Home ರಾಜ್ಯಮುಖ್ಯಮಂತ್ರಿಗಳು ಹೊರಡಿಸಿದ ಆದೇಶವನ್ನು ಸ್ವತಃ ಮುಖ್ಯಮಂತ್ರಿಗಳೇ ಉಲ್ಲಂಘನೆ ಮಾಡಿದ್ದಾರೆ… ಏನಿದು ಪ್ರಕರಣ…

ಮುಖ್ಯಮಂತ್ರಿಗಳು ಹೊರಡಿಸಿದ ಆದೇಶವನ್ನು ಸ್ವತಃ ಮುಖ್ಯಮಂತ್ರಿಗಳೇ ಉಲ್ಲಂಘನೆ ಮಾಡಿದ್ದಾರೆ… ಏನಿದು ಪ್ರಕರಣ…

by EDITOR NEWS WARRIORS

ಬೆಂಗಳೂರು>ಸೆಪ್ಟೆಂಬರ್> 5: ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಮಹತ್ವದ ಆದೇಶವನ್ನು ನೀಡಿದ ಬಸವರಾಜ್ ಬೊಮ್ಮಾಯಿ ತಾವು ನೀಡಿದ ಆದೇಶವನ್ನು ಸ್ವತಃ ತಾವೇ ಉಲ್ಲಂಘನೆ ಮಾಡಿದ್ದಾರೆ,

ಏನಿದು ಆದೇಶ?

ಸಭೆ-ಸಮಾರಂಭಗಳಲ್ಲಿ, ಸರ್ಕಾರಿ ಕಾರ್ಯಕ್ರಮಗಳಲ್ಲಿ,ಹಾರ,ತುರಾಯಿ, ದುಬಾರಿ ವೆಚ್ಚದ ಉಡುಗೊರೆಗಳನ್ನು ನೀಡುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದರು. ಇದೀಗ ತಾವು ಹೊರಡಿಸಿದ ಆದೇಶವನ್ನು ಸ್ವತಃ ತಾವೇ ಉಲ್ಲಂಘಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಆದೇಶವನ್ನು ಉಲ್ಲಂಘನೆ ಮಾಡಿದರು.


ಸರ್ಕಾರದ ವಿವಿಧ ಇಲಾಖೆಗಳು ಹಾಗೂ ಸಂಸ್ಥೆಗಳ ಕಾರ್ಯಕ್ರಮಗಳಲ್ಲಿ ಹಾರ, ತುರಾಯಿ, ದುಬಾರಿ ಬೆಲೆಯ ಉಡುಗೊರೆ ನೀಡುವುದನ್ನು ನಿಷೇಧಿಸಿ ಮುಖ್ಯಮಂತ್ರಿಯವರು ಕೆಲ ದಿನಗಳ ಹಿಂದೆ ಆದೇಶ ಹೊರಡಿಸಿದ್ದರು. ಹಾರ, ತುರಾಯಿ ಬದಲಿಗೆ ಪುಸ್ತಕಗಳನ್ನು ಉಡುಗೊರೆಯಾಗಿ ನೀಡಬೇಕು ಎಂದು ಆದೇಶ ಹೊರಡಿಸಿದ್ದರು.

ಭಾನುವಾರ ನಡೆದ ‘ಮುಖ್ಯಮಂತ್ರಿಗಳ ರೈತ ವಿದ್ಯಾ ನಿಧಿ’ ಉದ್ಘಾಟನಾ ಸಮಾರಂಭದಲ್ಲಿ ಸ್ವತಃ ಮುಖ್ಯಮಂತ್ರಿಯವರೇ ರೇಷ್ಮೆ ಗೂಡುಗಳಿಂದ ತಯಾರಾದ ಬೃಹತ್ ಹಾರ, ಮೈಸೂರು ಪೇಟ, ಶಾಲು ಮತ್ತು ಬೆಳ್ಳಿಯ ಸ್ಮರಣಿಕೆಯೊಂದಿಗೆ ಸನ್ಮಾನಿತರಾದರು. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮತ್ತು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರನ್ನೂ ಇದೇ ರೀತಿ ಸನ್ಮಾನಿಸಲಾಯಿತು.

ಕೃಷಿ ಸಚಿವ ಬಿ.ಸಿ. ಪಾಟೀಲ ಮತ್ತು ತೋಟಗಾರಿಕೆ ಸಚಿವ ಮುನಿರತ್ನ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಅವರು ಎಲ್ಲರನ್ನೂ ಸನ್ಮಾನಿಸಿದರು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಸಂಸದರಾದ ಮುನಿಸ್ವಾಮಿ, ಡಾ.ಉಮೇಶ್ ಜಾಧವ್, ಈರಣ್ಣ ಕಡಾಡಿ ವೇದಿಕೆಯಲ್ಲಿದ್ದರು.

ಒಂದು ವೇಳೆ ಯಾವುದಾದರೂ ಅಧಿಕಾರಿಗಳು ಇಂಥ ಆದೇಶವನ್ನು ಉಲ್ಲಂಘನೆ ಮಾಡಿದರೆ ಅಂತಹ ಅಧಿಕಾರಿಗಳ ವಿರುದ್ಧ ಶಿಕ್ಷೆ ಆಗುತ್ತಿತ್ತು. ಆದರೆ ಸ್ವತಃ ಮುಖ್ಯಮಂತ್ರಿಗಳೇ ಉಲ್ಲಂಘನೆ ಮಾಡಿರುವುದರಿಂದ ಶಿಕ್ಷೆಗಿಂತ ಹೆಚ್ಚಾಗಿ ಇನ್ನೊಬ್ಬರು ಇತರ ಮಾಡುವ ಸಾಧ್ಯತೆ ಹೆಚ್ಚಾಗಿದೆ. ಇನ್ನುಮುಂದಾದರೂ ಸೂಕ್ಷ್ಮತೆಯಿಂದ ಇದ್ದರೆ ಒಳಿತು.ಇಲ್ಲವಾದರೆ ತಾವು ವಿಧಿಸಿರುವ ಆದೇಶಕ್ಕೆ ಕಿಮ್ಮತ್ತು ಇರುವುದಿಲ್ಲ.

ವರದಿ… ರಘುರಾಜ್ ಹೆಚ್. ಕೆ…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!