
ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಪ್ರಾರಂಭವಾಗಿದ್ದು ಮತದಾನಕ್ಕೆ ಎರಡೂ ದಿನಗಳು ಬಾಕಿ ಇದೆ.
ಮತದಾನ ದಿನಕ್ಕೆ ಮುಂಜಾಗ್ರತಾ ಕ್ರಮವಾಗಿ ರಾಜ್ಯದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಬಂದೋಬಸ್ತ್ ಗಾಗಿ ಬರೋಬ್ಬರಿ 1.56 ಲಕ್ಷ ಪೊಲೀಸರ ನಿಯೋಜನೆ ಮಾಡಲಾಗಿದೆ.
ಹೂರ ರಾಜ್ಯಗಳಿಂದ ರಾಜ್ಯಕ್ಕೆ ಬಂದ ಪೊಲೀಸ್ ಪಡೆ :
ರಾಜ್ಯದ 84,119 ಸಾವಿರ ಪೊಲೀಸರು, 304 ಡಿವೈಎಸ್ಪಿ, 991 ಇನ್ಸ್ಪೆಕ್ಟರ್, 20610 ಪಿಎಸ್ಐ ಹಾಗೂ ಹೊರರಾಜ್ಯದಿಂದ 8,500 ಪೊಲೀಸರು, 650 ಸಿಎಪಿಎಫ್ ತುಕಡಿಗಳು ನಿಯೋಜನೆ ಮಾಡಲಾಗಿದೆ. ಒಟ್ಟು 1.56 ಲಕ್ಷ ಪೊಲೀಸರಿಂದ ಮತದಾನದಿಂದು ಬಂದೋಬಸ್ತ್ ಏರ್ಪಡಿಸಲಾಗಿದೆ.
ರಾಜ್ಯದಲ್ಲಿ ಸೂಕ್ಷ್ಮ ಅತಿ ಸೂಕ್ಷ್ಮ ಮತಗಟ್ಟೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ :
ರಾಜ್ಯದಲ್ಲಿ ಒಟ್ಟು 58, 282 ಮತಗಟ್ಟೆಗಳ ನಿರ್ಮಾಣ ಮಾಡಲಾಗಿದ್ದು, ಇದರಲ್ಲಿ 11,617 ಸೂಕ್ಷ್ಮ ಮತಗಟ್ಟೆಗಳ ನಿರ್ಮಾಣ ಮಾಡಲಾಗಿದೆ. ಸೂಕ್ಷ್ಮ ಮತಗಟ್ಟೆಗಳಲ್ಲಿ ಸಿಎಪಿಎಫ್ ಹಾಗೂ ಪೊಲೀಸರಿಂದ ಭದ್ರತೆ ನಿಯೋಜನೆ ಮಾಡಲಾಗಿದೆ. 2,930 ಪೊಲೀಸ್ ಮೊಬೈಲ್ ಸೆಕ್ಟರ್ ಗಳ ಕಾರ್ಯಾಚರಣೆ ಮಾಡಲಾಗಿದೆ.
ಒಂದು ಮೊಬೈಲ್ ಸೆಕ್ಟರ್ 20 ಮತಗಟ್ಟೆಗಳನ್ನು ಕವರ್ ಮಾಡಬೇಕು. ಮೊಬೈಲ್ ಸೆಕ್ಟರ್ ಗಳ ಮೇಲ್ವಿಚಾರಣೆಗೆ 749 ಸೂಪರ್ ವೈಸರ್ ಗಳು ನಿಯೋಜನೆ ಮಾಡಲಾಗಿದೆ. 700 ಫೈಯಿಂಗ್ ಸ್ಕ್ವಾಡ್, 700 ಚೆಕ್ ಪೋಸ್ಟ್ ಗಳ ನಿರ್ಮಾಣ ಮಾಡಲಾಗಿದೆ.
ಹೊರ ರಾಜ್ಯಗಳ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಮಾಲೋಚನೆ :
ನೇರ ರಾಜ್ಯಗಳ ಹಿರಿಯ ಪೊಲೀಸರೊಂದಿಗೆ ರಾಜ್ಯ ಪೊಲೀಸರು ಸಭೆ ನಡೆಸಲಿದ್ದು, ರಾಜ್ಯದ ಗಡಿಗಳಲ್ಲಿ ವಾಹನಗಳ ತಪಾಸಣೆ ಮಾಡಿ ಒಳ ಬಿಡಲು ಸೂಚನೆ ನೀಡಿದ್ದಾರೆ. ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಗೋವಾ, ಮಹಾರಾಷ್ಟ್ರ, ಕೇರಳ ಅಧಿಕಾರಿಗಳ ಜೊತೆ ರಾಜ್ಯದ ಪೊಲೀಸರು ಚರ್ಚೆ ನಡೆಸಲಿದ್ದಾರೆ.
ಇದರೊಂದಿಗೆ ಬಿಎಎಸ್ ಎಫ್ 108, ಸಿಐಎಸ್ಎಫ್ 75, ಐಟಿಬಿಪಿ 70, ಆರ್ ಪಿಎಫ್-35, ಎಸ್ಎಸ್ ಬಿ 75 ಹಾಗೂ ರಾಜ್ಯದ 224 ಕೆಎಸ್ಆರ್ ಪಿ ತುಕಡಿಗಳು ಬಂದೋಬಸ್ತ್ ಗೆ ನಿಯೋಜನೆ ಮಾಡಿದ್ದಾರೆ.
ಮಧ್ಯಪ್ರಿಯರಿಗೆ ನಿರಾಸೆ ಮಧ್ಯದಂಗಡಿಗಳು ಬಂದ್ :
ಇನ್ನು, ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಇಂದು ಸಂಜೆ 5 ಗಂಟೆಯಿಂದ ಪಬ್, ಬಾರ್, ಎಂಆರ್ಪಿ ಔಟ್ಲೇಟ್ ಬಂದ್ ಮಾಡಲಾಗಿದೆ…
ರಘುರಾಜ್ ಹೆಚ್.ಕೆ..9449553305…

