Home ರಾಜ್ಯಪತ್ರಿಕಾ ಸಂವಾದದಲ್ಲಿ ಅಭಿವೃದ್ಧಿ ಹಾಗೂ ಸರ್ವೇ ಜನ ಸುಖಿನೋ ಭವಂತು ಮಂತ್ರ ಜಪಿಸಿದ ಬಿಜೆಪಿ ನಗರ ಅಭ್ಯರ್ಥಿ ಚನ್ನಬಸಪ್ಪ (ಚೆನ್ನಿ)..!!

ಪತ್ರಿಕಾ ಸಂವಾದದಲ್ಲಿ ಅಭಿವೃದ್ಧಿ ಹಾಗೂ ಸರ್ವೇ ಜನ ಸುಖಿನೋ ಭವಂತು ಮಂತ್ರ ಜಪಿಸಿದ ಬಿಜೆಪಿ ನಗರ ಅಭ್ಯರ್ಥಿ ಚನ್ನಬಸಪ್ಪ (ಚೆನ್ನಿ)..!!

by EDITOR NEWS WARRIORS
0 comments


ಶಿವಮೊಗ್ಗ: ಸಂಘಟನೆ ಮತ್ತು ಈಶ್ವರಪ್ಪ ಅವರ ಮಾರ್ಗದರ್ಶನದಲ್ಲಿ ಗೆದ್ದು ಅವರ ಆಶೀರ್ವಾದ ಪಡೆದು ಸಂಘಟನೆಯ ಅಪೇಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ. ನಗರದ ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆ ನೀಡುತ್ತೇನೆ. ನಗರದ ನಾಗರಿಕರು ಬಿಜೆಪಿ ಬಗ್ಗೆ ಅಪೇಕ್ಷೆ ಹೊಂದಿದ್ದಾರೆ ಎಂದು ಪಕ್ಷದ ಅಭ್ಯರ್ಥಿ ಎಸ್.ಎನ್. ಚನ್ನಬಸಪ್ಪ ಹೇಳಿದರು.

ಅವರು ಇಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆ ಮೀಡಿಯಾ ಹೌಸ್‌ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂಘಟನೆಯೇ ಶಕ್ತಿ. ಬಿಜೆಪಿ ಸಂಘಟನಾತ್ಮಕವಾಗಿ ಪ್ರಬಲವಾಗಿದ್ದು, ಶಿವಮೊಗ್ಗದಲ್ಲಿ ಗೆಲುವಿಗೆ ಪೂರಕ ವಾತಾವರಣವಿದೆ ಎಂದರು.
ಬಿಜೆಪಿ ಕಾರ್ಯಕರ್ತನಾದ ನನಗೆ ಪಕ್ಷ ಸ್ಪರ್ಧೆಗೆ ಅವಕಾಶ ನೀಡಿದೆ. ಯಡಿಯೂರಪ್ಪ, ಈಶ್ವರಪ್ಪ, ಮೇಲ್ಪಂಕ್ತಿ ಹಾಕಿದ್ದಾರೆ. ೧೯೮೦ರ ದಶಕದಿಂದ ಶಿವಮೊಗ್ಗ ಶಾಸಕರಾಗಿ ಈಶ್ವರಪ್ಪ ಕೆಲಸ ಮಾಡಿದ್ದಾರೆ. ನಾನು ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಅವರು ನನ್ನನ್ನು ಬೆಳೆಸಿದ್ದಾರೆ ಎಂದರು.”


: “ದೇಶ ಮೊದಲು ಎನ್ನುವ ಪಕ್ಷ ನಮ್ಮದು. ಸರ್ವೆ ಆಧರಿಸಿ ನನಗೆ ಟಿಕೆಟ್ ನೀಡಲಾಗಿದೆ. ನಾನು ಟಿಕೆಟ್ ಹಿಂದೆ ಹೋದವನಲ್ಲ. ನಾನು ಕಾರ್ಯಕರ್ತನಾಗಿ ಪಕ್ಷದ ಕೆಲಸ ಮಾಡಿದ್ದೇನೆಯೇ ಹೊರತು ರೇಸ್‌ನಲ್ಲಿ ಇರಲಿಲ್ಲ. ಪಕ್ಷದ ಮುಖಂಡರು ಪಕ್ಷ ಬಿಟ್ಟು ಹೋಗಬಹುದು. ಆದರೆ ಬಿಜೆಪಿ ಕಾರ್ಯಕರ್ತರ ಪಕ್ಷ. ಕಾರ್ಯಕರ್ತರು ಪಕ್ಷ ಬಿಟ್ಟು ಹೋಗುವುದಿಲ್ಲ ಎಂದರು.
ನಾವು ಎಂದೂ ಕೂಡ ಅಶಾಂತಿ ನಿರ್ಮಾಣಕ್ಕೆ ಕಾರಣರಾಗಿಲ್ಲ. ಆ ರೀತಿ ಮಾಡಿದವರಿಗೆ ಶಿಕ್ಷೆ ಆಗಲಿ ಎಂದು ಹೋರಾಟ ನಡೆಸಿದ್ದೇವೆ. ನಮ್ಮಿಂದ ಎಂದೂ ಕೂಡ ಗಲಭೆ ಆರಂಭವಾಗಿಲ್ಲ. ಗಲಭೆ ನಡೆದ ಕೂಡಲೆ ಪೊಲೀಸರಿಗೆ ಮಾಹಿತಿ ನೀಡಿದ್ದೇವೆ ಎಂದು ಚನ್ನಬಸಪ್ಪ ಹೇಳಿದರು.


ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತ ಸಂಘದ ಜಿಲ್ಲಾ ಶಾಖೆಯ ಜಿಲ್ಲಾಧ್ಯಕ್ಷ ಕೆ.ವಿ. ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ವಿ.ಟಿ. ಅರುಣ್ ಇದ್ದರು.”

ರಘುರಾಜ್ ಹೆಚ್.ಕೆ..9449553305…

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...