Home ರಾಜ್ಯಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಒತ್ತಡದಲ್ಲಿ ಏನೋ ಹೇಳಿರಬಹುದು ಬಿಜೆಪಿ ರಾಜ್ಯ ಸಹ ಉಸ್ತುವಾರಿ ಅಣ್ಣಾಮಲೈ ಹೇಳಿಕೆ..!!

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಒತ್ತಡದಲ್ಲಿ ಏನೋ ಹೇಳಿರಬಹುದು ಬಿಜೆಪಿ ರಾಜ್ಯ ಸಹ ಉಸ್ತುವಾರಿ ಅಣ್ಣಾಮಲೈ ಹೇಳಿಕೆ..!!

by EDITOR NEWS WARRIORS
0 comments

ತೀರ್ಥಹಳ್ಳಿ : ಬಿಜೆಪಿ ರಾಜ್ಯ ಸಹ ಉಸ್ತುವಾರಿ ಅಣ್ಣಾಮಲೈ ಹೇಳಿಕೆ…

ಉಸ್ತುವಾರಿ ಅಣ್ಣಮಲೈ ಮುಂದೆ ಜಗದೀಶ್ ಶೆಟ್ಟರ್ ಮತ್ತು ಸದಾನಂದ ಗೌಡರ ಅಂತ ಹಿರಿಯರು ಚಿಕ್ಕ ಮಕ್ಕಳಂತೆ ಮುಂದೆ ಕುಳಿತುಕೊಳ್ಳುವ ಸ್ಥಿತಿ ಉಂಟಾಗಿದೆ ಎಂಬ ಶೆಟ್ಟರ್ ಹೇಳಿಕೆ ವಿಚಾರ

ನಾವೆಲ್ಲ ಸಾಮಾನ್ಯ ಕಾರ್ಯಕರ್ತರಂತೆ ಪಕ್ಷದ ಕೆಲಸ ಮಾಡುತ್ತಿದ್ದೇವೆ.

ಬೆಳಗ್ಗೆ ಸುಳ್ಯದಲ್ಲಿ ಸದಾನಂದ ಗೌಡರ ಜೊತೆ ಸಮಾವೇಶದಲ್ಲಿ ಪಾಲ್ಗೊಂಡಿದೆ.

ಜಗದೀಶ್ ಶೆಟ್ಟರ್ ಅವರು ಪಕ್ಷದ ಹಿರಿಯರು ಪಕ್ಷ ಕಟ್ಟಿದ್ದಾರೆ ಯಾವುದೋ ಒತ್ತಡದಲ್ಲಿ ಏನೋ ಹೇಳಿರಬಹುದು.

ನಾವಿಂದು ಬಂದಿರುವುದು ಸಾಮಾನ್ಯ ಕಾರ್ಯಕರ್ತರ ಕೆಲಸ ಮಾಡಲು..

ಹಿರಿಯ ರಾಜಕಾರಣಿಗಳಿಂದ ಶೆಟ್ಟರ್ ಬಿಎಸ್ ವೈ ಸದಾನಂದ ಗೌಡ ಸಿಎಂ ಬೊಮ್ಮಾಯಿ ಮೊದಲಾದವರಿಂದ ರಾಜಕೀಯ ಕಲಿಯುತ್ತಿದ್ದೇನೆ.

ಜಗದೀಶ್ ಶೆಟ್ಟರ ಬಗ್ಗೆ ಬಹಳ ಗೌರವ ಹೊಂದಿದ್ದೇನೆ ನಾನು ಪೊಲೀಸ್ ಇಲಾಖೆಯಲ್ಲಿ ಇದ್ದಾಗಲೂ ಕೂಡ ಶೆಟ್ಟರ್ ನನಗೆ ಪರಿಚಿತರು..

ಅವರು ಯಾವುದೋ ಒಂದು ನಿರ್ಧಾರ ತೆಗೆದುಕೊಂಡಿದ್ದಾರೆ ಅದರ ಬಗ್ಗೆ ಪ್ರತಿಕ್ರಿಯೆ ನೀಡಲ್ಲ..

ಶೆಟ್ಟರ್ ಸವದಿ ಮೊದಲಾದವರಿಂದ ಕಾಂಗ್ರೆಸ್ ಸೇರ್ಪಡೆ ಹಿನ್ನೆಲೆ ಬಿಜೆಪಿಗೆ ಯಾವುದೇ ಹಿನ್ನಡೆ ಯಾಗಿಲ್ಲ…

ಪಕ್ಷ ತೀರ್ಮಾನ ತೆಗೆದುಕೊಂಡಿದೆ ಎಲ್ಲರಿಗೂ ಕೂಡ ಸೂಕ್ತ ಸ್ಥಾನಮಾನ ನೀಡುವ ಭರವಸೆಯನ್ನು ನೀಡಿತ್ತು..

ಪ್ರಜಾಪ್ರಭುತ್ವದಲ್ಲಿ ಕೇವಲ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದು ಮಾತ್ರ ಅಲ್ಲ..

