Home ರಾಜ್ಯದೇಶದಲ್ಲಿ ಕಾಂಗ್ರೆಸ್  ವಿರೋಧಿ ಅಲೆ ಇದೆ – ಕೆ.ಎಸ್ ಈಶ್ವರಪ್ಪ.

ದೇಶದಲ್ಲಿ ಕಾಂಗ್ರೆಸ್  ವಿರೋಧಿ ಅಲೆ ಇದೆ – ಕೆ.ಎಸ್ ಈಶ್ವರಪ್ಪ.

by Reporter Smg
0 comments

ದೇಶವನ್ನು ಉಳಿಸಲಿಕ್ಕೋಸ್ಕರ ಜೆಡಿಎಸ್ ಬಿಜೆಪಿ ಒಂದಾಗಿದೆ.
ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಗೆ ಒಂದೇ ಒಂದು ಸ್ಥಾನ ಸಿಗಬಾರದೆಂದು ತೀರ್ಮಾನ ಮಾಡಿ ಕಾಂಗ್ರೆಸ್ ವೀರೋಧಿ ಮತಗಳೆಲ್ಲಾ ಒಂದಾಗಿದೆ. ಹಾಗೆ ಜೆಡಿಎಸ್ ಬಿಜೆಪಿ ಒಂದಾಗಿದೆ.
ರಾಜ್ಯದಲ್ಲಿ 28ಸೀಟು ಗೆಲ್ಲುತ್ತೇವೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು.

ಮಾಜಿ ಶಾಸಕ ಸುಕುಮಾರ ಶೆಟ್ಟಿ ಪಕ್ಷ ಬಿಟ್ಟ ಬಗ್ಗೆ

ಸೀಟು ಕೊಡಲಿಲ್ಲ ಅಂತ ಪಕ್ಷ ಬಿಟ್ಟು ಹೋದರು, ಪಕ್ಷ ಬಿಟ್ಟು ಹೋದ ಜಗದೀಶ್ ಶೆಟ್ಟರ್ ಏನಾಗಿದ್ದಾರೆ, ಬಕೆಟ್ ಹಿಡಿದುಕೊಂಡವರಿಗೆ ಪಕ್ಷದಲ್ಲಿ ಅವಕಾಶ ಎಂದು ಹೇಳಿದ್ದಾರೆ ಶೆಟ್ಟರ್ ಸಿಎಮ್ ಆಗಲು ಯಾವ ಬಕೆಟ್ ಹಿಡಿದ್ದಿದ್ದರು. ಸೀಟು ಕೊಟ್ಟರೆ ಪಕ್ಷ ಒಳ್ಳೆದು ಇಲ್ಲದಿದ್ದರೆ ಬಕೆಟ್ ಪಕ್ಷನಾ.
ಬಿಜೆಪಿಯಲ್ಲಿ ಕೋಟ್ಯಂತರ ಕಾರ್ಯಕರ್ತರಿದ್ದಾರೆ ಎಲ್ಲರಿಗೂ ಟಿಕೆಟ್ ಕೊಡಲು ಆಗುತ್ತ.

ರೈತರ ಆತ್ಮಹತ್ಯೆ ವಿಚಾರ.


ರಾಜ್ಯದಲ್ಲಿ ಸರ್ಕಾರವೇ ಇಲ್ಲ ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಪರಿಹಾರ ಕೊಡಿ ಎಂದು ಕೇಳಿದ್ದಾರೆ ಆತ್ಮಹತ್ಯೆ ಮಾಡಿಕೊಂಡ ರೈತರು ಬೇರೆ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಕೆಲವರು ಲವ್ ವಿಚಾರವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಒಬ್ಬ ಮಂತ್ರಿ ಹೇಳುವುದನ್ನು ನಾನು ಎಂದು ಕೇಳಿರಲಿಲ್ಲ. ರಾಜ್ಯದಲ್ಲಿ 139ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರ್ಕಾರದ ಯಾವ ಮಂತ್ರಿಕೂಡ ರಾಜ್ಯ ಪ್ರವಾಸ ಮಾಡುತ್ತಿಲ್ಲ ಯಾವ ಮಂತ್ರಿಯೂ ಸಹ ರೈತರ ಮನೆಗೆ ತೆರಳಿ ರೈತರ ಕಷ್ಟ ಕೇಳುತ್ತಿಲ್ಲ. ಕಾಂಗ್ರೆಸ್ ಸರ್ಕಾರದ ಪ್ರತಿ ಶಾಸಕ, ಮಂತ್ರಿ, ಉಪ ಮುಖ್ಯಮಂತ್ರಿ, ಮುಖ್ಯಮಂತ್ರಿಗೆ ರೈತರ ಶಾಪ ತಟ್ಟುತ್ತೆ . ರಾಜ್ಯ ಸರ್ಕಾರ ತಕ್ಷಣ ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಪರಿಹಾರ ಕೊಡಬೇಕು ಎಂದು ತಿಳಿಸಿದರು.

ವರದಿ – ವಿನಯ್ ಕುಮಾರ್ ಹೆಚ್.ಎಮ್

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...