Home ರಾಜ್ಯಬಜರಂಗದಳ ಕಾರ್ಯಕರ್ತರ ಮಿಂಚಿನ ಕಾರ್ಯಾಚರಣೆ, ಅಧಿಕಾರಿಗಳ ಸಾಥ್ 4 ಕ್ವಿಂಟಲ್ ಗೋಮಾಂಸ ವಶ….

ಬಜರಂಗದಳ ಕಾರ್ಯಕರ್ತರ ಮಿಂಚಿನ ಕಾರ್ಯಾಚರಣೆ, ಅಧಿಕಾರಿಗಳ ಸಾಥ್ 4 ಕ್ವಿಂಟಲ್ ಗೋಮಾಂಸ ವಶ….

by EDITOR NEWS WARRIORS
0 comments

ಗೃಹಸಚಿವರ ತವರಲ್ಲಿ ಅಧಿಕಾರಿಗಳು ಹಾಗೂ ಬಜರಂಗದಳ ಕಾರ್ಯಕರ್ತರ ಮಿಂಚಿನ ಕಾರ್ಯಾಚರಣೆ, ಗೋಮಾಂಸ ಸಾಗಾಟ ಜಾಲವನ್ನು ಭೇಧಿಸಿದ ಆಗುಂಬೆಯ ಪೋಲಿಸ್ ಹಾಗೂ ಅರಣ್ಯ ತಪಾಸಣಾ ಸಿಬ್ಬಂದಿ.

ಶಿವಮೊಗ್ಗದಿಂದ ಮಂಗಳೂರಿಗೆ ಗೋಮಾಂಸ ಸಾಗಿಸುತ್ತಿದ್ದ ಇರ್ಷಾದ್ ಬಿನ್ ಮುಸ್ತಫಾ ಕಂಕನಾಡಿ ಹಾಗೂ ದೇರಳಕಟ್ಟೆಯ ಇಮ್ತಿಯಾಜ್ ಬಿನ್ ಹಸನಬ್ಬ ಎಂಬುವವರನ್ನು ತೀರ್ಥಹಳ್ಳಿ ತಾಲೂಕು ಆಗುಂಬೆ ಅರಣ್ಯ ಇಲಾಖೆ ತಪಾಸಣಾ ಕೇಂದ್ರದಲ್ಲಿ ಬಂಧಿಸಲಾಗಿದೆ.

ಈ ಕಾರ್ಯಾಚರಣೆಯಲ್ಲಿ
ತೀರ್ಥಹಳ್ಳಿಯ ವಿಶ್ವಹಿಂದೂ ಪರಿಷತ್ ಭಜರಂಗದಳದ ಮುಖಂಡರು ಹಾಗೂ ಕಾರ್ಯಕರ್ತರ ತಂಡದ ಜತೆ ಆಗುಂಬೆ ಘಟಕದ ಭಜರಂಗದಳ ಪ್ರಮುಖರು ಹಾಗೂ ಕಾರ್ಯಕರ್ತರು ಸಹಕಾರ ನೀಡಿದರು.

ಎ.ಎನ್.ಎಸ್ ನ ಸಿಬ್ಬಂದಿಯಾದ ಪ್ರವೀಣ್ ರವರು ಹಾಗೂ ಅರಣ್ಯ ತನಿಖಾ ಠಾಣೆಯ ಜಗದೀಶ್ ರವರು ಜೀವದ ಹಂಗು ತೊರೆದು ವಾಹನ ಅಡ್ಡಗಟ್ಟಿ ಗೋ ಮಾಂಸ ದಂಧೆಕೋರರನ್ನು ಬಂಧಿಸಲು ಸಹಕರಿಸಿದ್ದಾರೆ. ತಮ್ಮ ಇಲಾಖೆಯ ಕೆಲಸಗಳ ಜತೆಗೆ ನೆರೆ, ಅಪಘಾತಗಳಂತಹ ಸಮಯದಲ್ಲಿ ಸಹಾಯಹಸ್ತ ನೀಡುವ ಸಮಾಜಮುಖಿ ಕೆಲಸದಲ್ಲಿ ಈ ಸಿಬ್ಬಂದಿಗಳು ತೊಡಗಿಸಿಕೊಂಡಿದ್ದಾರೆ. ಆಗುಂಬೆಯ ಪಿ.ಎಸ್.ಐ ಯವರಾದ ಶಿವಕುಮಾರ್ ರವರು ಯಾವುದೇ ಒತ್ತಡಕ್ಕೆ ಮಣಿಯದೇ ಗೋಮಾತೆಯ ವಿಚಾರದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು ಇಂದೂ ಕೂಡಾ ಅಪರಾಧಿಗಳನ್ನು ಬಂಧಿಸಿ ಎಫ್.ಐ.ಆರ್ ದಾಖಲಿಸಿದ್ದು ಸ್ಥಳೀಯರು ಈ ಎಲ್ಲಾ ಸಿಬ್ಬಂದಿಗಳನ್ನು ಪ್ರಶಂಸಿಸಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಸಹಕರಿಸಿದ ಎಲ್ಲ ಕಾರ್ಯಕರ್ತರಿಗೂ ಸಾರ್ವಜನಿಕರಿಗೂ ಹಾಗೂ ಸೂಕ್ತ ಕಾನೂನು ಕ್ರಮ ಕೈಗೊಂಡ ಇಲಾಖೆಯ ಅಧಿಕಾರಿಗಳಿಗೂ ವಿಶ್ವ ಹಿಂದೂ ಪರಿಷತ್ ಬಜರಂಗದಳ ತೀರ್ಥಹಳ್ಳಿ ಹಾಗೂ ಆಗುಂಬೆ ವಲಯ ಧನ್ಯವಾದಗಳನ್ನು ಸಲ್ಲಿಸಿದೆ….

ವರದಿ.. ರಘುರಾಜ್ ಹೆಚ್.ಕೆ….

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ….9449553305/7892830899…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...