Home ರಾಜ್ಯComplaint against Harathalu Halappa to former Chief Minister Yeddyurappa: ಸಮಾಧಾನದಿಂದ ದೂರು ಕೇಳಿಸಿಕೊಂಡ ಬಿಎಸ್ ವೈ ಹೇಳಿದ್ದೇನು..?!

Complaint against Harathalu Halappa to former Chief Minister Yeddyurappa: ಸಮಾಧಾನದಿಂದ ದೂರು ಕೇಳಿಸಿಕೊಂಡ ಬಿಎಸ್ ವೈ ಹೇಳಿದ್ದೇನು..?!

by EDITOR NEWS WARRIORS
5 comments

ಸಾಗರ ವಿಧಾನ ಸಭಾ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ವಿರುದ್ದ ಬಿಜೆಪಿ ನಾಯಕರು,ಸಂಘ ಪರಿವಾರದ ಪ್ರಮುಖರು ಮಾಜಿ ಮುಖ್ಯಮಂತ್ರಿ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರಿಗೆ ದೂರು ನೀಡಿದ್ದಾರೆ.

ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ನೀಡದಂತೆ ವಿರೋಧಿ ಬಣ ಒತ್ತಡ ಹಾಕಿದೆ .ಶಿಕಾರಿಪುರದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರರನ್ನುಭೇಟಿ ಮಾಡಿದ ವಿರೋಧಿ ಬಣ ಬಹಳಷ್ಟು ಹೊತ್ತು ಚರ್ಚೆ ನಡೆಸಿದೆ. ೨೦೦೮ರಿಂದಲೂ ನಿಮ್ಮ ಗರಡಿಯಲ್ಲೇ ಬೆಳೆದಿರುವ ಹಾಲಪ್ಪನವರು ಪ್ರಬುದ್ಧ ರಾಜಕಾರಣಿಯಂತೆ ಕಾಣಿಸುತ್ತಾರೆ. ಇಲ್ಲಿ ಒಂದು ಬಾರಿ ಗೆದ್ದು ಜನಾಂಗೀಯ ಹಲ್ಲೆ ಮಾಡಿಸಿರುವ ಅವರು, ಮತ್ತೊಮ್ಮೆ ಗೆದ್ದರೆ ಸಾಗರವನ್ನೇ ದೋಚಿಬಿಡುತ್ತಾರೆ.

೨೦೧೮ರಲ್ಲಿ ನಿಮಗೆ ಮನಸ್ಸಿಲ್ಲದಿದ್ದರೂ ನಾವೇ ಹಠ ಮಾಡಿ ಹಾಲಪ್ಪನವರಿಗೆ ಟಿಕೆಟ್ ಗೆಲ್ಲಿಸಿದ್ದೆವು. ಕೊಡಿಸಿ ಆದರೆ ನಂತರ ಅವರ ಅವಾಂತರ ಮಿತಿ ಮೀರಿದೆ. ಹಾವಳಿ ತಡೆಯಲು ನಮಗೂ ಸಾಧ್ಯವಾಗುತ್ತಿಲ್ಲ. ಆದ್ದರಿಂದ ಪಕ್ಷ, ತತ್ವಸಿದ್ಧಾಂತಗಳಿಗೆ ಬದ್ಧರಾಗಿರುವ, ಪ್ರಾಮಾಣಿಕವಾಗಿ ಕೆಲಸ ಮಾಡುವವರಿಗೆ ಟಿಕೆಟ್ ಕೊಡಿ ಎಂದು ವಿರೋಧಿಗಳು ಮಾಜಿ ಸಿಎಂ ಎದುರು ಒಕ್ಕೊರಲ ಮನವಿ ಮಾಡಿದ್ದಾರೆ.

