Home ರಾಷ್ಟ್ರೀಯPadma Bhushan, Padma Vibhushan, Padma Awards are honored by the President to eminent persons who have achieved in various fields. ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ, ಖ್ಯಾತ ಸಾಹಿತಿ ಎಸ್ ಎಲ್ ಭೈರಪ್ಪ, ಸುಧಾ ಮೂರ್ತಿ, ಸೇರಿದಂತೆ 106 ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ರಿಂದ ಪ್ರಶಸ್ತಿ ಪ್ರಧಾನ..!!

Padma Bhushan, Padma Vibhushan, Padma Awards are honored by the President to eminent persons who have achieved in various fields. ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ, ಖ್ಯಾತ ಸಾಹಿತಿ ಎಸ್ ಎಲ್ ಭೈರಪ್ಪ, ಸುಧಾ ಮೂರ್ತಿ, ಸೇರಿದಂತೆ 106 ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ರಿಂದ ಪ್ರಶಸ್ತಿ ಪ್ರಧಾನ..!!

by EDITOR NEWS WARRIORS
0 comments

ನವದೆಹಲಿ : ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 106 ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರಧಾನ ಮಾಡಿದ್ದಾರೆ.

2023ನೇ ಸಾಲಿನಲ್ಲಿ 6 ಪದ್ಮವಿಭೂಷಣ, 9 ಪದ್ಮಭೂಷಣ ಮತ್ತು 91 ಪದ್ಮ ಪ್ರಶಸ್ತಿಗಳನ್ನು ಘೋಷಿಸಲಾಗಿತ್ತು. ರಾಷ್ಟ್ರಪತಿ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುರ್ಮು ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರಿಗೆ ಪದ್ಮವಿಭೂಷಣ ಪ್ರಶಸ್ತಿಪ್ರಧಾನ ಮಾಡಲಾಗಿದೆ. ಇನ್ನು ಸಾಹಿತಿ ಭೈರಪ್ಪ ಹಾಗೂ ಸುಧಾಮೂರ್ತಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಉಳಿದಂತೆ ಕರ್ನಾಟಕದಿಂದ ವಿಜ್ಞಾನಿ ಖಾದರ್‌ವಲ್ಲಿ ದುಡೇಕುಲ, ಉಮ್ಮತ್ತಾಟ್‌ ನೃತ್ಯ ಕಲಾವಿದೆ ರಾಣಿ ಮಾಚಯ್ಯ, ತಮಟೆ ವಾದಕ ಮುನಿವೆಂಕಟಪ್ಪ, ರಶೀದ್‌ ಅಹಮದ್‌ ಖಾದ್ರಿ, ಎಸ್‌.ಸುಬ್ಬರಾಮನ್‌ ಅವರಿಗೂ ಪ್ರಶಸ್ತಿ ಪ್ರಧಾನ ಮಾಡಲಾಗಿದೆ. ಇವರಲ್ಲದೇ ಖ್ಯಾತ ಗಾಯಕಿ ವಾಣಿ ಜಯರಾಂ ಹಾಗೂ ಆಸ್ಕರ್‌ ಪ್ರಶಸ್ತಿ ಗೆದ್ದ ಸಂಗೀತ ನಿರ್ದೇಶಕ ಎಂ.ಎಂ.ಕೀರವಾಣಿ ಅವರು ಸಹ ಪ್ರಶಸ್ತಿ ಸ್ವೀಕರಿಸಿದ್ದಾರೆ.

ವಾಸ್ತುಶಿಲ್ವ ಸಾಧನೆಯಲ್ಲಿ ಗುಜರಾತ್‌ನ ಬಾಲಕೃಷ್ಣ ದೋಶಿ(ಮರಣೋತ್ತರ), ಕಲಾ ಸಾಧನೆಗೈದ ಮಹಾರಾಷ್ಟ್ರದ ಝಾಕೀರ್ ಹುಸೈನ್, ಸಾರ್ವಜನಿಕ ವ್ಯವಹಾರ ಕ್ಷೇತ್ರದಲ್ಲಿ ಕರ್ನಾಟಕ ಮಾಜಿ ಸಿಎಂ ಎಂಎಸ್ ಕೃಷ್ಣ, ಮೆಡಿಸಿನ್ ಕ್ಷೇತ್ರದಲ್ಲಿನ ಸಾಧನೆಗೆ ಪಶ್ಚಿಮ ಬಂಗಾಳದ ದಿಲೀಪ್ ಮಹಾಲಾನಬಿಸ್ (ಮರಣೋತ್ತರ), ವಿಜ್ಞಾನ ಹಾಗೂ ಎಂಜಿನೀಯರ್, ಅಮೆರಿಕದ ಶ್ರೀನಿವಾಸ್ ವರ್ಧನ್, ಸಾರ್ವಜನಿಕ ವ್ಯವಹಾರ ಕ್ಷೇತ್ರದಲ್ಲಿ ಮುಲಾಯಂ ಸಿಂಗ್ ಯಾದವ್(ಮರಣೋತ್ತರ) ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ಪ್ರಧಾನ ಮಾಡಲಾಗಿದೆ.

ಸಾಹಿತ್ಯ ಕ್ಷೇತ್ರದಲ್ಲಿ ಸಾಧನಗೈದಿರುವ ಕರ್ನಾಟಕದ ಎಸ್‌ಎಲ್ ಭ್ಯರಪ್ಪ , ಟ್ರೇಡ್ ಹಾಗೂ ಇಂಡಸ್ಟ್ರಿ ವಿಭಾಗದಲ್ಲಿ ಮಹಾರಾಷ್ಟ್ರದ ಕುಮಾರ್ ಮಂಗಲಂ, ವಿಜ್ಞಾನ ಮತ್ತು ಇಂಜಿನಿಯರಿಂಗ್‌ನಲ್ಲಿ ಮಹಾರಾಷ್ಟ್ರದಲ್ಲಿ ದೀಪಕ್ ಧರ್, ಕಲಾ ಕ್ಷೇತ್ರದಲ್ಲಿನ ಸಾಧಕಿ ತಮಿಳುನಾಡಿನ ವಾಣಿ ಜಯರಾಂ ಸೇರಿದಂತೆ ಪ್ರಮುಖ ಗಣ್ಯರಿಗೆ ಪದ್ಮ ಭೂಷಣ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ…

ಷೇರು ಮಾರುಕಟ್ಟೆಯಲ್ಲಿ ಅಪ್ರತಿಮ ಸಾಧನೆ ಮೂಲಕ ದೇಶದ ಹೂಡಿಕೆ ಕ್ಷೇತ್ರದಲ್ಲಿ ಹೊಸ ಸಂಚಲನ ಸೃಷ್ಟಿಸಿದ ರಾಕೇಶ್ ಜುಂಜುನವಾಲ ಇತ್ತೀಚೆಗೆ ನಿಧನರಾಗಿದ್ದಾರೆ. ರಾಕೇಶ್ ಜುಂಜುನುವಾಲ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ಪ್ರಧಾನ ಮಾಡಲಾಗಿದೆ. ರಾಕೇಶ್ ಜುಂಜುನವಾಲ್ ಪರವಾಗಿ ಅವರ ಪತ್ನಿ ರೇಖಾ ಜುಂಜುನವಾಲ ಪ್ರಶಸ್ತಿ ಸ್ವೀಕರಿಸಿದರು.

ರಘುರಾಜ್ ಹೆಚ್.ಕೆ..9449553305…

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...