Home ರಾಜ್ಯನಾಳೆ ನಾನು ಫ್ಲೈಟ್ ಹತ್ತಲ್ಲ – ಸಚಿವ ಮಧು ಬಂಗಾರಪ್ಪ.

ನಾಳೆ ನಾನು ಫ್ಲೈಟ್ ಹತ್ತಲ್ಲ – ಸಚಿವ ಮಧು ಬಂಗಾರಪ್ಪ.

by Reporter Smg
0 comments

ಶಿವಮೊಗ್ಗ : ನಾಳೆ ಆ.31ರಂದು ಶಿವಮೊಗ್ಗ ವಿಮಾನ ನಿಲ್ದಾಣ ಸಾರ್ವಜನಿಕ ಸೇವೆಗೆ ಅಧಿಕೃತವಾಗಿ ಲಭ್ಯವಾಗಲಿದೆ. ಇನ್ನು ಮುಂದೆ ಸಾರ್ವಜನಿಕರು ಲೋಹದ ಹಕ್ಕಿಮೇಲೆ ಪ್ರಯಾಣ ಮಾಡಬಹುದು.


ಆ.31ರ ಬೆಳಗ್ಗೆ ಬೆಂಗಳೂರಿನಿಂದ ಹೊರಡುವ ವಿಮಾನ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 11.05ಕ್ಕೆ ಆಗಮಿಸುತ್ತದೆ. ನಾಳೆ ಬರುವ ವಿಶೇಷ ವಿಮಾನದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಸಚಿವ ಎಮ್.ಬಿ ಪಾಟೀಲ್ ಸೇರಿದಂತೆ ಗಣ್ಯಾತಿ ಗಣ್ಯರು ಬರಲಿದ್ದಾರೆ.


ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪರವರು ಸಹ ನಾಳಿನ ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಆಗಮಿಸುವ ನಿರೀಕ್ಷೆ ಇತ್ತು ಆದರೆ ಸಚಿವರ ಪೂರ್ವ ನಿಯೋಜಿತ ಕಾರ್ಯಕ್ರಮ ಇರುವುದರಿಂದ  ಸಚಿವ ಮಧು ಬಂಗಾರಪ್ಪ ನಾಳಿನ ಕಾರ್ಯಕ್ರಮದಲ್ಲಿ ಉಪಸ್ಥಿತಿ ಇರುವುದಿಲ್ಲ.


ಗೃಹ ಲಕ್ಷ್ಮಿ ಅನುಷ್ಠಾನ ಕಾರ್ಯಕ್ರಮಕ್ಕೆ ಇಂದು ಜಿಲ್ಲೆಗೆ ಆಗಮಿಸಿದ್ದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿನ ಕಾರ್ಯಕರ್ತರ ಸಭೆಗೆ ಬಂದಿದ್ದರು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು ನಾಳೆ ಬ್ರಹ್ಮ ಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮ ಇರುವುದರಿಂದ ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯಕ್ರಮಕ್ಕೆ ಬರಲು ಆಗುತ್ತಿಲ್ಲ
ನಾರಾಯಣ ಗುರುಗಳ ಜಯಂತಿಯನ್ನು ನಾವೆಲ್ಲಾ ಜಾತ್ಯಾತೀತವಾಗಿ ಪಕ್ಷಾತೀತವಾಗಿ ಆಚರಿಸಬೇಕಿದೆ.

ಮಾನ್ಯ ಮುಖ್ಯಮಂತ್ರಿಗಳು ಖುದ್ದು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ನನಗೆ ತಿಳಿಸಿದ್ದಾರೆ ಆದ್ದರಿಂದ ವಿಮಾನ ನಿಲ್ದಾಣ ಕಾರ್ಯಕ್ರಮಕ್ಕೆ ಬರಲು ಆಗುತ್ತಿಲ್ಲ. ಬದಲಾಗಿ ಇಂದು ಗೃಹ ಲಕ್ಷ್ಮಿ ಕಾರ್ಯಕ್ರಮದ ನಂತರ ವಿಮಾನ ನಿಲ್ದಾಣಕ್ಕೆ ತೆರಳಿ ಸಿದ್ಧತೆ ಪರಿಶೀಲನೆ ನಡೆಸಲಿದ್ದೇನೆ ನಾಳಿನ ಕಾರ್ಯಕ್ರಮ ಸುಗಮವಾಗಲಿ ಎಂದು ತಿಳಿಸಿದರು.

ವರದಿ: ವಿನಯ್ ಕುಮಾರ್ ಹೆಚ್.ಎಮ್

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...