Home ರಾಜ್ಯತೀರ್ಥಹಳ್ಳಿ: ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ..!ಜೊತೆಗೆ ರಕ್ಷಾ ಬಂಧನ ಅದ್ದೂರಿ ಆಚರಣೆ..!

ತೀರ್ಥಹಳ್ಳಿ: ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ..!ಜೊತೆಗೆ ರಕ್ಷಾ ಬಂಧನ ಅದ್ದೂರಿ ಆಚರಣೆ..!

by EDITOR NEWS WARRIORS
0 comments

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಲಿನ ಕುರುವಳ್ಳಿ ಯಲ್ಲಿ ಇಂದು ಕರ್ನಾಟಕ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳೊಂದಾದ ಗೃಹ ಲಕ್ಷ್ಮಿ ಯೋಜನೆಗೆ ಅಧಿಕೃತವಾಗಿ ಚಾಲನೆ ದೊರಕಿದ್ದು,


ಈ ಕಾರ್ಯಕ್ರಮದ ನೇರ ಪ್ರಸಾರವು ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿಯ ಕಾರ್ಯಾಲಯದಲ್ಲಿ ಎಲ್ಇಡಿ ಪರದೆ ಮೂಲಕ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದ್ದು,


ಈ ಸಂದರ್ಭದಲ್ಲಿ ಹಿರಿಯ ಮಹಿಳಾ ಗ್ರಾಮಸ್ಥ ನಾಗರಿಕರಾದ ಕಮಲಮ್ಮ, ಶಿಲೆಸ್ತಿನಾ, ಜೈ ಬುನ್ ಬಿ, ಇವರುಗಳಿಂದ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.
ಕಾರ್ಯಕ್ರಮದಲ್ಲಿ ಇಡೀ ಶಿವಮೊಗ್ಗ ಜಿಲ್ಲೆಯಲ್ಲಿ ಯಾವ ಗ್ರಾಮ ಪಂಚಾಯಿತಿಯಲ್ಲು ಸೇರದಿರುವಷ್ಟು ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಸೇರಿದ್ದು ವಿಶೇಷವಾಗಿತ್ತು,


ಕಾರ್ಯಕ್ರಮದ ವೇಳೆಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶೈಲಾ ಅವರು ಭೇಟಿ ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.


ಇಂದು ಅಣ್ಣ ತಂಗಿಯರ ಬಾಂಧವ್ಯ ಬೆಸೆಯುವ ರಕ್ಷಾ ಬಂಧನ ದಿನವಾಗಿದ್ದು,
ಈ ದಿನವೇ ಗೃಹ ಲಕ್ಷ್ಮೀ ಯೋಜನೆಗೆ ಚಾಲನೆ ದೊರಕಿರುವುದರಿಂದ,
ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಬಂಡೆ ವೆಂಕಟೇಶ್ ಅವರ ಪರಿಕಲ್ಪನೆಯಲ್ಲಿ ಗ್ರಾಮ ಪಂಚಾಯಿತಿಯಲ್ಲಿ ರಕ್ಷಾ ಬಂಧನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ವಿಶೇಷವಾಗಿತ್ತು.


ಗ್ರಾಮ ಪಂಚಾಯಿತಿಯ ಸಿಬ್ಬಂದಿಗಳು, ಅಂಗನವಾಡಿ ಆಶಾ ಕಾರ್ಯಕರ್ತೆಯರು ಎಲ್ಲರಿಗೂ ರಾಕಿ ಕಟ್ಟಿ ಸಂಭ್ರಮಿಸಿದರು.
ಈ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಶ್ರೀಮತಿ ಅನಿತಾ ಪ್ರವೀಣ್, ಸದಸ್ಯರುಗಳಾದ ಗೋಪಾಲ ಪೂಜಾರಿ, ಹೊರಬೈಲು ಪ್ರಭಾಕರ, ಆನಂದ,ನಿಶ್ಚಲ್ ಜಾದುಗಾರ್,ಭವ್ಯ,
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಮೇಶ್,
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ಚಂದ್ರಿಕಾ,
ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಗೀತಾ ರಾಘವೇಂದ್ರ,
ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ ಸೇರಿದಂತೆ
ಅನೇಕ ಮಂದಿ ಉಪಸ್ಥಿತರಿದ್ದರು.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...