Home ರಾಜ್ಯThe police caught the robbers: ಕಳ್ಳತನ ಮಾಡಿದ 24 ಗಂಟೆ ಒಳಗೆ ಕಳ್ಳರನ್ನು ಹಿಡಿದ ವಿನೋಬನಗರದ ಪೊಲೀಸರು..!! ಬಹುಮಾನ ಘೋಷಿಸಿ ಪ್ರಶಂಸೆ ವ್ಯಕ್ತಪಡಿಸಿದ ಶಿವಮೊಗ್ಗ ಜಿಲ್ಲಾ ಅಧೀಕ್ಷಕರು..!!

The police caught the robbers: ಕಳ್ಳತನ ಮಾಡಿದ 24 ಗಂಟೆ ಒಳಗೆ ಕಳ್ಳರನ್ನು ಹಿಡಿದ ವಿನೋಬನಗರದ ಪೊಲೀಸರು..!! ಬಹುಮಾನ ಘೋಷಿಸಿ ಪ್ರಶಂಸೆ ವ್ಯಕ್ತಪಡಿಸಿದ ಶಿವಮೊಗ್ಗ ಜಿಲ್ಲಾ ಅಧೀಕ್ಷಕರು..!!

by EDITOR NEWS WARRIORS
1 comment
ಶಿವಮೊಗ್ಗ: ದಿನಾಂಕಃ 27-01-2023 ರಂದು ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ  ಆಲ್ಕೊಳ ಗ್ರಾಮದ ವಾಸಿ ಮಾಣಿಕ್ಯಂ ರವರು ತಮ್ಮ ಮನೆಗೆ ಬೀಗವನ್ನು ಹಾಕಿ,ಬೀಗದ ಕೀಯನ್ನು ಮನೆಯ ಆವರಣದಲ್ಲಿನ ನೀರಿನ ಮೋಟಾರ್ ಕೆಳಗೆ ಇಟ್ಟು ಹೋಗಿದ್ದು, ಯಾರೋ ಕಳ್ಳರು ಸದರಿ ಬೀಗದ ಕೀಯನ್ನು ತೆಗೆದುಕೊಂಡು, ಮನೆಯ ಬಾಗಿಲನ್ನು ತೆರೆದು ಒಳಗೆ ಹೋಗಿ,ಬೀರುವಿನಲ್ಲಿ ಇಟ್ಟಿದ್ದ ಬಂಗಾರದ ಆಭರಣಗಳು, ಬೆಳ್ಳಿಯ ಚೈನು ಮತ್ತು ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ನೀಡಿದ ದೂರಿನ ಮೇರೆಗೆ ಗುನ್ನೆ  ಸಂಖ್ಯೆ 0014/2023  ಕಲಂ 380 ಐಪಿಸಿ ರೀತ್ಯಾ ಪ್ರಕರಣವನ್ನು ದಾಖಲೆ ಮಾಡಿಕೊಂಡು ತನಿಖೆ ಕೈಗೊಂಡ ವಿನೋಬನಗರದ ಪೊಲೀಸರು. 

     ಮಿಥುನ್ ಕುಮಾರ್ ಜಿ.ಕೆ, ಐಪಿಎಸ್,  ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ಮತ್ತು  ಅನಿಲ್ ಕುಮಾರ್ ಭೂಮರಡ್ಡಿ,ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರ ಮಾರ್ಗದರ್ಶನದಲ್ಲಿ, ಸುರೇಶ್ ಎಂ,ಪೊಲೀಸ್ ಉಪಾಧೀಕ್ಷಕರು ಶಿವಮೊಗ್ಗ ಉಪವಿಭಾಗ-ಬಿ ರವರ ಮೇಲ್ವಿಚಾರಣೆಯಲ್ಲಿ, ಸದರಿ ಪ್ರಕಣದಲ್ಲಿ ಕಳುವಾದ ವಸ್ತುಗಳು ಮತ್ತು ಆರೋಪಿತರ ಪತ್ತೆಗಾಗಿ  ರವಿ ಎನ್ ಎಸ್,ಪೊಲೀಸ್ ನಿರೀಕ್ಷಕರು, ವಿನೋಬನಗರ ಪೊಲೀಸ್ ಠಾಣೆ ರವರ ನೇತೃತ್ವದಲ್ಲಿ, ರಮೇಶ್ ಎಎಸ್ಐ ಮತ್ತು ಸಿಬ್ಬಂದಿಗಳಾದ ಸಿಪಿಸಿ ರಾಜು ಕೆ.ಆರ್ ಮತ್ತು ಚಂದ್ರಾ ನಾಯ್ಕ್  ರವರುಗಳನ್ನೊಳಗೊಂಡ ತಂಡವನ್ನು ರಚನೆ ಮಾಡಲಾಗಿರುತ್ತದೆ.

    ಸದರಿ ತನಿಖಾ ತಂಡವು ಕೂಡಲೇ ಕಾರ್ಯ ಪ್ರವೃತ್ತರಾಗಿ ಪ್ರಕರಣ ದಾಖಲಾದ 24 ಗಂಟೆಯ ಒಳಗಾಗಿ ಆರೋಪಿತರಾದ 1 ರಾಹುಲ್ ಎ.ಆರ್ ಬಿನ್ ಅಣ್ಣಪ್ಪ ಕೆ.ಆರ್, 26 ವರ್ಷ, ಶ್ರೀರಾಮ ಬಡಾವಣೆ ಆಂಜನೇಯ ದೇವಸ್ಥಾನದ ಹತ್ತಿರ ದಾವಣೆಗೆರೆ ಟೌನ್ ಮತ್ತು 2] ಗಣೇಶ ಬಿನ್ ಹಾಲೇಶಪ್ಪ, 28 ವರ್ಷ, ಬೊಮ್ಮನಕಟ್ಟೆ ಬಿ ಬ್ಲಾಕ್ ಕ್ಯಾಂಪ್ ಶಿವಮೊಗ್ಗ ಟೌನ್ ರವರನ್ನು ಪತ್ತೆ ಹಚ್ಚಿ ದಿನಾಂಕಃ 28-01-2023 ರಂದು ದಸ್ತಗಿರಿ ಮಾಡಿ, ಪ್ರಕರಣಕ್ಕೆ ಸಂಬಂಧಿಸಿದ ಅಂದಾಜು ಮೌಲ್ಯ 1,09,250/-  ರೂ ಗಳ 30 ಗ್ರಾಂ ತೂಕದ ಬಂಗಾರದ ಆಭರಣಗಳು ಮತ್ತು 100 ಗ್ರಾಂ ತೂಕದ ಬೆಳ್ಳಿಯ ಚೈನ್ ಅನ್ನು ಅಮಾನತ್ತು ಪಡಿಸಿಕೊಂಡಿರುತ್ತಾರೆ.

  ಪ್ರಕರಣ ದಾಖಲಾದ 24 ಗಂಟೆಯ ಒಳಗಾಗಿ ಆರೋಪಿತರನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡಿದ ತನಿಖಾ ತಂಡದ ಉತ್ತಮ ಕಾರ್ಯವನ್ನು ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರು ಶ್ಲಾಘಿಸಿ ಬಹುಮಾನವನ್ನು ಘೋಷಿಸಿ ಅಭಿನಂದಿಸಿರುತ್ತಾರೆ...

ರಘುರಾಜ್ ಹೆಚ್.ಕೆ...9449553305...

Related Articles

1 comment

GeorgeZew July 20, 2025 - 7:17 am

Looking for the best haircut in town? MenSpire delivers tailored precision cuts, expert grooming, and a luxe vibe. Book now for a refined, confidence-boosting transformation.

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...