Home ರಾಜ್ಯರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ,ಎಸ್ ಷಡಾಕ್ಷರಿ ವಿರುದ್ಧ ಸಿಡಿದೆದ್ದ ಪತ್ರಕರ್ತರು..!

ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ,ಎಸ್ ಷಡಾಕ್ಷರಿ ವಿರುದ್ಧ ಸಿಡಿದೆದ್ದ ಪತ್ರಕರ್ತರು..!

by EDITOR NEWS WARRIORS

ತುಮಕೂರು:ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಪತ್ರಕರ್ತರ ಮೇಲೆ ಹಲ್ಲೆ ನಡೆಸಿರುವ ಘಟನೆ ತುಮಕೂರಿನಲ್ಲಿ ನಡೆದಿದ್ದು. ರಾಜ್ಯಾಧ್ಯಕ್ಷನ ವಿರುದ್ಧ ಪತ್ರಕರ್ತರೆಲ್ಲಾ ಧರಣಿ ಕುಳಿತಿದ್ದು ಷಡಾಕ್ಷರಿ ಕ್ಷಮಾಪಣೆಯ ನಂತರ ಧರಣಿ ಅಂತ್ಯವಾಗಿದೆ.

ಏನಿದು ಘಟನೆ:

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಕ್ರೀಡಾಕೂಟವೊಂದು ಆಯೋಜಿಸಲಾಗಿತ್ತು.

ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಸರ್ಕಾರಿ ನೌಕರರ ಸಂಘದವತಿಯಿಂದ ಕ್ರೀಡಾಕೂಟವನ್ನ ಹಮ್ಮಿಕೊಳ್ಳಲಾಗಿತ್ತು. ಇಲ್ಲಿ ಕ್ರೀಡಾಕೂಟದ ಸಮವಸ್ತ್ರವನ್ನ ಕ್ರೀಡಾಪಟುಗಳಿಗೆ ಹಂಚಲಾಗಿತ್ತು. ಕ್ರೀಡಾಪಟುಗಳು ಸಮವಸ್ತ್ರದ ಸುತ್ತಳತೆ ಹೆಚ್ಚುಕಮ್ಮಿಯಾಗಿದ್ದನ್ನ ರಾಜ್ಯಾಧ್ಯಕ್ಷರ ಮುಂದೆ ಆಕ್ಷೇಪಿಸಿದ್ದರು.

ಈ ಆಕ್ಷೇಪಣೆಯನ್ನ ಚಿತ್ರೀಕರಿಸಲು ಮುಂದಾದ ಸುದ್ದಿವಾಹಿನಿಯ ಕ್ಯಾಮೆರಾಮನ್ ನ ಮೊಬೈಲ್ ಕಸಿದುಕೊಂಡು ನೆಲಕ್ಕೆ ಬೀಳಿಸಿದ ರಾಜ್ಯಾಧ್ಯಕ್ಷರು ಕ್ತಾಮರಾಮನ್ ಮೇಲೆ ಹಲ್ಲೆ ನಡೆಸಿದ್ದಾರೆ. ಇದು ಅಲ್ಲಿನ ಪತ್ರಕರ್ತರ ಕೆಂಗಣ್ಣಿಗೆ ಗುರಿಯಾಗಿದ್ದು. ಗಾಯಗೊಂಡ ಕ್ಯಾಮೆರಾಮನ್ ಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳಪೆ ಗುಣಮಟ್ಟದ ಟೀ ಶರ್ಟ್ ವಿತರಣೆ ಮಾಡಿ ಗೋಲ್ ಮಾಲ್ ಮಾಡಿರುವುದಾಗಿ ಕ್ರೀಡಾಪಟುಗಳು ಆರೋಪ ಮಾಡಿದ್ದಾರೆ. ಕ್ರೀಡಾಕೂಟಕ್ಕೆ ಆರು ತಿಂಗಳ ಹಿಂದೆಯೇ ಸಂಘ ರಿಜಿಸ್ಟ್ರೇಷನ್ ಮಾಡಿಸಿಕೊಂಡಿತ್ತು.

ಆದ್ರೆ ಸರಿಯಾದ ಸೈಜ್ ಗಳ ಟೀ ಶರ್ಟ್ ಕೊಡುವಲ್ಲಿ ವಿಫಲವಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ರೊಚ್ಚಿಗೆದ್ದ ಕ್ರೀಡಾಪಟುಗಳಿಂದ ಆಕ್ರೋಶ ವ್ಯಕ್ತಪಡಿಸಿದ್ದಾರೆ .

ಇದನ್ನು ಚಿತ್ರೀಕರಿಸುತ್ತಿದ್ದ ಮಾಧ್ಯಮದವರ ಮೇಲೆ ರಾಜ್ಯಧ್ಯಕ್ಷ ಷಡಕ್ಷರಿ ಹಲ್ಲೆ ನಡೆಸಿದ್ದು ನಂತರ ತಪ್ಪಿನ ಅರಿವಾದ ಷಡಾಕ್ಷರಿ ಬಹಿರಂಗವಾಗಿ ಕ್ಷಮಾಪಣೆ ಹೇಳಿದ್ದಾರೆ.

ರಘುರಾಜ್ ಹೆಚ್‌. ಕೆ.9449553305.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!