Home ರಾಜ್ಯಆಗಸ್ಟ್ 23ರಿಂದ ಪ್ರಥಮ ದ್ವಿತೀಯ ಪಿಯು ಕಾಲೇಜ್ ಪ್ರಾರಂಭ, ಮಾರ್ಗಸೂಚಿ ಪ್ರಕಟ ಏನಿದೆ ಮಾರ್ಗಸೂಚಿಯಲ್ಲಿ?

ಆಗಸ್ಟ್ 23ರಿಂದ ಪ್ರಥಮ ದ್ವಿತೀಯ ಪಿಯು ಕಾಲೇಜ್ ಪ್ರಾರಂಭ, ಮಾರ್ಗಸೂಚಿ ಪ್ರಕಟ ಏನಿದೆ ಮಾರ್ಗಸೂಚಿಯಲ್ಲಿ?

by EDITOR NEWS WARRIORS
1 comment

ಪ್ರಥಮ ಹಾಗೂ ದ್ವಿತೀಯ ಪಿಯುಸಿ ಕಾಲೇಜು ಆರಂಭಿಸುವ ಕುರಿತು ಸರ್ಕಾರದಿಂದ ಗೈಡ್​ಲೈನ್ಸ್ ಬಿಡುಗಡೆ ಆಗಿದೆ. ಶೇಕಡಾ 2 ಕ್ಕಿಂತ ಕಡಿಮೆ ಕೊರೊನಾ ಪಾಸಿಟಿವಿಟಿ ಇರುವ ಜಿಲ್ಲೆಗಳಲ್ಲಿ ಕಾಲೇಜು ತೆರೆಯಲು ಸೂಚಿಸಲಾಗಿದೆ. ಏಕಕಾಲದಲ್ಲಿ ಪ್ರಥಮ, ದ್ವಿತೀಯ ಪಿಯು ತರಗತಿ ನಡೆಸುವುದು ಎಂದು ಹೇಳಲಾಗಿದೆ. ವಾರದ ಮೊದಲ 3ದಿನ ಶೇಕಡಾ 50 ರಷ್ಟು ವಿದ್ಯಾರ್ಥಿಗಳಿಗೆ ಕ್ಲಾಸ್ ಮಾಡಬೇಕು. ಶೇಕಡಾ 50 ರಷ್ಟು ವಿದ್ಯಾರ್ಥಿಗಳು ಭೌತಿಕ ತರಗತಿಗಳಿಗೆ ಹಾಜರು ಆಗಬೇಕು. ಉಳಿದ ಶೇಕಡಾ 50 ರಷ್ಟು ವಿದ್ಯಾರ್ಥಿಗಳಿಗೆ ಮನೆಯಲ್ಲೇ ಆನ್​​ಲೈನ್​ ತರಗತಿ ನಡೆಸುವುದು. ಗುರುವಾರ, ಶುಕ್ರವಾರ, ಶನಿವಾರ ಉಳಿದ ಮಕ್ಕಳಿಗೆ ಕ್ಲಾಸ್​ ನಡೆಸುವ ಬಗ್ಗೆ ಸೂಚನೆ ಕೊಡಲಾಗಿದೆ.

ಆಗಸ್ಟ್ 23 ರಿಂದ ಪಿಯು ಕಾಲೇಜು ತರಗತಿಗಳು ಆರಂಭವಾಗಲಿದೆ. ಪ್ರಥಮ, ದ್ವಿತೀಯ ಪಿಯುಸಿ ತರಗತಿ ಏಕಕಾಲಕ್ಕೆ ಆರಂಭ ಆಗಲಿದೆ. ಪ್ರಥಮ, ದ್ವಿತೀಯ ಪಿಯುಸಿ ಆರಂಭಕ್ಕೆ ಮಾರ್ಗಸೂಚಿ ಪ್ರಕಟ ಆಗಿದೆ. ಕಾಲೇಜು ಆರಂಭಿಸುವ ಕುರಿತು ಸರ್ಕಾರದಿಂದ ಗೈಡ್​ಲೈನ್ಸ್ ನೀಡಲಾಗಿದೆ. ಅದರಂತೆ, ಶೇಕಡಾ 2 ಕ್ಕಿಂತ ಕಡಿಮೆ ಪಾಸಿಟಿವಿಟಿ ಇರುವ ಜಿಲ್ಲೆಗಳಲ್ಲಿ ಕಾಲೇಜು ಓಪನ್ ಆಗಲಿದೆ. ಏಕಕಾಲದಲ್ಲಿ ಪ್ರಥಮ, ದ್ವಿತೀಯ ಪಿಯುಸಿ ತರಗತಿ ನಡೆಸುವುದು ಎಂದು ಹೇಳಲಾಗಿದೆ. ವಾರದ ಮೊದಲ 3ದಿನ ಶೇಕಡಾ 50 ರಷ್ಟು ವಿದ್ಯಾರ್ಥಿಗಳಿಗೆ ಮತ್ತು ನಂತರ ಶೇಕಡಾ 50 ರಷ್ಟು ವಿದ್ಯಾರ್ಥಿಗಳು ಭೌತಿಕ ತರಗತಿಗಳಿಗೆ ಹಾಜರು ಆಗಬಹುದು.

