Home ರಾಜ್ಯಸಿ,ಟಿ ರವಿ ವಿವಾದಾತ್ಮಕ ಹೇಳಿಕೆ ನೆಹರುಗೆ ಹುಕ್ಕಾ ಬೇಕಿತ್ತು ಹೇಳಿಕೆ ಬೆನ್ನಲ್ಲೇ,ವಾಜಪೇಯಿಗೆ ಎರಡು ಪೆಗ್ ಸಾಕಾಗಿತ್ತು,‌ಕಾಂಗ್ರೆಸ್ ಶಾಸಕ ವಿವಾದಾತ್ಮಕ ಹೇಳಿಕೆ….. (ಅಪರೂಪದ ಫೋಟೋಗಳ ಸಮೇತ)….

ಸಿ,ಟಿ ರವಿ ವಿವಾದಾತ್ಮಕ ಹೇಳಿಕೆ ನೆಹರುಗೆ ಹುಕ್ಕಾ ಬೇಕಿತ್ತು ಹೇಳಿಕೆ ಬೆನ್ನಲ್ಲೇ,ವಾಜಪೇಯಿಗೆ ಎರಡು ಪೆಗ್ ಸಾಕಾಗಿತ್ತು,‌ಕಾಂಗ್ರೆಸ್ ಶಾಸಕ ವಿವಾದಾತ್ಮಕ ಹೇಳಿಕೆ….. (ಅಪರೂಪದ ಫೋಟೋಗಳ ಸಮೇತ)….

by EDITOR NEWS WARRIORS
0 comments
ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ,ಟಿ ರವಿ ಸದಾ ಒಂದಿಲ್ಲೊಂದು ಹೇಳಿಕೆ ನೀಡುತ್ತಾ ಸುದ್ದಿಯಲ್ಲಿರುತ್ತಾರೆ.

ಈಗವರು ಸುದ್ದಿಯಲ್ಲಿರುವುದು ಕಾಂಗ್ರೆಸ್ ನ ಹಿರಿಯ ನಾಯಕರ ವಿರುದ್ಧ ನೀಡುತ್ತಿರುವ ಹೇಳಿಕೆಗಳು.ಹಲವು ಟೀಕೆ-ಟಿಪ್ಪಣಿಗಳಿಗೆ ಗುರಿಯಾಗುತ್ತಿದೆ. ನೆಹರು ಹುಕ್ಕಾ ಸೇದುತ್ತಿದ್ದರು ಡ್ರಿಂಕ್ಸ್ ಮಾಡುತ್ತಿದ್ದರು. ಆದ್ದರಿಂದ ಹಲವು ಯೋಜನೆಗಳಿಗೆ ನೆಹರು, ಇಂದಿರಾ ಹೆಸರಿಡುವ ಕಾಂಗ್ರೆಸ್ನನವರು ಬಾರ್ ಗಳಿಗೆ , ಹುಕ್ಕಾ ಸೆಂಟರ್ ಗಳಿಗೆ ನೆಹರು ,ಇಂದಿರಾ, ಹೆಸರಿಡಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಹೇಳಿಕೆ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿರುವ ಕಾಂಗ್ರೆಸ್ ನಾಯಕರುಗಳು ಸಿ,ಟಿ ರವಿ ಇನ್ನೂ ಬಚ್ಚಾ ಎಂದು ಕೆಲವರು ಹೇಳಿದರೆ, ಸ್ವಾತಂತ್ರ್ಯ ಬಂದಾಗ ಸಿಟಿ ರವಿ ಇನ್ನೂ ಹುಟ್ಟಿರಲಿಲ್ಲ ಎಂದು ಕೆಲವರು ಹೇಳುತ್ತಿದ್ದಾರೆ.
ಆದರೆ ಮಲ್ಲಿಕಾರ್ಜುನ ಖರ್ಗೆ ಪುತ್ರ ಪ್ರಿಯಾಂಕ ಖರ್ಗೆ ಒಂದು ಹೆಜ್ಜೆ ಮುಂದೆ ಹೋಗಿ ಅಜಾತಶತ್ರು ಎಂದು ಕರೆಸಿಕೊಳ್ಳುತ್ತಿದ್ದ. ಬಿಜೆಪಿಯ ಪ್ರಶ್ನಾತೀತ ನಾಯಕರಾಗಿದ್ದ ದಿವಂಗತ ಮಾಜಿ ಪ್ರಧಾನಿ ವಾಜಪೇಯಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಪ್ರಿಯಾಂಕ ಖರ್ಗೆ ವಾಜಪೇಯಿ ಡ್ರಿಂಕ್ ರ್ ಆಗಿದ್ದರು. ಅವರಿಗೆ ಡೈಲಿ ಎರಡು ಪೆಗ್ ವಿಸ್ಕಿ ಬೇಕಾಗಿತ್ತು.
ಈಗ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ ವಾಜಪೇಯಿ ಹೆಸರನ್ನು ಬಾರ್ ಗಳಿಗೆ ಇಡಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹಾಗೇ ಮುಂದುವರೆದು ವೀರ ಸಾವರ್ಕರ್ ಯಾರು? ಅವರ ಕೊಡುಗೆ ಭಾರತಕ್ಕೆ ಏನು? ಎಂದು ಪ್ರಶ್ನೆ ಮಾಡಿದ್ದಾರೆ.

ಒಟ್ಟಿನಲ್ಲಿ ಮಾಜಿ ಪ್ರಧಾನ ಮಂತ್ರಿಗಳ ಹೆಸರು ಗಳನ್ನು ತೆಗೆದುಕೊಂಡು ಈಗಿನ ಕಾಂಗ್ರೆಸ್, ಬಿಜೆಪಿ ನಾಯಕರುಗಳು ವಿವಾದದ ಹೇಳಿಕೆಗಳನ್ನು ನೀಡುವುದು ಎಷ್ಟು ಸರಿ ಆ ಮೂಲಕ ಸಮಾಜದಲ್ಲಿ ಸಾಮರಸ್ಯವನ್ನು ಹಾಳು ಮಾಡುವುದು ಇವರ ಉದ್ದೇಶನಾ? ಹೆಸರು ಮಾಡುವುದು ಇವರ ಉದ್ದೇಶನಾ? ಕೋವಿ ಡ್ ಸಾಂಕ್ರಮಿಕ ಕಾಯಿಲೆ, ವ್ಯಾಪಕ ಮಳೆ, ಜನರ ಆರ್ಥಿಕ ಸಂಕಷ್ಟ ಕೇಳುವ ಬದಲು ಈ ತರದ ಅಸಂಬದ್ಧ ಹೇಳಿಕೆಗಳನ್ನು ನೀಡುತ್ತಾ ಕಾಲಹರಣ ಮಾಡುವುದು ಎಷ್ಟು ಸರಿ? ಎನ್ನುವುದು ಸಾಮಾನ್ಯ ಜನರ ಪ್ರಶ್ನೆ ಇನ್ನುಮುಂದಾದರೂ ಇದಕ್ಕೆ ಬ್ರೇಕ್ ಹಾಕುತ್ತಾರ? ಜನರ ಸಂಕಷ್ಟಗಳಿಗೆ ಧ್ವನಿ ಯಾಗುತ್ತಾರ? ಕಾದು ನೋಡೋಣ….

ವರದಿ …ರಘುರಾಜ್ ಹೆಚ್. ಕೆ…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...