ಕೇವಲ ದೂರುಗಳನ್ನು ಮಾತ್ರ ಹೊತ್ತೊಯ್ಯದೆ, ಅವೆಲ್ಲಕ್ಕೂ ಹತ್ತಾರು ಸಾಕ್ಷಿಗಳನ್ನು ಒದಗಿಸಿದ್ದಾರೆ. ಸದ್ಯ ಹಾಲಪ್ಪನವರನ್ನು ಮಾತನಾಡಿಸುವುದು ಕಷ್ಟ ತಮ್ಮದೇ ಗುಂಪು ಕಟ್ಟಿಕೊಂಡು ತಿರುಗುತ್ತಾರೆ. ಹಿಂದೂಪರ ಸಂಘಟನೆ ಗಳ ಕಾಠ್ಯಕ್ರಮಕ್ಕೆ ಬಾರದಿರುವುದು, ಪ್ರಮುಖವಾಗಿ ಲಕ್ಷ್ಮೀ ಪೂಜೆಗೂ ಆಗಮಿಸದೆ ಅಸಡ್ಡೆ ಮಾಡಿದ್ದು ಕಾರಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ, ಪರ್ಸೆಂಟೇಜ್ ರಾಜಕೀಯ, ಅವರ ಆಪ್ತರ ಅಹಂಕಾರದ ಮಾತುಗಳು, ಹೀಗೆ ಪಟ್ಟಿ ದೊಡ್ಡದಿದೆ. ಜತೆಯಲ್ಲಿ ಶಾಸಕರನ್ನು ಸಂಘಟನೆಯ ಬೇರ್ಪಡಿಸುವ ಹಿರಿಯರಿಂದ ಪಿತೂರಿಯಲ್ಲಿ ಕೆಲ ಆಪ್ತರ ಹಿತ್ತಾಳೆ ಕಿವಿ ಕಾರಣವಾಗಿದೆ.
ಹಾಲಪ್ಪನವರ ವಿರುದ್ಧ ದೂರು ನೀಡಿದವರ ವಿರುದ್ಧ ಹಲ್ಲೆ ನಡೆಸುವುದು, ಅವರ ಜಾಗಕ್ಕೆ ತೊಂದರೆ ಕೊಡುವುದು, ಹೆದರಿಸುವಂಥ ಚಟುವಟಿಕೆಗಳೂ ನಡೆಯುತ್ತಿವೆ. ಆದ್ದರಿಂದ ತಾಲೂಕಿನ ಕಾನೂನು ಸುವ್ಯವಸ್ಥೆ ಹದಗೆಡುತ್ತಿದ್ದು, ಇದನ್ನು ಸರಿಪಡಿಸುವ ಉದ್ದೇಶದಿಂದ ಹೊಸಬರನ್ನು ಆಯ್ಕೆ ಮಾಡಬೇಕು ಎಂದು ಎಲ್ಲರೂ ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ತಂಡ ಇಷ್ಟಕ್ಕೆ ಸುಮ್ಮನಾಗದೆ ಎಲ್ಲ ದಾಖಲೆಗಳನ್ನು ಹಿಂದಿಗೆ ಭಾಷಾಂತರಿಸಿ ಕೇಂದ್ರ ನಾಯಕರಿಗೆ ಮತ್ತು ಸಂಘದ ಹಿರಿಯರಿಗೆ ಕಳುಹಿಸುವ ಸಿದ್ಧತೆಯಲ್ಲಿ ತೊಡಗಿದೆ. ವಿಶೇಷವೆಂದರೆ ಮಾಜಿ ಸಿಎಂ ಹಾಗೂ ವಿಜಯೇಂದ್ರ ಅವರು ಈ ಎಲ್ಲ ಆರೋಪಗಳನ್ನು ಸಮಾಧಾನದಿಂದ ಆಲಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.


ಸಾಗರದ ಆಶ್ರಯ ಸಮಿತಿ ಅಧ್ಯಕ್ಷ ಯು.ಎಚ್. ರಾಮಪ್ಪ, ಹಿರಿಯ ವಕೀಲ ಮತ್ತು ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ಕೆ.ಎನ್.ಶ್ರೀಧರ್, ಶಿಮುಲ್ ಅಧ್ಯಕ್ಷ ಶ್ರೀಪಾದ ಹೆಗಡೆ ನಿಸರಾಣಿ, ವೀರಶೈವ ಮುಖಂಡರಾದ ಜಗದೀಶ್ ಗೌಡ, ಕುಮಾರ್, ವಸಂತ್ ಬಿಜೆಪಿ ಮುಖಂಡರಾದ ಸತೀಶ್ ಹಕ್ರೆ, ರಾಘವೇಂದ್ರ ಶೇಟ್, ಕೃಷ್ಣಮೂರ್ತಿ ಮಂಕಳಲೆ ಮತ್ತಿತರ ಮುಖಂಡರು ನಿಯೋಗದಲ್ಲಿ ಇದ್ದರು…

ರಘುರಾಜ್ ಹೆಚ್. ಕೆ…9449553305…

Related Articles

5 comments

RichardBiast June 23, 2025 - 8:35 pm

Эта публикация завернет вас в вихрь увлекательного контента, сбрасывая стереотипы и открывая двери к новым идеям. Каждый абзац станет для вас открытием, полным ярких примеров и впечатляющих достижений. Подготовьтесь быть вовлеченными и удивленными каждый раз, когда продолжите читать.
Детальнее – https://vyvod-iz-zapoya-1.ru/

Reply
herpafend official January 31, 2026 - 3:57 am

**herpafend official**

Herpafend is a natural wellness formula developed for individuals experiencing symptoms related to the herpes simplex virus. It is designed to help reduce the intensity and frequency of flare-ups while supporting the bodys immune defenses.

Reply
prodentim January 31, 2026 - 4:34 am

**prodentim**

ProDentim is a distinctive oral-care formula that pairs targeted probiotics with plant-based ingredients to encourage strong teeth, comfortable gums, and reliably fresh breath

Reply
purdentix March 17, 2026 - 5:10 am

**purdentix**

PurDentix is a revolutionary oral health supplement designed to support strong teeth and healthy gums. It tackles a wide range of dental concerns

Reply
mitolyn March 17, 2026 - 5:14 am

**mitolyn**

Mitolyn is a carefully developed, plant-based formula created to help support metabolic efficiency and encourage healthy, lasting weight management.

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...