ಕಾಲೇಜು ಆರಂಭಕ್ಕೆ ಮಾರ್ಗಸೂಚಿಯ ಪ್ರಮುಖ ಅಂಶಗಳು!!

1)ವಿದ್ಯಾರ್ಥಿಗಳ ಸಂಖ್ಯೆ 100 ಕ್ಕಿಂತ ಕಡಿಮೆ ಇರಬೇಕು
ವಿಶಾಲ ಕೊಠಡಿಗಳಿದ್ದರೆ ವಾರದ ಎಲ್ಲಾ ದಿನ ಭೌತಿಕ ತರಗತಿ ನಡೆಸಬಹುದು.


2)ಕಾಲೇಜು ಆವರಣದಲ್ಲಿ ದೈಹಿಕ ಅಂತರ ಕಡ್ಡಾಯವಾಗಿರುತ್ತೆ
ಪ್ರಿನ್ಸಿಪಾಲ್, ಸಿಬ್ಬಂದಿ ಕಡ್ಡಾಯವಾಗಿ ಲಸಿಕೆ ಪಡೆದಿರಬೇಕು.


3)ವಿದ್ಯಾರ್ಥಿಗಳು ಕಾಲೇಜಿಗೆ ಬರಲು ಪೋಷಕರ ಒಪ್ಪಿಗೆ ಬೇಕು
ವಿದ್ಯಾರ್ಥಿಗಳಿಗೆ ಕೊವಿಡ್​​-19 ನೆಗೆಟಿವ್ ವರದಿ ಕಡ್ಡಾಯ.


4)ಉಪನ್ಯಾಸಕರು ಹಾಗೂ ಪ್ರಾಂಶುಪಾಲರು ವಿದ್ಯಾರ್ಥಿಗಳಿಂದ ಕೊವಿಡ್ ನಿಯಮಗಳ ಉಲ್ಲಂಘನೆಯಾಗದಂತೆ ಗಮನಿಸಬೇಕು.


5)ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಕೆ ಕಡ್ಡಾಯ.


6)ಕೆಮ್ಮುವಾಗ, ಸೀನುವಾಗ ಕರವಸ್ತ್ರ ಅಡ್ಡ ಹಿಡಿಯಬೇಕು,

ಎಲ್ಲೆಂದರಲ್ಲಿ ಉಗುಳಬಾರದು.


7)ಕಾಲೇಜು ಆರಂಭಕ್ಕೆ ಮುನ್ನ ಇಡೀ ಆವರಣ ಹಾಗೂ ಕೊಠಡಿಗಳನ್ನ ಸ್ಯಾನಿಟೈಸ್ ಮಾಡಬೇಕು.


8) ಕೋವಿಡ್ ಗೆ ಬಳಸಿದ ಕಟ್ಟಡಗಳನ್ನ ಎರೆಡೆರಡು ಬಾರಿ ಸ್ಯಾನಿಟೈಸ್ ಮಾಡಬೇಕು.


9)ಸಾಮೂಹಿಕ ಪ್ರಾರ್ಥನೆ, ಕ್ರೀಡೆ ಎಲ್ಲಾ ಚಟುವಟಿಕೆಗಳಿಗೆ ಕೋವಿಡ್ ನಿಯಮ ಕಡ್ಡಾಯ.


10)ಪ್ರವೇಶ ಧ್ವಾರದಲ್ಲಿ ಥರ್ಮಲ್ ಸ್ಕ್ಯಾನರ್ ಹಾಗೂ ಸ್ಯಾನಿಟೈಸರ್ ಕಡ್ಡಾಯವಾಗಿ ಇರಬೇಕು.

ಮೇಲೆ ವಿವರಿಸಿದ ಎಲ್ಲಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮಾರ್ಗಸೂಚಿಯಲ್ಲಿ ಪ್ರಕಟ ಮಾಡಲಾಗಿದೆ…

ವರದಿ… ರಘುರಾಜ್ ಹೆಚ್. ಕೆ..

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

Related Articles

1 comment

Kevinshags September 19, 2025 - 7:25 am

В этой информационной статье вы найдете интересное содержание, которое поможет вам расширить свои знания. Мы предлагаем увлекательный подход и уникальные взгляды на обсуждаемые темы, побуждая пользователей к активному мышлению и критическому анализу!
Получить больше информации – https://quick-vyvod-iz-zapoya-1.ru/

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...