Home ರಾಜ್ಯಕಾಮನ್ ಮ್ಯಾನ್ ಹೀರೋ ಬಡವ ರಾಸ್ಕಲ್ “ಡಾಲಿ ಉತ್ಸವ” ಕ್ಕೆ ದಿನಗಣನೆ..!

ಕಾಮನ್ ಮ್ಯಾನ್ ಹೀರೋ ಬಡವ ರಾಸ್ಕಲ್ “ಡಾಲಿ ಉತ್ಸವ” ಕ್ಕೆ ದಿನಗಣನೆ..!

by EDITOR NEWS WARRIORS
0 comments

ಸ್ಯಾಂಡಲ್‌ವುಡ್ ಡಾಲಿ ಎಂದೇ ಖ್ಯಾತಿಗಳಿಸಿರುವ ನಟ ಧನಂಜಯ್ ಹುಟ್ಟುಹಬ್ಬಕ್ಕೆ ದಿನಗಣನೆ ಶುರುವಾಗಿದೆ. ನಟನಾಗಿ, ನಿರ್ಮಾಪಕನಾಗಿ ಖ್ಯಾತಿಗಳಿಸಿರುವ ಡಾಲಿ ಧನಂಜಯ್ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದಾರೆ. ‘ಕಾಮನ್ ಮ್ಯಾನ್ ಹೀರೋ’ ಅಂತನೇ ಬಿರುದು ಪಡೆದಿರುವ ಡಾಲಿ ಈ ಬಾರಿ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಳ್ಳುತ್ತಿದ್ದಾರೆ. ತನ್ನ ಬರ್ತಡೇ ದಿನ ಅಭಿಮಾನಿಗಳ ಜೊತೆ ಸಮಯ ಕಳೆಯಲು ನಿರ್ಧರಿಸಿದ್ದಾರೆ. ಅಂದಹಾಗೆ ಧನಂಜಯ್ ಹುಟ್ಟುಹಬ್ಬ ಆಗಸ್ಟ್ 23. ಆದರೆ ಈಗಾಗಲೇ ಅಭಿಮಾನಿಗಳ ಸಂಭ್ರಮ ಶುರುವಾಗಿದೆ. ಡಾಲಿ ಉತ್ಸವಕ್ಕೆ ಅಭಿಮಾನಿಗಳು ಸಜ್ಜಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್‌ಗಳನ್ನು ಶೇರ್ ಮಾಡಿ ಸಂಭ್ರಮಿಸುತ್ತಿದ್ದಾರೆ.

ಈ ಬಾರಿಯ ಹುಟ್ಟುಹಬ್ಬವನ್ನು ಅಭಿಮಾನಿಗಳು ಡಾಲಿ ಉತ್ಸವ ಹೆಸರಿನಲ್ಲಿ ಆಚರಿಸುತ್ತಿದ್ದಾರೆ. ಡಾಲಿ ಉತ್ಸವ ಎಂದು ಹೆಸರಿಟ್ಟು ‘ಅಭಿಮಾನದ ತೇರು ಎಳೆಯೋಣ ಬನ್ನಿ’ ಎಂದು ಟ್ಯಾಗ್ ಲೈನ್ ಇಡಲಾಗಿದೆ. ಇವತ್ತಿಗೆ ಸರಿಯಾಗಿ 25 ದಿನಗಳು ಬಾಕಿ ಉಳಿದಿದ್ದು. ಇಂದಿನಿಂದನೆ ಅಭಿಮಾನಿಗಳು ಉತ್ಸವಕ್ಕೆ ರೆಡಿಯಾಗಿದ್ದಾರೆ. ಅಂದಹಾಗೆ ಈ ಬಾರಿಯ ಧನಂಜಯ್ ಹುಟ್ಟುಹಬ್ಬ ತುಂಬನೇ ವಿಶೇಷ. 4 ವರ್ಷಗಳ ಬಳಿಕ ಅದ್ದೂರಿಯಾಗಿ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ ಜೊತೆಗೆ ಡಾಲಿ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟು 10 ವರ್ಷಗಳಾಗಿದೆ. ಹಾಗಾಗಿ ಈ ಬಾರಿಯ ಹುಟ್ಟುಹಬ್ಬ ಧನಂಜಯ್ ಅವರಿಗೆ ತುಂಬಾ ವಿಶೇಷವಾಗಿದೆ.

