Home ರಾಜ್ಯನಿನ್ನೆ ಪೊಲೀಸರ ಸಮ್ಮುಖದಲ್ಲಿ ಬಾರ್ ಕ್ಯಾಶಿಯರ್​ ಕೊಲೆ ಆರೋಪ..!! ಇಂದು ಅರೆಸ್ಟ್ ಮಾಡಲು ಹೋದ ಪೊಲೀಸರ ಮೇಲೆ ಆರೋಪಿ ಹಲ್ಲೆ.!ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪಿಎಸ್​ಐ..!!

ನಿನ್ನೆ ಪೊಲೀಸರ ಸಮ್ಮುಖದಲ್ಲಿ ಬಾರ್ ಕ್ಯಾಶಿಯರ್​ ಕೊಲೆ ಆರೋಪ..!! ಇಂದು ಅರೆಸ್ಟ್ ಮಾಡಲು ಹೋದ ಪೊಲೀಸರ ಮೇಲೆ ಆರೋಪಿ ಹಲ್ಲೆ.!ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪಿಎಸ್​ಐ..!!

by EDITOR NEWS WARRIORS
0 comments

ಕೊಲೆ ಪ್ರಕರಣದ ಆರೋಪಿಯನ್ನು ವಶಕ್ಕೆ ಪಡೆಯಲು ತೆರಳಿದ್ದ ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೇ ಆಗಿದ್ದು.

ಈ ವೇಳೆ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ ಗಾಯಗೊಂಡ ಆರೋಪಿಗಳನ್ನು ನಗರದ ಮೆಘನ್ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪ್ರಕರಣದ ಹಿನ್ನೆಲೆ:

ಆಯನೂರು : ಬಾರ್‌ನಲ್ಲಿ ಕಳೆದ ರಾತ್ರಿ ಕ್ಯಾಶಿಯರ್‌ಗೆ ಚಾಕು ಚುಚ್ಚಿ ಹತ್ಯೆ ಮಾಡಲಾಗಿತ್ತು. ಪ್ರಕರಣದ ಪ್ರಮುಖ ಆರೋಪಿ ಸತೀಶ್‌ ಎಂಬಾತನನ್ನು ಪೊಲೀಸರು ಬಂಧಿಸಲು ತೆರಳಿದ್ದರು. ಈ ವೇಳೆ ಪೊಲೀಸ್‌ ಸಿಬ್ಬಂದಿ ಪ್ರವೀಣ್‌ ಮತ್ತು ಶಿವರಾಜ್‌ ಅವರು ಆರೋಪಿ ಸತೀಶನನ್ನು ಹಿಡಿಯಲು ಯತ್ನಿಸಿದ್ದಾರೆ. ಆಗ ಸತೀಶ ಪೊಲೀಸ್‌ ಸಿಬ್ಬಂದಿ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ತಿಳಿದು ಬಂದಿದೆ

ಈ ವೇಳೆ ಪಿಎಸ್‌ಐ ಅವರು ಗಾಳಿಯಲ್ಲಿ ಗುಂಡು ಹಾರಿಸಿ ಸತೀಶನಿಗೆ ಎಚ್ಚರಿಕೆ ನೀಡಿದ್ದಾರೆ. ಹೀಗಿದ್ದೂ ಸತೀಶ ಪಿಎಸ್‌ಐ ಮೇಲೆ ಚಾಕುವಿನಿಂದ ದಾಳಿಗೆ ಮುಂದಾಗಿದ್ದ. ಆಗ ಸಬ್‌ ಇನ್ಸ್‌ಪೆಕ್ಟರ್‌ ಹಾರಿಸಿದ ಗುಂಡು ಸತೀಶನ ಕಾಲಿಗೆ ತಗುಲಿದೆ. ಸತೀಶ ಮತ್ತು ಗಾಯಗೊಂಡ ಪೊಲೀಸ್‌ ಸಿಬ್ಬಂದಿಯನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಆದರೆ ನಿನ್ನೆಯ ಪ್ರಕರಣದಲ್ಲಿ ಪೊಲೀಸ್ ಸಿಬ್ಬಂದಿಗಳು ಸ್ಥಳದಲ್ಲಿ ಇದ್ದರೂ ಕೂಡ 112 ರಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗಳು ಕೊಲೆ ಮಾಡುವುದನ್ನು ನೋಡಿಕೊಂಡು ಸುಮ್ಮನೆ ಇದ್ದರೂ ಎನ್ನುವ ಪ್ರಬಲ ಆರೋಪ ಕೇಳಿ ಬಂದಿತ್ತು ಪೋಲಿಸರ ಸಮ್ಮುಖದಲ್ಲಿ ಕೊಲೆ ನಡೆದಿತ್ತು ಎನ್ನಲಾಗತ್ತು…

ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳಾದ ಸತೀಶ್ ನಿರಂಜನ್ ಅಶೋಕ್ ಅವರನ್ನು ಬಂಧಿಸಲಾಗಿದೆ…

ಓಂಕಾರ ಎಸ್. ವಿ. ತಾಳಗುಪ್ಪ

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...