ಉತ್ತರ ಕರ್ನಾಟಕ ಭಾಗದಿಂದ ಮುಖ್ಯಮಂತ್ರಿಯಾಗಿ ಎಸ್ಆರ್ ಬೊಮ್ಮಾಯಿ ಅವರು ಸಮರ್ಥವಾಗಿ ಕಾರ್ಯ ನಿರ್ವಹಿಸಲಿದ್ದಾರೆ.ಅವರಿಗೆ ರೈತ ಮೋರ್ಚಾ ತಾಲ್ಲೂಕು ಘಟಕದಿಂದ ತುಂಬುಹೃದಯದ ಅಭಿನಂದನೆಗಳನ್ನು ಸಲ್ಲಿಸಿದರು …

ವರದಿ.. . ಶ್ರೀನಿವಾಸ್, ಆರ್…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...