Home ರಾಜ್ಯಶಿವಮೊಗ್ಗ ಡಿಸಿಸಿ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಅಕ್ರಮ… ತನಿಖೆಗೆ ರಾಜ್ಯ ಸರ್ಕಾರ ಅಸ್ತು.

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಅಕ್ರಮ… ತನಿಖೆಗೆ ರಾಜ್ಯ ಸರ್ಕಾರ ಅಸ್ತು.

by Reporter Smg
0 comments

ಶಿವಮೊಗ್ಗ : ಡಿಸಿಸಿ ಬ್ಯಾಂಕ್ ನ ಸಿಬ್ಬಂದಿ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು ಇದರ ಸಂಬಂಧ ಸಚಿವ ಶಾಸಕರು ಜನಪ್ರತಿನಿಧಿಗಳಿಂದ ಹಾಗು ಸಿಬ್ಬಂದಿಗಳಿಂದಲೂ ಸಹ ಸಾಲು ಸಾಲು ದೂರಿನ ಪತ್ರಗಳು ರಾಜ್ಯ ಸರ್ಕಾರದ ಬಾಗಿಲು ತಟ್ಟಿದ್ದವು.

ಡಿಸಿಸಿ ಬ್ಯಾಂಕ್ ನ ವಿರುದ್ಧ ಕೇಳಿ ಬಂದ ದೂರನ್ನು ರಾಜ್ಯ ಸರ್ಕಾರ ಪುರಸ್ಕರಿಸಿದ್ದು ತನಿಖೆ ಮಾಡಲು ಆದೇಶ ನೀಡಿದೆ.

ದೂರಿನಲ್ಲಿರುವ ಅಂಶಗಳು.

ಈ ಹಿಂದೆ ಇದ್ದಂತಹ ಡಿಸಿಸಿ ಬ್ಯಾಂಕಿನ ಅಧ್ಯಕ್ಷರು, ನಿರ್ದೇಶಕರು, ವ್ಯವಸ್ಥಾಪಕರ ನಿರ್ದೇಶಕರುಗಳ ವಿರುದ್ಧ ಅವ್ಯವಹಾರದ ಆರೋಪ ಕೇಳಿ ಬಂದಿದ್ದು ದೂರಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಬೆಂಗಳೂರು ನಗರ ಜಿಲ್ಲೆಯ 4ನೇ ವಲಯ ಸಹಕಾರ ಸಂಘಗಳ ಉಪ ನಿಬಂಧಕರಾದ ಶಶಿಧರ್.ಪಿ ಹಾಗು ದಾವಣಗೆರೆ ಜಿಲ್ಲೆಯ ಲೆಕ್ಕ ಪರಿಶೋಧನ ಇಲಾಖೆ ಮತ್ತು ಸಹಕಾರ ಸಂಘಗಳ ಜಂಟಿ ನಿರ್ದೇಶಕರಾದ ಮಹೇಶ್ವರ ಇವರನ್ನು ತನಿಖಾಧಿಕಾರಿಗಳನ್ನಾಗಿ ನೇಮಿಸಿ 15ದಿನದ ಒಳಗಾಗಿ ರಾಜ್ಯ ಸರ್ಕಾರಕ್ಕೆ ವರದಿ ನೀಡಲು ಸೂಚಿಸಲಾಗಿದೆ.

ವರದಿ – ವಿನಯ್ ಕುಮಾರ್ ಹೆಚ್.ಎಮ್

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...