Home ರಾಜ್ಯIAS IPS tussled by Govt :ಐಎಎಸ್,ಐಪಿಎಸ್ ಅಧಿಕಾರಿಗಳ ಟಾಕ್ ವಾರ್..!!ಮುಜುಗರದಿಂದ ತಪ್ಪಿಸಿಕೊಂಡ ಸರ್ಕಾರ..!!

IAS IPS tussled by Govt :ಐಎಎಸ್,ಐಪಿಎಸ್ ಅಧಿಕಾರಿಗಳ ಟಾಕ್ ವಾರ್..!!ಮುಜುಗರದಿಂದ ತಪ್ಪಿಸಿಕೊಂಡ ಸರ್ಕಾರ..!!

by EDITOR NEWS WARRIORS
1 comment

ನಿರಂತರವಾಗಿ ಸಾಮಾಜಿಕ ಜಾಲತಾಣಗಳ ಹಾಗೂ ಮಾಧ್ಯಮಗಳ ಮುಂದೆ ಬಹಿರಂಗವಾಗಿ ಕಿತ್ತಾಡಿಕೊಂಡು, ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿದ್ದ ಐಪಿಎಸ್ ಅಧಿಕಾರಿ ಡಿ. ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ… ಅವರಿಗೆ ಸ್ಥಳ ನಿಯೋಜನೆ ಮಾಡದೇ ವರ್ಗಾವಣೆ ಮಾಡಲಾಗಿದೆ. ಡಿ. ರೂಪಾ ಅವರ ಪತಿ, ಐಎಎಸ್​ ಅಧಿಕಾರಿ ಮೌನೀಶ್ ಮೌದ್ಗಿಲ್ ಅವರನ್ನೂ ಸಹ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ(ಡಿಪಿಆರ್)ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ನಿನ್ನೆಯಷ್ಟೇ ಇಬ್ಬರು ಮಹಿಳಾ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದ ಸರ್ಕಾರ, ಇಂದು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಹಾಗೂ ಕರಕುಶಲ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಡಿ.

ರೂಪಾ ಅವರಿಗೆ ಯಾವುದೇ ಹುದ್ದೆ ನೀಡದೆ ವರ್ಗಾವಣೆ ಮಾಡಿದೆ. ಮೌನೀಶ್ ಮೌದ್ಗಿಲ್ ಅವರ ವರ್ಗಾವಣೆಯಿಂದ ತೆರವಾದ ಸರ್ವೆ ಮತ್ತು ಲ್ಯಾಂಡ್ ರೆಕಾರ್ಡ್ ಇಲಾಖೆಯ ಆಯುಕ್ತರ ಹುದ್ದೆಗೆ ಅಲ್ಲಿಯೇ ಹೆಚ್ಚುವರಿ ನಿದೇಶಕರಾಗಿದ್ದ ಸಿ.ಎನ್.ಸುಧೀಂದ್ರ ಅವರನ್ನು ನೇಮಿಸಲಾಗಿದೆ. ಧಾರ್ಮಿಕ ದತ್ತಿ ಇಲಾಖೆಯ ಆಯಕ್ತರಾಗಿದ್ದ ರೋಹಿಣಿ ಸಿಂಧೂರಿ ಅವರ ಸ್ಥಾನಕ್ಕೆ ಬಸವರಾಜೇಂದ್ರ ಎಚ್ ಅವರನ್ನು ನೇಮಕ ಮಾಡಲಾಗಿದ್ದು, ಡಿ.ರೂಪಾ ಅವರ ಸ್ಥಾನಕ್ಕೆ ಭಾರತಿ.ಡಿ ಎಂಬುವವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಘುರಾಜ್ ಹೆಚ್.ಕೆ…9449553305…

Related Articles

1 comment

GeorgeZew July 20, 2025 - 8:01 pm

Looking for the best haircut in town? MenSpire delivers tailored precision cuts, expert grooming, and a luxe vibe. Book now for a refined, confidence-boosting transformation.

Reply

Leave a Comment

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!