ನೆರೆ, ಕೊರೊನಾ, ಹಾಗೂ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದ ಕಾರಣದಿಂದ ಧನಂಜಯ್ ಕಳೆದ 4 ವರ್ಷಗಳಿಂದ ಹುಟ್ಟುಹಬ್ಬ ಆಚರಿಸಿಕೊಂಡಿರಲಿಲ್ಲ. ಅಭಿಮಾನಿಗಳ ಕೈಗೂ ಸಿಕ್ಕಿರಲಿಲ್ಲ. ಹಾಗಾಗಿ ಈ ಬಾರಿ ದೊಡ್ಡ ಮಟ್ಟದಲ್ಲಿ ಬರ್ತಡೇ ಸೆಲೆಬ್ರೇಟ್ ಮಾಡಿಕೊಳ್ಳುತ್ತಿದ್ದು ಹುಟ್ಟುಹಬ್ಬದ ದಿನ ಅಭಿಮಾನಿಗಳ ಜೊತೆಯೇ ಸಮಯ ಕಳೆಯಲು ನಿರ್ಧರಿಸಿದ್ದಾರೆ.

ಜಿಪಿ ನಗರದ ಗ್ರೌಂಡ್‌ನಲ್ಲಿ ಸೆಲೆಬ್ರೇಷನ್..!

ಧನಂಜಯ್ ಬರ್ತಡೇ ಸೆಲೆಬ್ರೇಷನ್ ಜೆಪಿ ನಗರದ ಗ್ರೌಂಡ್‌ನಲ್ಲಿ ನಡೆಯಲಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ. ರಾಜ್ಯದ ಮೂಲೆ ಮೂಲೆಗಳಿಂದ ಅಪಾರ ಸಂಖ್ಯೆಯ ಅಭಿಮಾನಿಗಳು ಬರುವ ಕಾರಣ ದೊಡ್ಡ ಗ್ರೌಂಡ್‌ನಲ್ಲಿ ಆಚರಣೆ ಮಾಡಿಕೊಳ್ಳಲು ಧನಂಜಯ್ ನಿರ್ಧರಿಸಿದ್ದಾರೆ. ಆಗಸ್ಟ್ 22ರ ರಾತ್ರಿಯಿಂದನೇ ಸೆಲೆಬ್ರೇಷನ್ ಶುರುವಾಗಲಿದೆ. 23ರಂದು ಗ್ರೌಂಡ್‌ನಲ್ಲಿ ಧನಂಜಯ್ ಎಲ್ಲಾ ಅಭಿಮಾನಿಗಳನ್ನು ಭೇಟಿ ಮಾಡಿ ಅಭಿಮಾನಿಗಳ ಪ್ರೀತಿಯ ವಿಶ್ ಸ್ವೀಕರಿಸಲಿದ್ದಾರೆ.

ಊಟದ ವ್ಯವಸ್ಥೆ..!

ದೂರ ಊರುಗಳಿಂದ ಅಭಿಮಾನಿಗಳು ಬರುವ ಕಾರಣದಿಂದ ಊಟದ ವ್ಯವಸ್ಥೆ ಕೂಡ ಇರಲಿದೆ ಎನ್ನಲಾಗಿದೆ. ಮಾಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಿಸಲಾಗಿದ್ದು ಎಲ್ಲಾ ಅಭಿಮಾನಿಗಳು ಊಟ ಮಾಡಿ ಸುರಕ್ಷಿತವಾಗಿ ಮತ್ತೆ ತಮ್ಮ ಊರುಗಳಿಗೆ ಮರಳಬೇಕು ಎನ್ನುವುದು ಧನಂಜಯ್ ಅವರ ಆಸೆ. ಹಾಗಾಗಿ ಡಾಲಿ ಉತ್ಸವ ಎಲ್ಲಾ ರೀತಿಯ ಸಕಲ ಸಿದ್ಧತೆ ಈಗಾಗಲೇ ನಡೆಯುತ್ತಿದ್ದು ದೊಡ್ಡ ಮಟ್ಟದಲ್ಲಿ ಅಭಿಮಾನಿಗಳು ಬರುವ ನಿರೀಕ್ಷೆ ಇದೆ.

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...