Home ರಾಜ್ಯರಾಜ್ಯ ಸರ್ಕಾರ ರೈತರ ಮನಸ್ಥಿತಿಯನ್ನು ಹಾಳು ಮಾಡುತ್ತಿದೆ- ಸಂಸದ ಬಿ.ವೈ ರಾಘವೇಂದ್ರ.

ರಾಜ್ಯ ಸರ್ಕಾರ ರೈತರ ಮನಸ್ಥಿತಿಯನ್ನು ಹಾಳು ಮಾಡುತ್ತಿದೆ- ಸಂಸದ ಬಿ.ವೈ ರಾಘವೇಂದ್ರ.

by Reporter Smg
0 comments

ಶಿವಮೊಗ್ಗ: ರೈತರು ಪರಿಹಾರಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿಕೆ ನೀಡಿರುವ ಸಚಿವ ಶಿವಾನಂದ ಪಾಟೀಲ್ ಹಾಗು ರಾಜ್ಯ ಸರ್ಕಾರದ ವಿರುದ್ಧ ಸಂಸದ ಬಿ.ವೈ ರಾಘವೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಸದರು  ರಾಜ್ಯ ಸರ್ಕಾರದ ಸಚಿವರುಗಳಿಗೆ ಅಧಿಕಾರದ ಮದವೇರಿದೆ ಹಾಗಾಗಿ ರೈತರ ಬಗ್ಗೆ ಬಹಳ ಕೀಳಾಗಿ ಮಾತನಾಡುತ್ತಾರೆ, ರಾಜ್ಯ ಸರ್ಕಾರ ರೈತರ ಮನಸ್ಥಿತಿ ಹಾಳು ಮಾಡುವ ಕೆಲಸ ಮಾಡುತ್ತಿದೆ ಅನ್ನದಾತನ ಬಗ್ಗೆ ಆಡುತ್ತಿರುವ ಮಾತುಗಳನ್ನು ರಾಜ್ಯದ ಜನ ನೋಡುತ್ತಿದ್ದಾರೆ ಎಂದರು.

ಭಾರತ ಪದ ಬಳಕೆ ಬಗ್ಗೆ ಸಮರ್ಥನೆ.

ಜಿ20 ಶೃಂಗಸಭೆಗೆ ಸಂಧರ್ಭದಲ್ಲಿ  ಅತಿಥಿಗಳನ್ನು ರಾಷ್ಟ್ರಪತಿಗಳು ಔತಣ ಕೂಟಕ್ಕೆ ಆಹ್ವಾನಿಸಿದ್ದಾರೆ. ಆಹ್ವಾನ ಪತ್ರಿಕೆಯಲ್ಲಿ ಪ್ರೆಸಿಡೆಂಟ್ ಆಫ್ ಭಾರತ್ ಎಂದು ಉಲ್ಲೇಖಿಸಲಾಗಿದೆ.

ಭಾರತ್ ಎಂಬ ಪದದ ಬಳಕೆ ಬಗ್ಗೆ ಐ.ಎನ್.ಡಿ.ಐ.ಎ ಒಕ್ಕೂಟದ ನಾಯಕರುಗಳು ಬಿಜೆಪಿ ಹೆದರಿದೆ ಎಂದು ಹೇಳಿಕೆ ನೀಡಲಾರಂಭಿಸಿದ್ದರು.

ಈ ಕುರಿತು ಪ್ರತಿಕ್ರಿಯೆ ನೀಡಿದ ಸಂಸದ ಬಿ.ವೈ ರಾಘವೇಂದ್ರ ಔತಣ ಕೂಟದ ಆಮಂತ್ರಣ ಪತ್ರಿಕೆಯಲ್ಲಿ ಭಾರತ್ ಎಂಬ ಪದ ಬಳಕೆ ಮಾಡಿರುವ ಬಗ್ಗೆ ವಿಶೇಷ ಏನಿಲ್ಲ ಇದು ಸಾಮಾನ್ಯ ವಿಚಾರ, ಇದರಿಂದ ಐ.ಎನ್.ಡಿ.ಐ.ಎ ಸದಸ್ಯರು ಗಾಬರಿಯಾಗಿದ್ದಾರೆ. ಮೋದಿಯವರ ನೇತೃತ್ವದಲ್ಲಿ ಬರುವ ಚುನಾವಣೆಯಲ್ಲಿ ಎಲ್ಲರನ್ನು ಎದುರಿಸುವಲ್ಲಿ ಯಶಸ್ವಿಯಾಗುತ್ತೇವೆ ಎಂದರು.

ವರದಿ – ವಿನಯ್ ಕುಮಾರ್ ಹೆಚ್.ಎಮ್

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...