ರಾಜ್ಯಸಭೆ ಎಂಎಲ್ಸಿ ಸೇರಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರದಲ್ಲಿ ಹಲವು ಸ್ಥಾನಮಾನಗಳು ಕೂಡ ಇದೆ ಇದೆ.

ಪಕ್ಷ ಯಾರನ್ನು ತಿರಸ್ಕಾರ ಮಾಡಿಲ್ಲ ಪ್ರತಿಯೊಬ್ಬರಿಗೂ ಒಂದಲ್ಲ ಒಂದು ದಾರಿಯನ್ನು ನೀಡಿತ್ತು.

ಆರಗ ಜ್ಞಾನೇಂದ್ರ ತೀರ್ಥಹಳ್ಳಿ ಕ್ಷೇತ್ರದಲ್ಲಿ ಹತ್ತನೇ ಬಾರಿ ಸ್ಪರ್ಧೆ ಮಾಡುತ್ತಿದ್ದಾರೆ ಇದು ಕೂಡ ಪಕ್ಷ ಮಾಡಿದ ನಿರ್ಧಾರ.

ಬಿಜೆಪಿಯಲ್ಲಿ ರಿಜೆಕ್ಷನ್ ಮತ್ತು ಸೆಲೆಕ್ಷನ್ ಇಲ್ಲವೇ ಇಲ್ಲ..

ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಇಲ್ಲ ಪಕ್ಷದ ಕಾರ್ಯಕರ್ತರಾಗಿ ದುಡಿದವರಿಗೆ ಪಕ್ಷ ಟಿಕೆಟ್ ನೀಡಿದೆ.

ಅದರಲ್ಲಿ ಕೆಲವರು ಕೆಲವರ ಮಗ ಸೊಸೆ ಆಗಿರಬಹುದು. ಒಂದು ಕುಟುಂಬಕ್ಕೆ ಒಬ್ಬರಿಗೆ ಮಾತ್ರ ಟಿಕೆಟ್ ಆಧಾರದಲ್ಲಿ ನೀಡಲಾಗಿದೆ.

ಸುಳ್ಯದಲ್ಲಿ ಬಡ ಕುಟುಂಬದ ಭಾಗೀರಥಿಯವರಿಗೆ ಟಿಕೆಟ್ ನೀಡಲಾಗಿರುವುದು ಯಾವುದೇ ಪಕ್ಷದಲ್ಲಿ ಇಂತಹ ಬಡ ಅಭ್ಯರ್ಥಿಗಳನ್ನು ಗುರುತಿಸುವುದಿಲ್ಲ..

ಬಿಜೆಪಿ ಪಕ್ಷ ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸುತ್ತದೆ ಪಕ್ಷದಲ್ಲಿ ಸಂಘಟನೆ ಮಾಡಿದ ಹಿರಿಯ ನಾಯಕನನ್ನು ಗುರುತಿಸುತ್ತದೆ..

ಶಿವಮೊಗ್ಗ ಮತ್ತು ಮಾನ್ವಿ ಕ್ಷೇತ್ರದ ಅಭ್ಯರ್ಥಿಗಳ ಬಗ್ಗೆ ಪಕ್ಷದ ಹಿರಿಯ ನಾಯಕರು ತೀರ್ಮಾನ ತೆಗೆದುಕೊಳ್ಳುತ್ತಾರೆ.

ಬಿಜೆಪಿ ಈ ಬಾರಿ ರಾಜ್ಯದಲ್ಲಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ 130 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರ ಪಡೆಯಲಿದೆ.

ಕಿಚಡಿ ಸರ್ಕಾರ ಬೇಡ ಎಂದು ರಾಜ್ಯದ ಜನತೆ ತೀರ್ಮಾನಿಸಿದ್ದಾರೆ

ಶಿವಮೊಗ್ಗ ಕ್ಷೇತ್ರ ಈಶ್ವರಪ್ಪನವರಂತ ನಾಯಕರು ಇರುವ ಕ್ಷೇತ್ರ ಅಲ್ಲಿ ಒಳ್ಳೆಯ ಅಭ್ಯರ್ಥಿ ಯನ್ನು ಬಿಜೆಪಿ ನೀಡಲಿದೆ..

ಬಿಜೆಪಿ ಪಕ್ಷದಲ್ಲಿ ಎಲ್ಲರೂ ಕೂಡ ಸಾಮಾನ್ಯ ಕಾರ್ಯಕರ್ತರಂತೆ ಕೆಲಸ ಮಾಡಬೇಕಾಗಿದೆ.

ನಾನು ಕೂಡ ಸಾಮಾನ್ಯ ಸಣ್ಣ ಕಾರ್ಯಕರ್ತನಂತೆ ಕೆಲಸ ಮಾಡುತ್ತಿದ್ದೇನೆ

ಜಗದೀಶ್ ಶೆಟ್ಟರ್ ಬಗ್ಗೆ ನನಗೆ ತುಂಬಾ ಗೌರವವಿದೆ…

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...