Home ರಾಜ್ಯಓಟು ಮಾರಾಟಕ್ಕಿದೆ, ಕಿರುಚಿತ್ರದ ಪೋಸ್ಟರ್ ಬಿಡುಗಡೆ..!!

ಓಟು ಮಾರಾಟಕ್ಕಿದೆ, ಕಿರುಚಿತ್ರದ ಪೋಸ್ಟರ್ ಬಿಡುಗಡೆ..!!

by EDITOR NEWS WARRIORS
0 comments


ಬೆಂಗಳೂರ : ಕಿನ್ನಾಳ ಟಾಕೀಸ್ ಲಾಂಛನದಡಿ ನಿರ್ಮಾಣ ಆಗಿರುವ ‘ಓಟು ಮಾರಾಟಕ್ಕಿದೆ’ ಕಿರುಚಿತ್ರದ ಮೊದಲ ಪೋಸ್ಟರ್ ಅನ್ನು ಕನ್ನಡದ ರ‍್ಯಾಪ್‌ಸ್ಟಾರ್ ಚಂದನ್‌ಶೆಟ್ಟಿ ಅವರು ಬಿಡುಗಡೆ ಮಾಡಿ, ತಂಡಕ್ಕೆ ಶುಭ ಹಾರೈಸಿದರು.


ಎಲೆಕ್ಷನ್ ಬಂದಿರುವ ಈ ಸಂದರ್ಭದಲ್ಲಿ ಟೈಟಲ್ನಿಂದಲೆ ಈ ಕಿರುಚಿತ್ರ ಸದ್ದು ಮಾಡುತ್ತಿದ್ದು. ವಿಶೇಷ ಎಂದರೆ ಪ್ರಜ್ವಲ್ ಕಿನ್ನಾಳ ಎನ್ನುವ ೮ ವರ್ಷದ ಬಾಲಕ ನಾಯಕನಾಗಿ ನಟಿಸಿ, ರಚಿಸಿ, ನಿರ್ದೇಶಿಸಿದ್ದಾನೆ.. ಹಾಗೂ ಮಕ್ಕಳೇ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. (ದೊಡ್ಡವರಂತೆ ಮೀಸೆ ಅಂಟಿಸಿಕೊಂಡು). ಎನ್ ಎಂ.ವಿಶ್ವ, ಶ್ರೀಧರ ಕಶ್ಯಪ್, ವೈಭವ ನಾಗರಾಜ ಆರತಿ, ರಮೇಶ್ ಪ್ರೇಮ್, ಲಕ್ಷಿತಾ ಕಂಠದಾನ ಮಾಡಿದ್ದಾರೆ.


ಶ್ರೀಮತಿ ಭವಾನಿ ಕಿನ್ನಾಳರಾಜ್ ಅವರು ಈ ಕಿರುಚಿತ್ರ ನಿರ್ಮಿಸಿದ್ದು, ಜಿ ವಿ ನಾಗರಾಜ್ ಛಾಯಾಗ್ರಹಣ, ಆಕಾಶ್ ಪರ್ವ ಸಂಗೀತ, ಕೆಜಿಎಫ್ ಮೊದಲಾದ ಹಲವಾರು ಹಿಟ್ ಚಲನಚಿತ್ರಗಳಿಗೆ ಹಾಡುಗಳನ್ನು ರಚಿಸಿರುವ, ಹಿಟ್ಲರ್ ಚಲನಚಿತ್ರ ನಿರ್ದೇಶಕ ಕಿನ್ನಾಳರಾಜ್ ಚಿತ್ರಕಥೆ, ಸಂಭಾಷಣೆ ಬರೆಯುವದರ ಜೊತೆಗೆ ಸಂಕಲನವನ್ನು ಮಾಡಿದ್ದಾರೆ. ಟೈಟಲ್ ಗ್ರಾಫಿಕ್ಸ್ ಪ್ರಕಾಶ್ ಡಿ .ಜೆ, ಶಿವಶರಣ ಸುಗ್ನಳ್ಳಿ, ಧ್ವನಿಮುದ್ರಣ ಜಯಚಂದ್ರ ಮಾಡಿದ್ದಾರೆ. ಪತ್ರಿಕಾಪ್ರಚಾರ ಆರ್.ಚಂದ್ರಶೇಖರ್, ಡಾ ಪ್ರಭು ಗಂಜಿಹಾಳ. ಡಾ. ವೀರೇಶ್ ಹಂಡಿಗಿ ಅವರದ್ದಾಗಿದೆ.
ಕಿರು ಚಿತ್ರದಲ್ಲಿ ವಿಷ್ಣು, ವಿಜಯಕುಮಾರ್, ಅಗಸ್ತ್ಯ, ಮನೋಜ್, ಸೃಷ್ಟಿ, ಮಾನಸ, ಆರಾಧ್ಯ,ಸಾಹಿತ್ಯ, ಸುಹಾಸ್, ದಿಲೀಪ್, ಅನ್ವಿತಾ, ಕುನಾಲ್, ಯಶವಂತ್,ಶ್ರೀ ನಾಗರ್ನಿಕ, ಆಕಾಶ್. ವಿಕಾಸ್. ಪುಟ್ಟರಾಜು, ಸಹನಾ, ಅನ್ವೀಕಾ, ಅಭಿ , ಆರ್ನವ್ ಇನ್ನೂ ಅನೇಕ ಬಾಲ ಕಲಾವಿದರು ಅಭಿನಯಿಸಿದ್ದಾರೆ. ಈ ಕಿರುಚಿತ್ರವು ಶೀಘ್ರದಲ್ಲೇ ಬಿಡುಗಡೆ ಆಗಲಿದೆ.

ವರದಿ-ಡಾ.ಪ್ರಭು ಗಂಜಿಹಾಳ.
ಮೊ-೯೪೪೮೭೭೫೩೪೬….

Related Articles

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!