Home ಶಿವಮೊಗ್ಗಶ್ರೀರಾಮನವಮಿ ಅಂಗವಾಗಿ
ಜೆಸಿಐ ಶಿವಮೊಗ್ಗ ಶರಾವತಿ ಘಟಕದಿಂದ ಶ್ರೀ ಪುಟ್ಟರಾಜ ಗವಾಯಿಗಳ ಅಂಧ ಮಕ್ಕಳ ಸಂಗೀತ ಶಾಲೆಗೆ ದಿನಸಿ ಸಾಮಾನು-ತರಕಾರಿ ವಿತರಣೆ..!!

ಶ್ರೀರಾಮನವಮಿ ಅಂಗವಾಗಿ
ಜೆಸಿಐ ಶಿವಮೊಗ್ಗ ಶರಾವತಿ ಘಟಕದಿಂದ ಶ್ರೀ ಪುಟ್ಟರಾಜ ಗವಾಯಿಗಳ ಅಂಧ ಮಕ್ಕಳ ಸಂಗೀತ ಶಾಲೆಗೆ ದಿನಸಿ ಸಾಮಾನು-ತರಕಾರಿ ವಿತರಣೆ..!!

by EDITOR NEWS WARRIORS
0 comments

ಶಿವಮೊಗ್ಗ : ಜೆಸಿಐ-ಇಂಡಿಯಾ ಹಾಗೂ ಜೋನ್-೨೪ನ ದಾನ್ ಪ್ರಾಜೆಕ್ಟ್ ಅಡಿಯಲ್ಲಿ ಜೆಸಿಐ ಶಿವಮೊಗ್ಗ ಶರಾವತಿ ಘಟಕದಿಂದ ಶ್ರೀ ಪುಟ್ಟರಾಜ ಗವಾಯಿಗಳ ಅಂಧ ಮಕ್ಕಳ ಸಂಗೀತ ಶಾಲೆಗೆ ಒಂದು ತಿಂಗಳಿಗೆ ಬೇಕಾದ ದಿನಸಿ ಸಾಮಾನು-ತರಕಾರಿ ವಿತರಣೆ ಮಾಡಲಾಯಿತು.


ಈ ಸಂದರ್ಭದಲ್ಲಿ ಘಟಕಾಧ್ಯಕ್ಷರಾದ ಜೆಸಿ.ಶೋಭಾ ಸತೀಶ್ ಮಾತನಾಡಿ ಕೊಡುವ ಕೈಗಳು ಎಂದಿಗೂ ಬರಿದಾಗದಿರಲಿ, ಮಲೆನಾಡಿನಲ್ಲಿ ಅನೇಕ ಸಂಘ-ಸಂಸ್ಥೆಗಳು ಜನಸೇವೆಯಲ್ಲಿ ನಿರತವಾಗಿದೆ, ವಸತಿ ಸೌಕರ್ಯ ಹೊಂದಿರುವ ಈ ಅಂಧರ ಸಂಗೀತ ಶಾಲೆಯಲ್ಲಿ ಅನೇಕರು ಕಲಾವಿದರಾಗಿ ಹೊರಹೊಮ್ಮಿದ್ದಾರೆ, ಅದಕ್ಕೆ ಸಂಗೀತ ದೇವರೆಂದೇ ಪ್ರಸಿದ್ದಿಯಾಗಿರುವ ಶ್ರೀ ಪುಟ್ಟರಾಜ ಗವಾಯಿಗಳ ಕೃಪಾಕಟಾಕ್ಷವೇ ಸಾಕ್ಷೀಯಾಗಿದೆ, ಇಲ್ಲಿ ಕೂಡ ಯಾವ ನೀರಿಕ್ಷೆಗಳಿಲ್ಲದೆ ಸೇವೆ ಸಲ್ಲಿಸುತ್ತಿರುವವರು ಕಲಾವಿದರನ್ನಾಗಿ ರೂಪುಗೊಳಿಸಿ ಸಾರಸ್ವತಾಲೋಕದಲ್ಲಿ ಅಣಿಗೊಳಿಸುತ್ತಿರುವುದು ಶ್ಲಾಘನೀಯ ಎಂದರು.


ಐಪಿಪಿ.ಜೆಸಿ ಸೌಮ್ಯ ಅರಳಪ್ಪನವರು ಮಾತನಾಡಿ ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳು ಇಲ್ಲಿ ಸೇರ್ಪಡೆಯಾಗಿ ಉಚಿತವಾಗಿ ಸಂಗೀತ ಅಭ್ಯಾಸಿಗಳಾಗಿ ಭಕ್ತಿ ಶ್ರದ್ಧೆ ಹೊಂದಿರುವುದಕ್ಕೆ ಇಲ್ಲಿನ ಸಂಗೀತಮಯದ ವಾತಾವರಣವೇ ಕಾರಣವಾಗಿದೆ, ಭಗವಂತನ ಸೃಷ್ಟಿಯಲ್ಲಿ ಹುಟ್ಟು ಅಂಗವಿಕಲತೆ, ಅಂಧರಾಗಿರುವ ಮಕ್ಕಳು, ವಯಸ್ಕರು, ಸಂಗೀತ ಶಾಲೆಯಲ್ಲಿ ಆತ್ಮರಾಗವನ್ನು ಕಲಿತು ದೊಡ್ಡ-ದೊಡ್ಡ ವೇದಿಕೆಗಳಲ್ಲಿ ಪ್ರಸ್ತುತ ಪಡಿಸಿರುವುದು ಇಂದಿನ ರಿಯಾಲಿಟಿ ಶೋ ಗಳಲ್ಲಿ ನಾವು ನೋಡಿದ್ದೇವೆ ಈ ಸಂಸ್ಥೆಯಿಂದಲು ಸ್ಪರ್ಧಿಗಳಾಗಿರುವುದು ದರ್ಶಿಸಿದ್ದೇವೆ ಎನ್ನುವುದಕ್ಕೆ ಶ್ರೀ ಗಳ ಅಂತರ್ಮುಖಿ ಆಶೀರ್ವಾದವೇ ಕಾರಣ ಎನ್ನಬಹುದು ಎಲ್ಲಾ ಮಕ್ಕಳಿಗೂ ಒಳಿತಾಗಲಿ ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಜೆಸಿ. ಸ್ಮಿತಾ ಮೋಹನ್, ಜೆಸಿ.ಗಾರಾ.ಶ್ರೀನಿವಾಸ್, ಜೆಸಿ.ಪರಮೇಶ್ವರ, ಜೆಸಿ.ದಿವ್ಯಾ ಪ್ರವೀಣ್, ಜೆಸಿ.ಸ್ವಪ್ನಸಂತೋಷ್ ಗೌಡ, ಜೆಸಿ.ಚಿರಂಜೀವಿ ಬಾಬು, ಜೆಸಿ.ಚಂದ್ರಹಾಸ್ ಎನ್ ರಾಯ್ಕರ್, ಜೆಸಿ.ಮಂಜುನಾಥ್, ಜೆಸಿ.ಸಂದೇಶ್ ಸೇರಿದಂತೆ ಸಂಗೀತ ಶಾಲೆಯ ವ್ಯವಸ್ಥಾಪಕರು ಉಪಸ್ಥಿತರಿದ್ದರು….

ರಘುರಾಜ್ ಹೆಚ್.ಕೆ…9449553305…

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...