Home ರಾಜ್ಯಕಾಂತೇಶ್ ಏನು ಸ್ಪೆಷಲ್ ಅಲ್ಲ  – ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ*

ಕಾಂತೇಶ್ ಏನು ಸ್ಪೆಷಲ್ ಅಲ್ಲ  – ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ*

by Reporter Smg
0 comments

ಶಿವಮೊಗ್ಗ : ಹಾವೇರಿ ಗದಗ ಭಾಗದಲ್ಲಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಸಲುವಾಗಿ ಟಿಕೆಟ್ ಆಕಾಂಕ್ಷಿಯಾದ  ಕೆ.ಈ ಕಾಂತೇಶ್ ಬಿರುಸಿನ ಕ್ಷೇತ್ರ ಪ್ರವಾಸದಲ್ಲಿದ್ದಾರೆ.
ಈ ಬಗ್ಗೆ ಇಂದು ಬೊಮ್ಮನ ಕಟ್ಟೆ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಜನರು ಪಕ್ಷದ ಕಾರ್ಯಕರ್ತರು ಕಾಂತೇಶ್ ಈ ಬಾರಿ ಸ್ಪರ್ಧೆ ಮಾಡಲಿ ಎಂದು ಬಯಸಿದ್ದಾರೆ. ಆ ಕ್ಷೇತ್ರದ ಎಲ್ಲಾ ಸಮುದಾಯದ ಮಠಾಧಿಶರುಗಳು ಕಾಂತೇಶ್ ಗೆ ಆಶೀರ್ವಾದ ಮಾಡಿದ್ದಾರೆ. ಹಾಗೆಯೇ ಕೆಲವರು ಕೂಡ ಲೋಕಸಭೆಗೆ ಸ್ಪರ್ಧೆ ಮಾಡಲು ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಇದರಲ್ಲಿ ಕಾಂತೇಶ್ ಕೂಡ ಒಬ್ಬ ಆಕಾಂಕ್ಷಿ ಅಷ್ಟೆ ಅವರೇನು ಸ್ಪೆಷಲ್ ಅಲ್ಲ. ಹೈಕಮಾಂಡ್ ಯಾರಿಗೇ ಟಿಕೆಟ್ ಕೊಟ್ಟರೂ ಗೆಲ್ಲಿಸಿಕೊಂಡು ಬರುತ್ತೇವೆ ಎಂದರು.

ಸಂಭ್ರಮದ ಖರ್ಚನ್ನು ಲೆಕ್ಕ ಹಾಕೋದು ಕಾಂಗ್ರೆಸ್ ನ ಮುಟ್ಠಾಳತನ.

ಮನೆಯ ಮಗನೊಬ್ಬ ಫಸ್ಟ್ ರ್ಯಾಂಕ್ ಬಂದಾಗ ತಂದೆ ಮಗನಿಗೆ ಸಿಹಿ ತಿನಿಸುತ್ತಾನೆ ಆಗ ಸಿಹಿ ಖರ್ಚಿನ ಬಗ್ಗೆ ಲೆಕ್ಕ ಹಾಕೋದು ಮುಟ್ಠಾಳತನ ಇದ್ದಂತೆ ಎಂದು ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.
ಇಸ್ರೋ ಚಂದ್ರಯಾನದ – 3 ಯಶಸ್ಸಿನಿಂದ ಭಾರತದ ಕೀರ್ತಿ ಉನ್ನತ ಸ್ಥಾನಕ್ಕೆ ಹೋಗಿದೆ. ಭಾರತೀಯ ಸಂಸ್ಕೃತಿ, ಧರ್ಮವು ವಿಶ್ವದ ಗಮನ ಸೆಳೆಯುತ್ತಿರವುದು ಒಂದೆಡೆಯಾದರೆ ವಿಜ್ಙಾನ ಮತ್ತೊಂದೆಡೆ ವಿಶ್ವದ ಗಮನ ಸೆಳೆಯುವಂತೆ ಮಾಡಿದೆ.

ಚಂದ್ರಯಾನದ-3 ಉಡಾವಣೆಗೆ ಸುಮಾರು 615 ಕೋಟಿ ವೆಚ್ಚವಾಗಿದೆ. ವಿಕ್ರಮ್ ಚಂದ್ರನ ಮೇಲೆ ಕಾಲಿಟ್ಟ ಯಶಸ್ಸನ್ನು ಭಾರತೀಯರು ವಿಶ್ವದೆಲ್ಲೆಡೆ ಸಂಭ್ರಮಿಸಿದ್ದಾರೆ. ಪ್ರಧಾನಿ ಮೋದಿಯವರು ವಿಜ್ಙಾನಿಗಳನ್ನು ಅಭಿನಂದಿಸಲು ಬೆಂಗಳೂರಿಗೆ ಆಗಮಿಸಿದ್ದಾರೆ ಕಾಂಗ್ರೆಸ್ ಪಕ್ಷ ಸಿಹಿ ಹಂಚುವ ಸಮಯದಲ್ಲಿ ಖರ್ಚಿನ ಬಗ್ಗೆ ಮಾತನಾಡಿ ಮುಟ್ಠಾಳತನ ಪ್ರದರ್ಶಿಸಿದೆ ಎಂದರು.

ವರದಿ: ವಿನಯ್ ಕುಮಾರ್ ಹೆಚ್.ಎಮ್

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...